AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubbli News: ಜಿಂಕೆಗಳಿಂದ ಬೆಳೆ ಉಳಿಸಿಕೊಳ್ಳಲು ಬಿಯರ್ ಬಾಟಲಿ ಮೊರೆ ಹೋದ ರೈತರು

ರೈತರು ತಾವು ಹಾಕಿದ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಳ್ಳಬೇಕೆಂದು ಬಿಯರ್ ಬಾಟಲಿ ಮೊರೆ ಹೋಗಿದ್ದಾರೆ. ಜಿಂಕೆಗಳಿಂದ ಬೆಳೆಗಳ ರಕ್ಷಣೆ ಮಾಡಲು ಜಮೀನುಗಳಲ್ಲಿ ಬಿಯರ್ ಬಾಟಲಿಗಳನ್ನು ಅಳವಡಿಸಿದ್ದಾರೆ.

Hubbli News: ಜಿಂಕೆಗಳಿಂದ ಬೆಳೆ ಉಳಿಸಿಕೊಳ್ಳಲು ಬಿಯರ್ ಬಾಟಲಿ ಮೊರೆ ಹೋದ ರೈತರು
ಬಿಯರ್ ಬಾಟಲಿ
ಶಿವಕುಮಾರ್ ಪತ್ತಾರ್
| Updated By: ಆಯೇಷಾ ಬಾನು|

Updated on: Jul 20, 2023 | 10:52 AM

Share

ಹುಬ್ಬಳ್ಳಿ, ಜುಲೈ 20: ಮುಂಗಾರು(Monsoon) ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರು(Farmers)  ತಾವು ಹಾಕಿದ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಳ್ಳಬೇಕೆಂದು ಬಿಯರ್ ಬಾಟಲಿ ಮೊರೆ ಹೋಗಿದ್ದಾರೆ. ಜಿಂಕೆಗಳಿಂದ(Deer) ಬೆಳೆಗಳ ರಕ್ಷಣೆ ಮಾಡಲು ಜಮೀನುಗಳಲ್ಲಿ ಬಿಯರ್ ಬಾಟಲಿಗಳನ್ನು(Bottles) ಅಳವಡಿಸಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಜಿಂಕೆಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ರೈತರು ತಮ್ಮ ಜಮೀನಿನಲ್ಲಿ ಬಿಯರ್ ಬಾಟಲಿಗಳನ್ನು ಅಳವಡಿಸಿ ಬೆಳೆ ರಕ್ಷಣಗೆ ಹೊಸ ತಂತ್ರದ ಮೊರೆ ಹೋಗಿದ್ದಾರೆ.

ಗುಡೇನಕಟ್ಟಿ, ಮುಳ್ಳೊಳ್ಳಿ, ಯರಗುಪ್ಪಿ, ಚಿಕ್ಕನರ್ತಿ, ಯರಿನಾರಯಣಪುರದಲ್ಲಿ ಜಿಂಕೆ ಹಾವಳಿ ಹೆಚ್ಚಾಗಿದೆ. ಜಿಂಕೆಗಳು ಹಿಂಡು ಹಿಂಡಾಗಿ ಬಂದು ದಾಳಿ ಮಾಡಿ ಬೆಳೆಗಳನ್ನು ನಾಶ ಮಾಡ್ತಿವೆ. ಶೇಂಗಾ, ಹೆಸರು, ಉದ್ದು, ಸೋಯಾಬಿನ್, ಮೆಣಸಿನಕಾಯಿ ಇತ್ಯಾದಿ ಬೆಳೆಗಳ ರಕ್ಷಣೆಗೆ ರೈತರು ಇನ್ನಿಲ್ಲದ ಸರ್ಕಸ್ ಮಾಡ್ತಿದ್ದಾರೆ. ಹಗಲು-ರಾತ್ರಿ ಜಿಂಕೆಗಳನ್ನು ಓಡಿಸಲಾಗದೆ ಅಸಹಾಯಕರಾಗಿದ್ದಾರೆ. ಸದ್ಯ ರೈತರು ಇದಕ್ಕೊಂದು ಉಪಾಯವೊಂದನ್ನು ಕಂಡುಕೊಂಡಿದ್ದು ಕುಡಿದು ಬಿಸಾಡಿದ ಬಿಯರ್ ಬಾಟಲಿಗಳನ್ನೇ ಜಿಂಕೆಗಳ ವಿರುದ್ಧ ಅಸ್ತ್ರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್: ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ

ಗಾಳಿಗೆ ಬಿಯರ್ ಬಾಟಲ್ ಒಂದಕ್ಕೊಂದು ತಾಗಿ ಜೋರಾದ ಸದ್ದು ಬರುತ್ತೆ. ಈ ಸದ್ದಿಗೆ ಬೆದರಿ ಜಿಂಕೆಗಳು ಓಡುತ್ತಿವೆ. ಸದ್ಯ ಬೆಳೆಗಳನ್ನು ರಕ್ಷಿಸಲು ಇದೊಂದು ಉಪಾಯ ಸಿಕ್ಕಿದ್ದು ಜಿಂಕೆಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಂಕೆಗಳನ್ನು ಹೊಲಗಳತ್ತ ಬಾರದಂತೆ ತಡೆಯಬೇಕು. ಕಾಡಿನತ್ತ ಜಿಂಕೆಗಳ ಹಿಂಡನ್ನು ಕೊಂಡೊಯ್ಯಬೇಕು. ಜಿಂಕೆಗಳ ಹಾವಳಿಯಿಂದ ಆದ ಬೆಳೆ ಹಾನಿಗೆ ಪರಿಹಾರ ಕಟ್ಟಿಕೊಡಲು ರೈತರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿದ್ದು ಇದರ ನಡುವೆ ಜಿಂಕೆಗಳ ಹಾವಳಿಯಿಂದ ಕಂಗಾಲಾಗಿದ್ದಾರೆ. ಅಲ್ಪ ಸಲ್ಪ ಬೆಳೆದ ಬೆಳೆಯನ್ನಾದರೂ ಉಳಿಸಿಕೊಳ್ಳಬೇಕೆಂದು ಹರಸಾಹಸಪಡುತ್ತಿದ್ದಾರೆ.

ಹುಬ್ಬಳ್ಳಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?