AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಏಕಾದಶಿ ಪ್ರಯುಕ್ತ ಎರಡು ವಿಶೇಷ ರೈಲು: ಇಲ್ಲಿದೆ ಸಂಚಾರ ವೇಳಾಪಟ್ಟಿ

ಪಂಡರಪುರ ಆಷಾಢ ಏಕಾದಶಿ ಜಾತ್ರೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆಯು ಎರಡು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಪಂಡರಪುರಕ್ಕೆ ವಿಸ್ತರಿಸಿದೆ. ಜೊತೆಗೆ, ಎರಡು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಈ ವಿಸ್ತರಣೆಯಿಂದ ಭಕ್ತರಿಗೆ ಹೆಚ್ಚು ಅನುಕೂಲವಾಗಲಿದೆ. ಹಾಗಿದ್ದರೆ ಯಾವ್ಯಾವ ರೈಲುಗಳನ್ನು ವಿಸ್ತರಣೆ ಮಾಡಲಾಗಿದೆ? ರೈಲು ಹೊರಡುವ ದಿನಾಂಕ ಮತ್ತು ಸಮಯದ ಮಾಹಿತಿ ಇಲ್ಲಿದೆ.

ಆಷಾಢ ಏಕಾದಶಿ ಪ್ರಯುಕ್ತ ಎರಡು ವಿಶೇಷ ರೈಲು: ಇಲ್ಲಿದೆ ಸಂಚಾರ ವೇಳಾಪಟ್ಟಿ
ರೈಲು-ಸಾಂದರ್ಭಿಕ ಚಿತ್ರImage Credit source: Business Standard
ವಿವೇಕ ಬಿರಾದಾರ
|

Updated on: Jun 27, 2025 | 5:43 PM

Share

ಹುಬ್ಬಳ್ಳಿ, ಜೂನ್​ 27: ಆಷಾಢ ಏಕಾದಶಿಯಂದು (Ashada Ekadashi) ಪಂಡರಪುರಕ್ಕೆ (Pandharpur) ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯದಿಂದ ಭಕ್ತರು ತೆರಳುತ್ತಾರೆ. ಆಷಾಢ ಏಕಾದಶಿಯಂದು ಪಂಡರಪುರ ವಿಠ್ಠಲ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು (South Western Railway) ಎರಡು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಪಂಡರಪುರದವರೆಗೆ ವಿಸ್ತರಿಸಿದೆ ಹಾಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಯಾವ್ಯವ ರೈಲು ವಿಸ್ತರಣೆ ಇಲ್ಲಿದೆ ವಿವರ

ರೈಲು ಸಂಖ್ಯೆ 17334 ಕ್ಯಾಸಲ್ ರಾಕ್ – ಮೀರಜ್ ಎಕ್ಸ್‌ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಪಂಡರಪುರದವರೆಗೆ ವಿಸ್ತರಿಸಲಾಗಿದೆ. ಈ ರೈಲು ಜುಲೈ 4 ರಿಂದ ಜುಲೈ 9 ರವರೆಗೆ ಕ್ಯಾಸಲ್ ರಾಕ್ ಮತ್ತು ಪಂಡರಪುರದ ನಡುವೆ ಸಂಚರಿಸಲಿದೆ. ಕ್ಯಾಸಲ್ ರಾಕ್‌ನಿಂದ ವಿಜಯನಗರದವರೆಗಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಿಸ್ತ್ರತ ಮಾರ್ಗದಲ್ಲಿ, ರೈಲು ಮೀರಜ್‌ಗೆ ಮಧ್ಯರಾತ್ರಿ 12:20 ಕ್ಕೆ ಆಗಮಿಸಿ, 12:50 ಕ್ಕೆ ಹೊರಟು, ಬೆಳಗಿನ ಜಾವ 03:00 ಕ್ಕೆ ಪಂಡರಪುರ ತಲುಪಲಿದೆ.

ಇದನ್ನೂ ಓದಿ
Image
ಜೋಹ್ರಾನ್ ಮಮ್ದಾನಿ ವಿರುದ್ಧ ಕಾಂಗ್ರೆಸ್, ಬಿಜೆಪಿ ವಾಗ್ದಾಳಿ
Image
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
Image
ಕಾಜಿಪೇಟೆ ರೈಲು ಉತ್ಪಾದನಾ ಘಟಕದಲ್ಲಿ MEMU ರೈಲುಗಳ ತಯಾರಿ
Image
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ

ಅದೇ ರೀತಿ, ರೈಲು ಸಂಖ್ಯೆ 17331 ಮೀರಜ್ – ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲನ್ನು ಮೀರಜ್ ಬದಲು ಪಂಡರಪುರದಿಂದ ಹೊರಡುವಂತೆ ತಾತ್ಕಾಲಿಕವಾಗಿ ವಿಸ್ತರಿಸಲಾಗಿದೆ. ಈ ರೈಲು ಜುಲೈ 5 ರಿಂದ ಜುಲೈ 10 ರವರೆಗೆ ಪಂಡರಪುರದಿಂದ ಎಸ್‌ಎಸ್ಎಸ್ ಹುಬ್ಬಳ್ಳಿಗೆ ಸಂಚರಿಸಲಿದೆ. ಈ ರೈಲು ಪಂಡರಪುರದಿಂದ ಬೆಳಗಿನ ಜಾವ 04:00 ಕ್ಕೆ ಹೊರಟು, 06:45 ಕ್ಕೆ ಮೀರಜ್ ತಲುಪಿ, 07:15 ಕ್ಕೆ ಅಲ್ಲಿಂದ ಹೊರಡಲಿದೆ. ವಿಜಯನಗರದಿಂದ ಹುಬ್ಬಳ್ಳಿಯವರೆಗಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ವಿಶೇಷ ರೈಲು

ರೈಲು ಸಂಖ್ಯೆ 07313/07314 ಎಸ್ಎಸ್‌ಎಸ್ ಹುಬ್ಬಳ್ಳಿ-ಪಂಡರಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲುಗಳು ಜುಲೈ 1, 2025 ರಿಂದ ಜುಲೈ 8, 2025 ರವರೆಗೆ (04.07.2025 ಹೊರತುಪಡಿಸಿ) ಪ್ರತಿ ದಿಕ್ಕಿನಲ್ಲಿ ಏಳು ಟ್ರಿಪ್‌ಗಳನ್ನು ಸಂಚರಿಸಲಿವೆ.

ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಪಂಡರಪುರ ಕಾಯ್ದಿರಿಸದ ವಿಶೇಷ ರೈಲು ಹುಬ್ಬಳ್ಳಿಯಿಂದ ಬೆಳಿಗ್ಗೆ 05:10 ಗಂಟೆಗೆ ಹೊರಟು ಅದೇ ದಿನ ಸಂಜೆ 04:00 ಗಂಟೆಗೆ ಪಂಡರಪುರ ತಲುಪಲಿದೆ. ಇದು ಧಾರವಾಡ, ಅಳ್ಳಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ್ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್. ರಾಯಬಾಗ್. ಚೆಂಚಳಿ, ಕುಡಚಿ, ಉಗಾರ ಖುರ್ದ್, ಶೇಡಬಾಳ, ವಿಜಯನಗರ, ಮಿರಜ್, ಅರಗ, ಧಲಗಾಂವ, ಜತ್ ರೋಡ್, ವಾಸುದ, ಮತ್ತು ಸಂಗೋಲಾ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ರೈಲು ಸಂಖ್ಯೆ 07314 ಪಂಡರಪುರ-ಎಸ್‌ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು ಪಂಢರಪುರದಿಂದ ಸಂಜೆ 06:00 ಗಂಟೆಗೆ ಹೊರಟು ಮರುದಿನ ಬೆಳಿಗೆ, 04:00 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಹಿಂದಿನ ರೈಲು ನಿಲುಗಡೆ ಮಾಡಿದ ನಿಲ್ದಾಣಗಳಲ್ಲೇ ಹಿಮ್ಮುಖ ಕ್ರಮದಲ್ಲಿ ನಿಲುಗಡೆ ನೀಡಲಿದೆ.

ಇದನ್ನೂ ಓದಿ: ಪಿಂಕ್‌ ಲೈನ್ ಆರು ಸ್ಟೇಷನ್​​ಗಳಲ್ಲಿ ಈ ವರ್ಷವೇ ಮೆಟ್ರೋ ರೈಲು ಸಂಚಾರ

ಈ ವಿಶೇಷ ರೈಲು 10 ಬೋಗಿಗಳನ್ನು (8 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು/ಅಂಗವಿಕಲ ಬೋಗಿಗಳು) ಒಳಗೊಂಡಿರುತ್ತದೆ.

ಈ ವಿಶೇಷ ಸೇವೆಗಳು ಪ್ರಯಾಣಿಕರಿಗೆ, ವಿಶೇಷವಾಗಿ ಆಷಾಢ ಏಕಾದಶಿ ಉತ್ಸವಗಳಿಗಾಗಿ ಪಂಡರಪುರಕ್ಕೆ ತೆರಳುವ ವಾರಕರಿಗಳು ಮತ್ತು ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುವ ನಿರೀಕ್ಷೆಯಿದೆ 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!