ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ

ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ.

ಲಂಚ ಕೊಡು ಇಲ್ಲ ಕೇಸ್​ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ
ಕುರಿಗಾಹಿ ಭೀಮಪ್ಪ, ಅರಣ್ಯ ಇಲಾಖೆ
Edited By: ವಿವೇಕ ಬಿರಾದಾರ

Updated on: Jan 17, 2024 | 11:09 AM

ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ.

ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ ಅಧಿಕಾರಿಗಳಿಗೆ ಕೋಳಿ, ಹುಂಜ, ಹಣ ಕೊಡುತ್ತಾರೆ. ಕುರುಬರು ಹಣ ಕೊಡಬೇಕು, ಇಲ್ದಿದಿದ್ದರೇ ಕೇಸ್ ಹಾಕಿ ಜೈಲಿಗೆ ಕಳಿಸುತ್ತೇವೆ ಅಂತಾ ಅವಾಜ್ ಹಾಕಿದ್ದಾರೆ. ಆನಂದ ಹಾಗೂ ಸಹಚರನ ವರ್ತನೆ ಮೊಬೈಲ್‌ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us