AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​

ಧಾರವಾಡ ಕೃಷಿ ಮೇಳ 2024 ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ​
ಧಾರವಾಡ ಕೃಷಿ ಮೇಳ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 21, 2024 | 10:02 AM

Share

ಧಾರವಾಡ, ಸೆಪ್ಟೆಂಬರ್​ 21: “ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು” ಈ ಬಾರಿಯ ಕೃಷಿ ಮೇಳದ ಘೋಷವಾಕ್ಯವಾಗಿದೆ. ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಹೆಸರಿನ ಘೋಷವಾಕ್ಯದಲ್ಲಿ ರೈತರ ಜಾತ್ರೆ ಎನಿಸಿರುವ ಧಾರವಾಡ ಕೃಷಿ ಮೇಳ (Dharwad Krishi Mela 2024) ಇಂದಿನಿಂದ (ಸೆ.21 ರಿಂದ 24)ರವರೆಗೆ ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯ (Dharwad Agriculture University)ದ ಆವರಣದಲ್ಲಿ ನಡೆಯಲಿದೆ. ಕಳೆದ ಎರಡು ತಿಂಗಳಿಂದ ಈ ಮೇಳಕ್ಕಾಗಿ ಸಿದ್ಧತೆ ನಡೆದಿದೆ.

ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ. ಮೇಳದಲ್ಲಿ 15 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ. ಮೊದಲ ಬಾರಿಗೆ ಕ್ಯೂಆರ್‌ ಕೋಡ್ ಮೂಲಕ ಮೂಲಕ ನೋಂದಣಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಏನೇನು ಪ್ರದರ್ಶನ?

ಮೇಳದ ಪ್ರಮುಖ ಆಕರ್ಷಣೆ ಕೃಷಿ ವಸ್ತು ಪ್ರದರ್ಶನ. ಇದರಲ್ಲಿ 150 ಹೈಟೆಕ್ ಮಳಿಗೆ, 241 ಸಾಮಾನ್ಯ ಮಳಿಗೆ, 110 ಯಂತ್ರೋಪಕರಣ ಮಳಿಗೆ, 27 ಟ್ರ್ಯಾಕ್ಟರ್, ಭಾರಿ ಯಂತ್ರೋಪಕರಣಗಳ ಮಳಿಗೆ ಹಾಗೂ 28 ಆಹಾರ ಮಳಿಗೆಗಳು ಇರಲಿವೆ. ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿ ಹಾಗೂ ಕೃಷಿ ತಾಂತ್ರಿಕತೆಗಳು ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು, ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ, ಹೈಟೆಕ್ ತೋಟಗಾರಿಕೆ, ಫಲ-ಪುಷ್ಪ ಪ್ರದರ್ಶನ ಇರುತ್ತದೆ.

ಇಷ್ಟೇ ಅಲ್ಲದೇ, ಕೀಟ ಪ್ರಪಂಚ, ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡ್ರೋನ್​ ಪ್ರದರ್ಶನ, ಕೃಷಿ ತಜ್ಞರೊಂದಿಗೆ ಸಮಾಲೋಚನೆ, ರೈತರ ಆವಿಷ್ಕಾರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ ಸೇರಿದಂತೆ ಕೃಷಿ ತಂತ್ರಜ್ಞಾನವನ್ನು ರೈತರಿಗೆ ತೋರಿಸಲಾಗುತ್ತದೆ. ಜಾನುವಾರುಗಳ ಪ್ರದರ್ಶನ ರೈತರ ಗಮನ ಸೆಳೆಯಲಿದೆ. ಇದೇ ವೇಳೆ ಹಿಂಗಾರು ಬಿತ್ತನೆಗಾಗಿ ಬೀಜ ಮೇಳವೂ ಇರಲಿದೆ.

ಇದನ್ನೂ ಓದಿ: ಭಾವೈಕ್ಯತೆ ಮೆರೆದ ಎರಡೂ ಕೋಮಿನ ಜನ; ವಿಗ್ರಹ, ಬೋರ್ಡ್​ ತೆರವುಗೊಳಿಸಲು ನಿರ್ಧಾರ

ರವಿವಾರ ಮೇಳದ ಉದ್ಘಾಟನೆ:

ರಾಜ್ಯ ಹಾಗೂ ಹೊರ ರಾಜ್ಯಗಳ ರೈತರ ಅನುಕೂಲಕ್ಕಾಗಿ ಮೇಳದಲ್ಲಿ ಹಲವು ಸೌಲಭ್ಯ ಕಲ್ಪಿಸಲಾಗಿದೆ. ರೈತರಿಗೆ ಕ್ಷೇತ್ರ ಪ್ರಾತ್ಯಕ್ಷಿಕೆಗಳಿಗೆ ಭೇಟಿ, ಉಚಿತ ವೈದ್ಯಕೀಯ ಸಲಹಾ ಕೇಂದ್ರ, ಸಾರಿಗೆ ನಿರ್ವಹಣಾ ವ್ಯವಸ್ಥೆ ಮತ್ತು ಪೊಲೀಸ್ ಸಹಾಯ ಕೇಂದ್ರ ಸ್ಥಾಪಿಸಲಾಗಿದೆ. ಮೇಳದ ಮೊದಲ ದಿನ ಶನಿವಾರ ಕೃಷಿಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆ ಹಾಗೂ ವಿಚಾರಗೋಷ್ಠಿ ನಡೆಯಲಿದೆ. 2ನೇ ದಿನ ಭಾನುವಾರ ಮೇಳದ ಉದ್ಘಾಟನೆ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ. 3ನೇ ದಿನ ಸೋಮವಾರ ರೈತರಿಂದ ರೈತರಿಗಾಗಿ ಕಾರ್ಯಕ್ರಮ, ಪ್ರಗತಿಪರ ರೈತರ ಅನಿಸಿಕೆಗಳ ಕಾರ್ಯಕ್ರಮ ಇರಲಿದೆ. ಇನ್ನು ಕೊನೆ ದಿನ ಮಂಗಳವಾರ ಚರ್ಚಾಗೋಷ್ಠಿ ಹಾಗೂ ಸಮಾರೋಪ ನಡೆಯಲಿದೆ.

ಎರಡನೇ ದಿನದ ಕಾರ್ಯಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಸೆ.22) ಬೆಳಿಗ್ಗೆ 10.30ಕ್ಕೆ ಕೃಷಿ ಮೇಳವನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್, ಪಾಲ್ಗೊಳ್ಳುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸುವರು. ಮಧ್ಯಾಹ್ನ 2.30ಕ್ಕೆ ‘ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಮತ್ತು ನೈಸರ್ಗಿಕ ಕೃಷಿಯ ಪಾತ್ರ’ ಗೋಷ್ಠಿ ನಡೆಯಲಿದೆ.

ಸ್ಟಾರ್ಟ್ ಅಪ್ ಪೆವಿಲಿಯನ್:

ಮೇಳದಲ್ಲಿ ಮೊದಲ ಬಾರಿಗೆ ‘ಸ್ಟಾರ್ಟ್ ಅಪ್ ಪೆವಿಲಿಯನ್’ ವ್ಯವಸ್ಥೆ ಮಾಡಲಾಗಿದೆ. ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮಳಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಹಾರ, ಯಾಂತ್ರಿಕತೆ, ಐಒಟಿ ಹಾಗೂ ಹರ್ಬಲ್ ಮೆಡಿಸಿನ್‌ಗೆ ಸಂಬಂಧಿಸಿದ ಮಳಿಗೆಗಳು ಈ ಪೆವಿಯಲಿಯನ್‌ನಲ್ಲಿ ಇರಲಿವೆ. ಕರ್ನಾಟಕ, ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳ 22 ಮಳಿಗೆಗಳು ಸ್ಟಾರ್ಟ್ ಅಪ್‌ಗಳು ಪಾಲ್ಗೊಳ್ಳಲಿವೆ. ಕೇಂದ್ರ ಸರ್ಕಾರದ ಆರ್‌ಕೆವಿವೈ ಇನ್ನೋವೇಷನ್ ಹಾಗೂ ಅಗ್ರಿಪ್ರಿನಿಯರ್‌ಷಿಪ್ ಕಾರ್ಯಕ್ರಮದಡಿ ಪ್ರೋತ್ಸಾಹ ನೀಡಿರುವ ಸ್ಟಾರ್ಟ್ ಅಪ್‌ಗಳು ಇವಾಗಿವೆ.

ಸ್ಟಾರ್ಟ್ ಅಪ್ ಸ್ಥಾಪನೆಗೆ ಮೊದಲ ಹಂತದಲ್ಲಿ ₹5 ಲಕ್ಷ ನೀಡಲಾಗುವುದು. ಅನ್ವೇಷಣೆ ಯೋಜನೆ ಅನುಷ್ಠಾನ ಹಂತ ಇದು. ಸ್ಪಾರ್ಟ್ ಅಪ್ ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸಿದರೆ ಎರಡನೇ ಹಂತದಲ್ಲಿ ರೂ. 25 ಲಕ್ಷ ನೀಡಲಾಗುವುದು. ಕಬ್ಬು ಕಟಾವು ಯಂತ್ರ, ಕಡಲೆ ಗಿಡದ ತುದಿ ಚಿವುಟುವ ಸೌರಚಾಲಿತ ಯಂತ್ರ ಮೊದಲಾದ ಸ್ಟಾರ್ಟ್ ಅಪ್ ಮಳಿಗೆಗಳು ಮೇಳದಲ್ಲಿ ಇರಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!