AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​
ವಿವೇಕ ಬಿರಾದಾರ
|

Updated on:Sep 04, 2024 | 9:17 AM

Share

ಹುಬ್ಬಳ್ಳಿ, ಸೆಪ್ಟೆಂಬರ್​ 04: ಗಣೇಶ ಹಬ್ಬ (Ganesha Festival), ವಾರದ ರಜೆ ಹಿನ್ನೆಲೆಯಲ್ಲಿ ಜನರು ತಮ್ಮ-ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿದ್ದಾರೆ. ಇದರಿಂದ ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ದಿನ ನಿತ್ಯಕ್ಕಿಂತ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುವ ಸಾಧ್ಯತೆ ಇದೆ. ಇದರಿಂದ ಬಸ್​ಗಳು ಫುಲ್​ ರಶ್​​ ಆಗಲಿವೆ. ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಮತ್ತು ಶುಲ್ಕ ಹೊರೆಯನ್ನು ತಡೆಯುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಪ್ರಯಾಣಿಕರಿಗೆ ವಿಶೇಷ ಅನುಕೂಲ ಕಲ್ಪಿಸಿದೆ.

ಗಣೇಶ ಚತುರ್ಥಿ ಪ್ರಯುಕ್ತ ದೂರದ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಎನ್​ಡಬ್ಲೂಕೆಆರ್​ಟಿಸಿ ವಿಶೇಷ ಬಸ್​ ವ್ಯಸ್ಥೆ ಮಾಡಿದೆ. ಸೆಪ್ಟೆಂಬರ್​ 5 ರಿಂದ 10ರವರೆಗೆ ಈ ವಿಶೇಷ ಬಸ್​ಗಳು ಸಂಚರಿಸಲಿವೆ.

ಯಾವ ಯಾವ ಜಿಲ್ಲೆಗಳಿಂದ ವಿಶೇಷ ಬಸ್​

ಬೆಂಗಳೂರು, ಪುಣೆ, ಹೈದರಾಬಾದ್​ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ವಿಶೇಷ ಬಸ್​ ಬಿಡಲಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

ಸೀಟ್​ ಬುಕ್ಕಿಂಗ್​ನಲ್ಲಿ ಬಂಪರ್​ ಆಫರ್​

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬಕ್ಕೆ ಎನ್​ಡಬ್ಲೂಕೆಆರ್​ಟಿಸಿ ಪ್ರಯಾಣಿಕರಿಗೆ ಗಿಫ್ಟ್​ ನೀಡಿದೆ. ಈ ಹಬ್ಬದ ಸಂದರ್ಭದಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಆಸನಗಳನ್ನು ಒಂದೇ ಸಲಕ್ಕೆ ಕಾಯ್ದಿರಿಸಿರಿದರೇ ಶೇ 5 ರಷ್ಟು ರಿಯಾತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Wed, 4 September 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ