AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.

ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್
TV9 Web
| Edited By: ವಿವೇಕ ಬಿರಾದಾರ|

Updated on:Oct 03, 2022 | 3:13 PM

Share

ಧಾರವಾಡ: ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ (Hubli) ಐಟಿ-ಬಿಟಿ ಇಲಾಖೆಯ ಅಡಿ ನಡೆದ ಬಿಯೋಂಡ್​​ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯ ವಿಚಾರ ಕೇವಲ ಭಾಷಣಕ್ಕೆ ಸೀಮಿತವಾಗುತ್ತಿದೆ. ಕಾರ್ಯಕ್ರಮಗಳು ಅನುಷ್ಠಾನ ಆಗುತ್ತಿಲ್ಲ. ಇದಕ್ಕೆ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳು ಕೆಲಸ‌ ಮಾಡಬೇಕು ಎಂದು ಹೇಳಿದರು.

ಫಿಲ್ಡ್ ನಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ‌ ಮಾಡುತ್ತಿಲ್ಲ. ಕೈಗಾರಿಕಾ ಸ್ಥಾಪನೆಗೆ ಪೂರಕ ವಾತಾವರಣ ಮಾತಿನಲ್ಲಿ ಮಾಡಿದರೆ ಸಾಲದು, ಕಾರ್ಯ ಆಗಬೇಕು. ಎಂದು ಪರೋಕ್ಷವಾಗಿ ಮುರುಗೇಶ್ ನಿರಾಣಿ ವಿರುದ್ಧ ಶೆಟ್ಟರ್ ಅಸಮಾಧಾನ ಹೊರ ಹಾಕಿದ್ದಾರೆ.

ವಿಶೇಷ ಹೂಡಿಕೆ ವಲಯ ಬಗ್ಗೆಯೂ ಘೋಷಣೆ ಆಗಿದೆ. ಅದು ಕೂಡ ಕಾರ್ಯಗತವಾಗಿಲ್ಲ. ಕೂಡಲೇ ಸಚಿವ ಸಂಪುಟದಲ್ಲಿ ಚರ್ಚಿಸಿ ಕಾರ್ಯಗತಗೊಳಿಸಿ. ಸಚಿವ ಅಶ್ವತ್ಥ್​ ನಾರಾಯಣ ಈ ಕೆಲಸವನ್ನ ಮಾಡಬೇಕು ಎಂದು ಒತ್ತಾಯಿಸಿದರು.

ಚೆನ್ನಮ್ಮ ಕಿತ್ತೂರು ಬಳಿ ಇಂಟರ್ನ್ಯಾಷನಲ್ ಏರ್ಪೋರ್ಟ್ ​ಸ್ಥಾಪಿಸುವುದಾಗಿ ಸಚಿವರು ಹೇಳಿದ್ದರು. ಇದು ಸಾದ್ಯನಾ? ಯಾವುದಾದರು ತಂಡ ಭೇಟಿ‌ ನೀಡಿದೆಯಾ? ಭೂಮಿ ಮಂಜೂರು ಮಾಡಲು ಎರಡು ಮೂರು ವರ್ಷಗಳಾಗುತ್ತಿದೆ. ಏರ್​​ಪೋರ್ಟ್ ಸಾಧ್ಯತೆ ಬಗ್ಗೆ ಈವರೆಗೂ ಚರ್ಚೆ ಆಗಿದೆಯಾ? ಎಂದು ಶೆಟ್ಟರ್ ಪ್ರಶ್ನಿಸಿದರು. ನಾನು‌ ಸಿಎಂ ಆದಾಗ, ಇನ್ಫೋಸಿಸ್​ಗೆ ಜಾಗ ನೀಡಿದ್ದೆ. ಆದರೇ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿಲ್ಲ ಎಂದರು.

ಅಂಕೋಲಾ ರೇಲ್ವೆ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಸಿದ್ದೇನೆ: ಪ್ರಲ್ಹಾದ್​  ಜೋಶಿ 

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ  ಮಾತನಾಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬದಲಾವಣೆಯಾಗುತ್ತಿದೆ. ಬಿಯಾಂಡ್ ಬೆಂಗಳೂರಿಗೆ ಪ್ರಚಾರ ಕೊಡಬೇಕಿದೆ. ಶೆಟ್ಟರ್ ಅಂಕೋಲಾ ರೇಲ್ವೆ ಯೋಜನೆ ಬಗ್ಗೆ ಹೇಳಿದರು. ದೇಶದಲ್ಲಿ ಕೋರ್ಟ್​ಗೆ ಹೋಗೋರು ಹೆಚ್ಚಾಗಿದ್ದಾರೆ. ಕಸ ಹಾಕುವ ವಿಚಾರಕ್ಕೂ ಕೋರ್ಟ್​ಗೆ ಹೋಗುತ್ತಾರೆ. ಅದೇ ರೀತಿ ಅಂಕೋಲಾ ರೇಲ್ವೆ ವಿಚಾರದಲ್ಲೂ ಕೋರ್ಟ್ ಮೊರೆ ಹೋಗಿದ್ದಾರೆ. ನಾವು ಅಂಕೋಲಾ ರೈಲ್ವೆಗೆ ಪ್ರಯತ್ನ ನಡೆಸಿದ್ದೇವೆ. ನಾನು ಅದಕ್ಕಾಗಿ ದೆಹಲಿಯಿಂದ ಬಂದಿದ್ದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Mon, 3 October 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ