AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್: ಹೆದರಿ ಆತ್ಮಹತ್ಯೆಗೆ ಶರಣಾದ ರೈತ

ಇತ್ತೀಚೆಗೆ ಪೊಲೀಸ್ ವಿಚಾರಣೆ ಹಾಗು ಸುಳ್ಳು ಕೇಸಿಗೆ ಹೆದರಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚತ್ತಲೇ ಇವೆ. ಅದರಂತೆ ಹುಬ್ಬಳ್ಳಿಯ ರೈತನೋರ್ವ, ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತನ ಮೇಲೆ ಹಲ್ಲೆ ಮಾಡಿಲ್ಲದೇ ಆತನ ವಿರುದ್ಧವೇ ಪ್ರಕರಣ ದಾಖಲಿಸಿ ಇದೀಗ ಆತನ ಜೀವ ಬಲಿ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್: ಹೆದರಿ ಆತ್ಮಹತ್ಯೆಗೆ ಶರಣಾದ ರೈತ
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 07, 2026 | 7:39 PM

Share

ಹುಬ್ಬಳ್ಳಿ, (ಮಾರ್ಚ್ 07): ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್​​​ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ.

ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪನನ್ನು  ಕರೆಸಿ ಹಲ್ಲೆ‌ ಮಾಡಿದ್ದಾರೆ. ಸಾಲದಕ್ಕೆ ಪಂಚಾಯಿತಿ ಸದಸ್ಯರು, ನಿಂಗಪ್ಪ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು,  ಈ ಪ್ರಕರಣ ಸಂಬಂಧ ಪೊಲೀಸರು ಸಹ ಎರಡ್ಮೂರು ದಿನಗಳಿಂದ ನಿಂಗಪ್ಪನಿಗೆ ಕರೆ ಮಾಡಿ ಠಾಣೆಗೆ ವಿಚಾರಣೆ ಬರುವಂತೆ ಸೂಚಿಸಿದ್ದಾರೆ. ಇಂದು (ಮಾರ್ಚ್ 07) ಸಹ ಪೊಲಿಸರು, ನಿಮ್ಮ ಮೇಲೆ‌ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸ್ಟೆಷನ್​​ಗೆ ಬನ್ನಿ ಎಂದು ನಿಂಗಪ್ಪನಿಗೆ ಕರೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಮೊದಲೇ ಗ್ರಾಮ ಪಂಚಾಯಿತಿ ಪಂಚಾಯಿತಿ ಸದಸ್ಯರ ಹಲ್ಲೆಯಿಂದ ಮನನೊಂದಿದ್ದ ನಿಂಗಪ್ಪನಿಗೆ ಪೊಲೀಸರು ಸಹ ಮೇಲಿಂದ ಮೇಲೆ ಕರೆ ಮಾಡಿ ಠಾಣೆಗೆ ಬರುವಂತೆ ಒತ್ತಾಯಿಸಿದ್ದರಿಂದ ಭಯಗೊಂಡಿದ್ದು, ಕೊನೆಗೆ ದಿಕ್ಕುತೋಚದಂತಾಗಿ ಜಮೀನಿಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್ ದಾಖಲಿಸಿ ಇದೀಗ ಆತನನ್ನು ಬಲಿ ಪಡೆದುಕೊಂಡಿದ್ದಾರೆ. ಇದೀಗ ನಿಂಗಪ್ಪನ ಸಾವಿಗೆ ಹೊಣೆ ಯಾರು?  ಈ ರೀತಿಯ ಪ್ರಕರಣದಲ್ಲಿ ಪೊಲೀಸರು ಸಹ ತಮ್ಮ ವಿವೇಚನೆಯಿಂದ ಸರಿ ತಪ್ಪು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ