
ಹುಬ್ಬಳ್ಳಿ, (ಮಾರ್ಚ್ 07): ಅಟ್ರಾಸಿಟಿ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಕ್ಕೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ರಸ್ತೆ ವಿಚಾರವಾಗಿ ನಿಂಗಪ್ಪ ಗಲಾಟೆ ಮಾಡಿದ್ದು, ಈ ಸಂಬಂಧ ಗ್ರಾಮ ಪಂಚಾಯತಿ ಸದಸ್ಯರು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿ ನಿಂಗಪ್ಪ, ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ.
ರಸ್ತೆ ಸಂಬಂಧ ಉಮಚಗಿ ಗ್ರಾಮದಲ್ಲಿ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪ ನಡುವೆ ಗಲಾಟೆಯಾಗಿದೆ. ಬಳಿಕ ಪಂಚಾಯಿತಿ ಸದಸ್ಯರು, ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ನಿಂಗಪ್ಪಗೆ ಬೆದರಿಕೆ ಹಾಕಿದ್ದಾರೆ. ಬಳಿಕ ಅಟ್ರಾಸಿಟಿ ಕೇಸ್ ಹಾಕುತ್ತಾರೆಂದು ಹೆದರಿ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಮದು ತಿಳಿದುಬಂದಿದೆ.
ಇದನ್ನೂ ಓದಿ: 3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ
ಬಾಗಲಕೋಟೆ: ಯುವಕನೋರ್ವ ಜಂಬಗಿ ಸೇತುವೆಯಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದ ನಿವಾಸಿ ರಮೇಶ್ ಸೊರಗಾವಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆಯಷ್ಟೇ (ಮಾರ್ಚ್ 06) ಸೇತುವೆ ಬಳಿ ಯುವಕನ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದ, ಇದರ ಅನುಮಾನದ ಮೇಲೆ ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದಾಗ ಜಂಬಗಿ ಗ್ರಾಮದ ಬಳಿ ಶವ ಪತ್ತೆಯಾಗಿದೆ. ಆದ್ರೆ, ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
Published On - 7:39 pm, Sat, 7 March 26