ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (ಆರ್‌ಎಸ್‌ಎಸ್) ಮುಖಂಡ ಸಿರೀಶ್ ಬಳ್ಳಾರಿ ಅವರ ಮನೆಗೆ ನಾಲ್ವರು ಮುಸ್ಲಿಂ ಯುವಕರು ನುಗ್ಗಿ ಹಲ್ಲೆ ನಡೆಸಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದೆ. ಸಿರೀಶ್ ಅವರಿಗೆ ಕೈ ಮತ್ತು ಮುಖಕ್ಕೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸುತ್ತಿವೆ.

ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ಧಾರವಾಡ ನಗರ ಪೊಲೀಸ್​ ಠಾಣೆ
Edited By: ವಿವೇಕ ಬಿರಾದಾರ

Updated on: Apr 23, 2025 | 10:07 PM

ಧಾರವಾಡ, ಏಪ್ರಿಲ್​ 23: ಮನೆ ಹೊಕ್ಕು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (RSS) ಮುಖಂಡನಿಗೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಧಾರವಾಡ (Dharwad) ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ನಡೆದಿದೆ. ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ.

ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ…)

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us