AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​
ವಿವೇಕ ಬಿರಾದಾರ
|

Updated on:Sep 04, 2024 | 9:17 AM

Share

ಹುಬ್ಬಳ್ಳಿ, ಸೆಪ್ಟೆಂಬರ್​ 04: ಗಣೇಶ ಹಬ್ಬ (Ganesha Festival), ವಾರದ ರಜೆ ಹಿನ್ನೆಲೆಯಲ್ಲಿ ಜನರು ತಮ್ಮ-ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿದ್ದಾರೆ. ಇದರಿಂದ ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ದಿನ ನಿತ್ಯಕ್ಕಿಂತ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುವ ಸಾಧ್ಯತೆ ಇದೆ. ಇದರಿಂದ ಬಸ್​ಗಳು ಫುಲ್​ ರಶ್​​ ಆಗಲಿವೆ. ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಮತ್ತು ಶುಲ್ಕ ಹೊರೆಯನ್ನು ತಡೆಯುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಪ್ರಯಾಣಿಕರಿಗೆ ವಿಶೇಷ ಅನುಕೂಲ ಕಲ್ಪಿಸಿದೆ.

ಗಣೇಶ ಚತುರ್ಥಿ ಪ್ರಯುಕ್ತ ದೂರದ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಎನ್​ಡಬ್ಲೂಕೆಆರ್​ಟಿಸಿ ವಿಶೇಷ ಬಸ್​ ವ್ಯಸ್ಥೆ ಮಾಡಿದೆ. ಸೆಪ್ಟೆಂಬರ್​ 5 ರಿಂದ 10ರವರೆಗೆ ಈ ವಿಶೇಷ ಬಸ್​ಗಳು ಸಂಚರಿಸಲಿವೆ.

ಯಾವ ಯಾವ ಜಿಲ್ಲೆಗಳಿಂದ ವಿಶೇಷ ಬಸ್​

ಬೆಂಗಳೂರು, ಪುಣೆ, ಹೈದರಾಬಾದ್​ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ವಿಶೇಷ ಬಸ್​ ಬಿಡಲಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

ಸೀಟ್​ ಬುಕ್ಕಿಂಗ್​ನಲ್ಲಿ ಬಂಪರ್​ ಆಫರ್​

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬಕ್ಕೆ ಎನ್​ಡಬ್ಲೂಕೆಆರ್​ಟಿಸಿ ಪ್ರಯಾಣಿಕರಿಗೆ ಗಿಫ್ಟ್​ ನೀಡಿದೆ. ಈ ಹಬ್ಬದ ಸಂದರ್ಭದಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಆಸನಗಳನ್ನು ಒಂದೇ ಸಲಕ್ಕೆ ಕಾಯ್ದಿರಿಸಿರಿದರೇ ಶೇ 5 ರಷ್ಟು ರಿಯಾತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Wed, 4 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ