AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!

Shivaram Hebbar: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಗಾತಕ್ಕೀಡಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಹಿಂಬಾಲಿಸುವ ಭರದಲ್ಲಿ ಅವರ ಕಾರು ಮುಖ್ಯಮಂತ್ರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯ ಸಂದರ್ಭದಲ್ಲಿ ಶಿವರಾಮ್ ಹೆಬ್ಬಾರ್ ಅವರು ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ

Hubballi: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!
ಡಿಕ್ಕಿಯಾಗಿರುವ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಮತ್ತು ಸಿಎಂ ಬೆಂಗಾವಲು ಪಡೆಯ ವಾಹನ
TV9 Web
| Updated By: shivaprasad.hs|

Updated on:Jul 29, 2021 | 1:14 PM

Share

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.  ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.

ಘಟನೆಯ ವಿವರ:

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ ಹೊರ ತೆರಳುವಾಗ ಸಿಎಂ ಅವರಿದ್ದ ಕಾರನ್ನು ಹಿಂಬಾಲಿಸುವ ಭರದಲ್ಲಿ ಬೆಂಗಾವಲು ಪಡೆಗೆ ಕಾರು ಡಿಕ್ಕಿಯಾಗಿದೆ. ಘಟನೆ ನಡೆಯುವಾಗ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು. ಅಪಘಾತದ ಸಂದರ್ಭದಲ್ಲಿ ಮಾಜಿ ಸಚಿವರ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಹುಬ್ಬಳ್ಳಿ ತಲುಪಿದ ಮುಖ್ಯಮಂತ್ರಿ ಬೊಮ್ಮಾಯಿ:

ನೂತನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಅವರು ಹುಬ್ಬಳ್ಳಿಯಲ್ಲಿದ್ದು ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಯವರ ಸಮಯ ಪಾಲನೆಯ ಕುರಿತು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಅವರು ಬೆಳಗ್ಗೆ 11.45ಕ್ಕೆ ಅಂಕೋಲಾದಲ್ಲಿರಬೇಕಿತ್ತು, ಇನ್ನೂ ಹುಬ್ಬಳ್ಳಿಯಲ್ಲೇ ಇದ್ದಾರೆ ಎಂದು ದೂರಿದ್ದಾರೆ. ಹುಬ್ಬಳ್ಳಿಯ ಭೇಟಿ ಕಾರ್ಯಕ್ರಮ ಮುಗಿದ ನಂತರ ಅವರು ಉತ್ತರ ಕನ್ನಡಕ್ಕೆ ತೆರಳುವ ನಿರೀಕ್ಷೆ ಇದೆ.

ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ ಅವರ ಭೇಟಿಗೆ ಹೋಗಲ್ಲವೆಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಕೊಡಸಣೆ ಜನರು ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ ಬರಲಿ, ಪ್ರಧಾನಿ ಬರಲಿ ನಮ್ಮ ಪರಿಸ್ಥಿತಿ ಬದಲಾಗಲ್ಲ. ನೆರೆ ಬಂದಾಗ ಬರುತ್ತಾರೆ, ಭರವಸೆ ಕೊಟ್ಟು ಹೋಗುತ್ತಾರೆ.ಪರಿಹಾರ ಮಾತ್ರ ಸೂಕ್ತವಾಗಿ ಸಿಗೋದಿಲ್ಲ ಎಂದು ಜನಪ್ರತಿನಿಧಿಗಳ ವಿರುದ್ಧ ಕೊಡಸಣೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kerala Lockdown: ಕೇರಳದಲ್ಲಿ ಕೊರೊನಾ ಮತ್ತೆ ಹೆಚ್ಚಳ; ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಿದ ರಾಜ್ಯ ಸರ್ಕಾರ

ಇದನ್ನೂ ಓದಿ: Karnataka Breaking News LIVE: ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

(former minister Shivaram Hebbar’s car was accident with the CM Security Vehicle)

Published On - 1:07 pm, Thu, 29 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!