ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
Edited By: ಕಿರಣ್ ಹನುಮಂತ್​ ಮಾದಾರ್

Updated on: May 04, 2024 | 10:52 PM

ಧಾರವಾಡ, ಮೇ.04: ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ(Dingaleshwar Swamiji)ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಹೌದು, ಧಾರವಾಡ(Dharwad) ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಚುನಾಚಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ನವಲಗುಂದ ಮಾರ್ಕೆಟ್​ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಮಾತನಾಡಿದ್ದ ಸ್ವಾಮೀಜಿ, ‘ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:ದಿಂಗಾಲೇಶ್ವರ ಸ್ವಾಮೀಜಿ ಮೂಲಕ ಪ್ರಲ್ಹಾದ್ ಜೋಶಿ ವಿರುದ್ಧ ಯಾರು ಹೇಳಿಕೆ ನೀಡಿಸುತ್ತಿದ್ದಾರೆ ಅಂತ ಗೊತ್ತಿದೆ: ಬಸನಗೌಡ ಯತ್ನಾಳ್

ಇನ್ನು ಕಳೆದ ಏ.09ರಂದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ನೀಡುತ್ತಿರುವ ಕಾಮೆಂಟ್ ಗಳ ಬಗ್ಗೆ ಮಾತಾಡಿದ್ದ ಶಾಸಕ ಯತ್ನಾಳ್​, ‘ಅವರ ಮೂಲಕ ಯಾರು ಜೋಶಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿಸುತ್ತಿದ್ಧಾರೆ ಎಂದು ಚೆನ್ನಾಗಿ ಗೊತ್ತಿದೆ. ಆದರೆ, ದೇಶದ ಜನರಿಗೆ ನರೇಂದ್ರ ಮೋದಿಯವರು ಪುನಃ ಪ್ರಧಾನ ಮಂತ್ರಿ ಅಗುವುದು ಬೇಕಿದೆ. ಹಾಗಾಗಿ ಯಾರೇನೇ ಅಪಪ್ರಚಾರ ಮಾಡಿದರೂ ಜೋಶಿ ಗೆಲ್ಲುತ್ತಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 pm, Sat, 4 May 24

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us