AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ
ನೈಋತ್ಯ ರೈಲ್ವೆ
TV9 Web
| Edited By: |

Updated on:Oct 13, 2021 | 10:14 AM

Share

ಹುಬ್ಬಳ್ಳಿ: ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ನೈಋತ್ಯ ರೈಲ್ವೆ ಈಗ ಮತ್ತಷ್ಟು ಆಧುನೀಕರಣದತ್ತ ಚಿಂತನೆ ನಡೆಸಿದ್ದು, ಈ ಚಿಂತನೆ ಪ್ರಯಾಣಿಕರ ಚಿಂತೆಯನ್ನು ದೂರ ಮಾಡಲಿದೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ನೈಋತ್ಯ ರೈಲ್ವೆಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟು ದಿನ ಡಿಸೇಲ್ ಮೂಲಕ ಚಲಿಸುತ್ತಿದ್ದ ರೈಲು ಇನ್ನು ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆ ಆಗುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

ಈಗಾಗಲೇ ಕೊವಿಡ್ ಸಂದರ್ಭದಲ್ಲಿ ಕೊವಿಡ್ ಎಕ್ಸ್‌ಪ್ರೆಸ್‌, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹಾಗೂ ಹಲವಾರು ಯೋಜನೆ ಮತ್ತು ಜನಪರ ಕಾರ್ಯದ ಮೂಲಕ ಜನರಿಗೆ ಉತ್ಕೃಷ್ಟ ಮಟ್ಟದ ಸಾರಿಗೆ ಸೇವೆಯನ್ನು ನೀಡುತ್ತ ಬಂದಿರುವ ರೈಲ್ವೆ 2023ರ ಹೊತ್ತಿಗೆ ಜೀರೋ ಕಾರ್ಬನ್ ಎಮಿಟರ್ ಚಿಂತನೆಯನ್ನು ನಡೆಸಿದ್ದು, ಪರಿಸರ ಸಂರಕ್ಷಣೆ ಬಹುದೊಡ್ಡ ಹೊಣೆಯನ್ನು ನೈಋತ್ಯ ರೈಲ್ವೆ ಹೊಂದಿದೆ. ಅದಕ್ಕೆ ತಕ್ಕನಾಗಿ ಕಾರ್ಯವೈಖರಿಯನ್ನು ಮೈಗೂಡಿಸಿಕೊಂಡಿದೆ.

2030ರ ಹೊತ್ತಿಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು, 2023ರ ಹೊತ್ತಿಗೆ ನಮ್ಮ ವಿಭಾಗ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ರೈಲುಗಳು ಸಿದ್ಧವಾಗುತ್ತಿವೆ. ಅಲ್ಲದೇ ಎಲೆಕ್ಟ್ರಿಕ್ ಕಾಮಗಾರಿ ಕೂಡ ಪೂರ್ಣಗೊಳ್ಳುವ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಕೂಡಲೇ ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡು ಭಾರತೀಯ ರೈಲ್ವೆಯ ಪರಿಸರ ಸಂರಕ್ಷಣೆ ಕನಸು ನನಸಾಗಲಿ ಎಂಬುವುದು ನಮ್ಮ ಆಶಯ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ: ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 9:55 am, Wed, 13 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್