AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಾತ್ಸಲ್ಯ ಯೋಜನೆ ವಿಷಯದಲ್ಲಿ ತಪ್ಪು ಸಂದೇಶ ರವಾನೆ; ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರೋ ಜನ

ಸಾಮಾಜಿಕ ಜಾಲತಾಣ ವಾಟ್ಸಾಪ್​ನ ಫಾರ್ವರ್ಡ್ ಮೆಸೇಜ್ ಹಾವಳಿಯಿಂದಾಗಿ ಇತ್ತೀಚೆಗೆ ಸತ್ಯ ಯಾವುದು, ಸುಳ್ಳು ಯಾವುದು ಎನ್ನುವುದು ತಿಳಿಯದಂತಾಗಿದೆ. ಅದರಲ್ಲಿಯೂ ಸರ್ಕಾರಿ ಯೋಜನೆಗಳ ವಿಷಯದಲ್ಲಂತೂ ಒಳ್ಳೆ ಸಂದೇಶ ವೈರಲ್ ಆಗುವ ಬದಲಿಗೆ ಗೊಂದಲ ಮೂಡಿಸೋ ಸಂದೇಶಗಳೇ ಈ ವಾಟ್ಸಾಪ್​ನಿಂದ ಹೆಚ್ಚು ವೈರಲ್ ಆಗುತ್ತಿರುತ್ತೆ. ಅಂತಹುದೇ ಒಂದು ಫಾರ್ವರ್ಡ್ ಮೆಸೇಜ್ ಈಗ ಸರ್ಕಾರದ ಮಹತ್ವದ ಯೋಜನೆಯೊಂದರ ವಿಷಯದಲ್ಲಿ ಗೊಂದಲ ಸೃಷ್ಟಿಸಿದೆ.

ಸರ್ಕಾರದ ವಾತ್ಸಲ್ಯ ಯೋಜನೆ ವಿಷಯದಲ್ಲಿ ತಪ್ಪು ಸಂದೇಶ ರವಾನೆ; ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರೋ ಜನ
ಸರ್ಕಾರದ ವಾತ್ಸಲ್ಯ ಯೋಜನೆ ವಿಷಯದಲ್ಲಿ ತಪ್ಪು ಸಂದೇಶ ರವಾನೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 20, 2024 | 9:05 PM

Share

ಧಾರವಾಡ, ಸೆ.20: ಧಾರವಾಡದ ಜಿಲ್ಲಾ ಮಕ್ಕಳ ರಕ್ಷಣಾ ಕಚೇರಿಯಲ್ಲಿ ರಾಜ್ಯ ಸರ್ಕಾರದ ವಾತ್ಸಲ್ಯ ಯೋಜನೆ (vatsalya scheme) ಗೆ ಸಂಬಂಧಿಸಿ ಫಾರ್ಮ್ ತುಂಬಲಾಗುತ್ತಿದೆ. ಈ ಯೋಜನೆಯ ಅನ್ವಯ ತಂದೆ-ತಾಯಿ ಇಲ್ಲದ ಮಕ್ಕಳು ಹಾಗೂ ತಂದೆ-ತಾಯಿ ಅನಾರೋಗ್ಯಕ್ಕೀಡಾಗಿದ್ದಲ್ಲಿ ಅಂತಹ ಮಕ್ಕಳ ಪೋಷಣೆಗಾಗಿ ಹಾಗೂ ಫೋಷಕರು ಇಲ್ಲದೇ ಇದ್ದರೂ ಅವರು ಸರ್ಕಾರದ ಪ್ರಾಯೋಜಕತ್ವದ ಹಣದಲ್ಲಿ ಜೈವಿಕ ಕುಟುಂಬದಲ್ಲಿ ಬೆಳೆಯಬೇಕು ಎನ್ನುವ ಉದ್ದೇಶದಿಂದ ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡುವ ಯೋಜನೆ ಇದಾಗಿದೆ. ಅಲ್ಲದೇ ಇದು ಹೊಸದಾಗಿ ಮಾಡಿರುವ ಯೋಜನೆಯೂ ಅಲ್ಲ. ಬದಲಿಗೆ ಇದೊಂದು ಚಾಲ್ತಿಯಲ್ಲಿರುವ ಯೋಜನೆ. ಆದರೆ, ಇದೊಂದು ಸ್ಕಾಲರ್ ಶಿಪ್ ಯೋಜನೆಯಾಗಿದ್ದು, ನಿಮ್ಮ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಡಿಸುತ್ತೇವೆ ಎಂದು ಕೆಲವರು ವಾಟ್ಸಾಪ್​ಗಳಲ್ಲಿ ಸಂದೇಶ ರವಾನಿಸುವ ಜೊತೆಗೆ ಅರ್ಜಿ ಫಾರ್ಮಗಳನ್ನು ಸಹ ಮಾರಾಟ ಮಾಡುವ ಮೂಲಕ ಜನರಿಗೆ ವಂಚಿಸುವ ಕಾರ್ಯ ನಡೆದಿದೆಯಂತೆ. ಹೀಗಾಗಿ ಯಾರೂ ಕೂಡ ಇದು ಸ್ಕಾಲರ್ ಶಿಪ್ ಎಂದು ನಂಬಬೇಡಿ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ಹೇಳುತ್ತಿದ್ದಾರೆ.

ಇನ್ನು ಈ ವಾಟ್ಸಾಪ್ ಸಂದೇಶವನ್ನೇ ನಂಬಿ ಅನೇಕರು ದೂರದ ಊರುಗಳಿಂದ ಜಿಲ್ಲಾಧಿಕಾರಿ ಕಚೇರಿಗೂ ಬರುತ್ತಿದ್ದಾರೆ.  ಅನೇಕರು ತಮಗೆ ವಾಟ್ಸಾಪ್​ನಲ್ಲಿ ಬಂದಿರುವ ಅರ್ಜಿ ಪ್ರತಿಯನ್ನೇ ಝೆರಾಕ್ಸ್ ಮಾಡಿಸಿಕೊಂಡು ಗ್ರಾಮ ಪಂಚಾಯತಿ, ಕಂದಾಯ ಇಲಾಖೆ ಕಚೇರಿಗಳಿಗೂ ಅಲೆದಾಡುತ್ತಿದ್ದಾರೆ. ಆದರೆ, ಸದ್ಯ ವೈರಲ್ ಆಗಿರುವ ಅರ್ಜಿ ನಮೂನೆಯ ಮೇಲೆ ಮಂಗಳೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹೆಸರಿನ ಮೊಹರು ಇದೆ. ಈ ಅರ್ಜಿ ನಮೂನೆಯನ್ನೇ ತೆಗೆದುಕೊಂಡು ಅನೇಕರು ಬರುತ್ತಿದ್ದಾರೆ. ಅಲ್ಲದೇ ಇದಕ್ಕಾಗಿ ಇರುವ ಮಾನದಂಡಗಳ ಬಗ್ಗೆಯೂ ಅನೇಕರಿಗೆ ಗೊತ್ತಿಲ್ಲ. ಹೀಗಾಗಿ ಎಷ್ಟೋ ಪೋಷಕರು ಅರ್ಜಿ ಸಲ್ಲಿಸೋಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರೆಗೂ ಬಂದು ವಾಪಸ್ ಹೋಗುವ ಸ್ಥಿತಿ ಉಂಟಾಗಿದೆ.

ಇದನ್ನೂ ಓದಿ:ಎನ್​ಪಿಎಸ್​-ವಾತ್ಸಲ್ಯ ಯೋಜನೆ ಎಂದರೇನು? ಇದರಿಂದ ಪೋಷಕರು, ಮಕ್ಕಳಿಗೇನು ಪ್ರಯೋಜನ

ಒಟ್ಟಾರೆಯಾಗಿ ಒಂದು ಒಳ್ಳೆಯ ಯೋಜನೆಯ ಪ್ರಯೋಜನ ಅರ್ಹರಿಗೆ ಆಗುತ್ತಿರುವ ಹೊತ್ತಿನಲ್ಲಿಯೇ ವಾಟ್ಸಾಪ್ ಫಾರ್ವರ್ಡ್ ತಜ್ಞರು ಇಡೀ ಯೋಜನೆಯ ಮೂಲ ಆಶಯವೇ ಹಾಳಾಗಿ ಹೋಗುವಂತೆ ಮಾಡುತ್ತಿದ್ದಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕಾದ ಅವಶ್ಯಕತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ