AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಥಿನ್ನರ್ ತಂದ ಆಪತ್ತು; ಮಗ ಸಾವು, ತಂದೆ ಸ್ಥಿತಿ ಚಿಂತಾಜನಕ

ನೀವು ಮನೆಯಲ್ಲಿ ಬಣ್ಣಕ್ಕೆ ಹಾಕಲು ಬಳಸುವ ಥಿನ್ನರ್ ಬಾಟಲ್​ಗಳನ್ನು ಇಟ್ಟಿದ್ದೀರಾ? ಹಾಗಾದ್ರೆ ಈ ಸ್ಟೋರಿಯನ್ನು ಓದಲೇಬೇಕು. ಏಕೆಂದರೆ ಅಗ್ಗಿಷ್ಟಿಕೆಗೆ ಬೆಂಕಿ ಹಚ್ಚಲು ಥಿನ್ನರ್ ಬಳಸಿದ್ದರಿಂದ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು ಮತ್ತು ಬಾಲಕನ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದಾಗಿ ಮನೆಯಲ್ಲಿ ಅಪಾಯಕಾರಿ ವಸ್ತುಗಳನ್ನು ಬಳಸುವ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ.

ಧಾರವಾಡ: ಥಿನ್ನರ್ ತಂದ ಆಪತ್ತು; ಮಗ ಸಾವು, ತಂದೆ ಸ್ಥಿತಿ ಚಿಂತಾಜನಕ
ಮೃತ ಬಾಲಕ ಅಗಸ್ತ್ಯ, ಬಾಲಕನ ತಂದೆ ಚಂದ್ರಕಾಂತ್
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 16, 2025 | 5:53 PM

Share

ಹುಬ್ಬಳ್ಳಿ, ಆಗಸ್ಟ್​ 16: ಶುಕ್ರವಾರ ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿತ್ತು. ಆದರೆ, ಧಾರವಾಡದ (Dharawad) ಸಂತೋಷ ನಗರದಲ್ಲಿನ ಮನೆಯೊಂದರಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿತ್ತು. ಆಗಸ್ಟ್​ 15ರ ಮುಂಜಾನೆ 9.20ರ ಸುಮಾರಿಗೆ ಮನೆಯಲ್ಲಿ ಬೆಂಕಿ (Fire) ಹೊಂತಿಕೊಂಡಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ತಂದೆಯ ಸ್ಥಿತಿಯ ಚಿಂತಾಜನಕವಾಗಿದೆ. ಅಗಸ್ತ್ಯ ಮಾಶ್ಯಾಳ್ (4 ವರ್ಷ) ಮೃತ ಬಾಲಕ. ಬಾಲಕನ ತಂದೆ ಚಂದ್ರಕಾಂತ್ ಅವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಚಂದ್ರಕಾಂತ್ ಅವರು ಕಿಮ್ಸ್​ನ ಸುಟ್ಟಗಾಯ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ.

ಬೆಂಕಿ ಹೊತ್ತಿಕೊಂಡಿದ್ದು ಹೇಗೆ?

ಅಗಸ್ತ್ಯನ ತಾಯಿ ಕೆಲ ತಿಂಗಳ ಹಿಂದೆ ಎರಡನೇ ಮಗುವಿಗ ಜನ್ಮ ನೀಡಿದ್ದಾರೆ. ಹೀಗಾಗಿ, ಬಾಣಂತಿಗೆ ಬಿಸಿ ತಾಗಿಸಲು ಅಗ್ಗಿಷ್ಟಿಕೆಯನ್ನು ಬಳಸಲಾಗುತ್ತಿತ್ತು. ಅಗ್ಗಿಷ್ಟಿಕೆಗೆ ಬೆಂಕಿ ಹಂಚಲು ಬಾಲಕನ ಅಜ್ಜಿ ಪ್ರಯತ್ನಿಸುತ್ತಿದ್ದರು. ಆದರೆ, ನಿರಂತರ ಮಳೆಯಿಂದ ಅಗ್ಗಿಷ್ಟಿಕೆಯಲ್ಲಿದ್ದ ಕಟ್ಟಿಗೆ, ಬೆರಣಿ ಹಸಿಯಾಗಿದ್ದರಿಂದ ಬೆಂಕಿ ಹತ್ತುತ್ತಿರಲಿಲ್ಲ.

ಆಗ ಚಂದ್ರಕಾಂತ್, ಸ್ವಲ್ಪ ಥಿನ್ನರ್ ಹಾಕುವಂತೆ ಹೇಳಿದ್ದಾರೆ. ಥಿನ್ನರ್ ಹಾಕುತ್ತಿದ್ದಂತೆ ಬೆಂಕಿ ಜೋರಾಗಿ ಹೊತ್ತಿಕೊಂಡಿದೆ. ಬೆಂಕಿ ಥಿನ್ನರ್ ಬಾಟಲ್​ಗೂ ಹತ್ತಿದೆ. ದಿಢೀರನೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ, ಥಿನ್ನರ್ ಬಾಟಲ್ ಅನ್ನು ಹೊರಗೆ ತಳ್ಳಲು ಅಗಸ್ತ್ಯನ ಅಜ್ಜಿ ಪ್ರಯತ್ನಿಸಿದ್ದಾರೆ. ಆದರೆ, ಬಾಟಲ್​ ತಪ್ಪಿ, ಚಂದ್ರಕಾಂತ್ ಮತ್ತು ಅಗಸ್ತ್ಯ ಇದ್ದ ಕೋಣೆಯೊಳಗೆ ಹೋಗಿದೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ, ಚಂದ್ರಕಾಂತ್ ಮತ್ತು ಆಗಸ್ತ್ಯ ಕೋಣೆಯಲ್ಲೇ ಸಿಲುಕಿಕೊಂಡಿದ್ದಾರೆ.

ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು

ಕೋಣೆಯಲ್ಲಿದ್ದ ಚಂದ್ರಕಾಂತ್ ಮತ್ತು ಅಗಸ್ತ್ಯನನ್ನು ರಕ್ಷಿಸಿ ಹೊರಗೆ ಕರೆದುಕೊಂಡು ಬರುವಷ್ಟರಲ್ಲಿ ಇಬ್ಬರಿಗೂ ಸಾಕಷ್ಟು ಸುಟ್ಟಗಾಯಗಳಾಗಿದ್ದವು. ಇಬ್ಬರನ್ನೂ ಕೂಡಲೇ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರೂ ಕೂಡ, ಬಾಲಕ ಅಗಸ್ತ್ಯ ಬದುಕುಳಿಯಲಿಲ್ಲ. ಅದೇ ಮನೆಯಲ್ಲಿ ಮೃತ ಅಗಸ್ತ್ಯನ ತಾಯಿ, ಅಜ್ಜಿ, ಪುಟ್ಟ ಮಗುವಿದ್ದು ಅವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಸಣ್ಣ ನಿರ್ಲಕ್ಷ್ಯವೊಂದು ಮಗುವಿನ ಸಾವಿಗೆ ಕಾರಣವಾಗಿದ್ದು ಮಾತ್ರ ದುರಂತವೇ ಸರಿ. ಮನೆಯಲ್ಲಿ ಅಪಾಯಕಾರಿ ವಸ್ತುಗಳನ್ನು ಇಡುವ ಮುಂಚೆ ಜಾಗೃತಿ ವಹಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sat, 16 August 25

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!