AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮಾಟ ಮಂತ್ರ ಮಾಡಿಸಿದ್ದರು; ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು ಎಂದ ಬಂಡೆಪ್ಪ ಕಾಶಂಪೂರ

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ (karnataka assembly elections 2023) ಜೆಡಿಎಸ್ ಪಕ್ಷದ (jds) ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಇದು ನಿಮಗೆ ಯಾರಿಗೂ ಅರ್ಥ ಆಗಿಲ್ಲ. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜ. ಕಾಂಗ್ರೆಸ್ ನವರಿಗೆ 135 ಸೀಟ್ ಬರುತ್ತೆ ಅನ್ನೋದ ಗೊತ್ತಿರಲಿಲ್ಲ. ನಾವು 55 ಸೀಟ್ ಗೆಲ್ಲಬೇಕಿತ್ತು ಎಂದು ವ್ಯಾಖ್ಯಾನಿಸಿದ್ದಾರೆ.

ಕೇರಳ ಮಾಟ ಮಂತ್ರ ಮಾಡಿಸಿದ್ದರು; ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು ಎಂದ ಬಂಡೆಪ್ಪ ಕಾಶಂಪೂರ
ಮಾಟ ಮಂತ್ರದಿಂದಲೇ‌ ನಾವು ಅಸೆಂಬ್ಲಿ ಚುನಾವಣೆ ಸೋತಿದ್ದು ಎಂದ ಬಂಡೆಪ್ಪ ಕಾಶಂಪೂರ
TV9 Web
| Edited By: |

Updated on:Oct 12, 2023 | 5:36 PM

Share

ಹುಬ್ಬಳ್ಳಿ, ಅಕ್ಟೋಬರ್​ 12 : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ (karnataka assembly elections 2023) ಜೆಡಿಎಸ್ ಪಕ್ಷದ (jds) ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು (Former JDS MLA Bandeppa Kashampura) ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ (Kerala witchcraft) ನಾವು ಸೋತಿದ್ದು. ಕಳೆದ ಚುನಾವಣೆಯಲ್ಲಿ ನಾವು 37 ಜ‌ನ ಗೆದ್ದಿದ್ವಿ. ಅದರಲ್ಲಿ ಏಳು ಜನ ಹೋಗಿ 30 ಜನ ಉಳಿದುಕೊಂಡಿದ್ವಿ. ಆದರೆ ಆ 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ. ಉಳಿದವರು ಸೋಲಲು‌ ಮಾಟ ಮಂತ್ರ ಕಾರಣ ಎಂದು ಬಂಡೆಪ್ಪ ಹೇಳಿದ್ದಾರೆ.

ಇದು ನಿಮಗೆ ಯಾರಿಗೂ ಅರ್ಥ ಆಗಿಲ್ಲ. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜ. ಕಾಂಗ್ರೆಸ್ ನವರಿಗೆ 135 ಸೀಟ್ ಬರುತ್ತೆ ಅನ್ನೋದ ಗೊತ್ತಿರಲಿಲ್ಲ. ನಾವು 55 ಸೀಟ್ ಗೆಲ್ಲಬೇಕಿತ್ತು ಎಂದು ಬಂಡೆಪ್ಪ ಕಾಶಂಪೂರ ವ್ಯಾಖ್ಯಾನಿಸಿದ್ದಾರೆ.

Also Read: ಮೈತ್ರಿಗೆ ವಿರೋಧವಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ: ಶಾಸಕ ಜಿಟಿ ದೇವೇಗೌಡ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನವನ್ನ ಗೆಲ್ಲಬಾರದು. ಕಾಂಗ್ರೆಸ್ ವಿರುದ್ದ ಅವರದೇ 35 ಶಾಸಕರು ದಿನಾ ಒಂದು ಡೈಲಾಗ್ ಹೊಡಿತೀದಾರೆ. ಇನ್ನೊಂದು 20 ರಿಂದ 25 ಜನ ಡೈಲಾಗ್ ಹೊಡೆದರೂ ಸರ್ಕಾರದ ಕಥೆ ಮುಗೀತು ಎಂದು ಕಾಶಂಪೂರ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ (karnataka assembly elections 2023) ಜೆಡಿಎಸ್ ಪಕ್ಷದ (jds) ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಇದು ನಿಮಗೆ ಯಾರಿಗೂ ಅರ್ಥ ಆಗಿಲ್ಲ. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜ. ಕಾಂಗ್ರೆಸ್ ನವರಿಗೆ 135 ಸೀಟ್ ಬರುತ್ತೆ ಅನ್ನೋದ ಗೊತ್ತಿರಲಿಲ್ಲ. ನಾವು 55 ಸೀಟ್ ಗೆಲ್ಲಬೇಕಿತ್ತು ಎಂದು ವ್ಯಾಖ್ಯಾನಿಸಿದ್ದಾರೆ.

ಪಂಚ ರಾಜ್ಯಗಳ ಅಸೆಂಬ್ಲಿ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗ್ತಿದೆ -ಜಿ.ಟಿ.ದೇವೇಗೌಡ

ಇನ್ನು ಇದೇ ವೇಳೆ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಪಂಪಸೆಟ್​ಗಳಿಗೆ ಕರೆಂಟ್ ಇಲ್ಲ, ರೈತರ ಆತ್ಮಹತ್ಯೆ 6ನೇ ಗ್ಯಾರಂಟಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೂಡ ಕೊಟ್ಟಿಲ್ಲ. ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಎಲ್ಲವೂ ಬೋಗಸ್​ ಎಂದು ವಾಗ್ದಾಳಿ ನಡೆಸಿದರು.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗ್ತಿದೆ. ಚುನಾವಣೆಗಾಗಿ ಲಂಚದ ದುಡ್ಡನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಿದ ಜಿಟಿಡಿ, ಯಾರು ಏನೇ ಎನ್ನಲಿ ಮತ್ತೆ ಮೋದಿ‌ಯನ್ನು ಪ್ರಧಾನಿ‌ ಮಾಡೋಣ ಎಂದು ಹುಬ್ಬಳ್ಳಿ ಜೆಡಿಎಸ್​ ಸಮಾವೇಶದಲ್ಲಿ ಕರೆಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Thu, 12 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!