Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬ ಪ್ರಯುಕ್ತ NWKRTCಯಿಂದ ಪ್ರಯಾಣಿಕರಿಗೆ ಗಿಫ್ಟ್​​: ಸೀಟ್​ ಬುಕ್ಕಿಂಗ್​ನಲ್ಲಿ ರಿಯಾತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​
Follow us
ವಿವೇಕ ಬಿರಾದಾರ
|

Updated on:Sep 04, 2024 | 9:17 AM

ಹುಬ್ಬಳ್ಳಿ, ಸೆಪ್ಟೆಂಬರ್​ 04: ಗಣೇಶ ಹಬ್ಬ (Ganesha Festival), ವಾರದ ರಜೆ ಹಿನ್ನೆಲೆಯಲ್ಲಿ ಜನರು ತಮ್ಮ-ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿದ್ದಾರೆ. ಇದರಿಂದ ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ದಿನ ನಿತ್ಯಕ್ಕಿಂತ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುವ ಸಾಧ್ಯತೆ ಇದೆ. ಇದರಿಂದ ಬಸ್​ಗಳು ಫುಲ್​ ರಶ್​​ ಆಗಲಿವೆ. ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಮತ್ತು ಶುಲ್ಕ ಹೊರೆಯನ್ನು ತಡೆಯುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಪ್ರಯಾಣಿಕರಿಗೆ ವಿಶೇಷ ಅನುಕೂಲ ಕಲ್ಪಿಸಿದೆ.

ಗಣೇಶ ಚತುರ್ಥಿ ಪ್ರಯುಕ್ತ ದೂರದ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಎನ್​ಡಬ್ಲೂಕೆಆರ್​ಟಿಸಿ ವಿಶೇಷ ಬಸ್​ ವ್ಯಸ್ಥೆ ಮಾಡಿದೆ. ಸೆಪ್ಟೆಂಬರ್​ 5 ರಿಂದ 10ರವರೆಗೆ ಈ ವಿಶೇಷ ಬಸ್​ಗಳು ಸಂಚರಿಸಲಿವೆ.

ಯಾವ ಯಾವ ಜಿಲ್ಲೆಗಳಿಂದ ವಿಶೇಷ ಬಸ್​

ಬೆಂಗಳೂರು, ಪುಣೆ, ಹೈದರಾಬಾದ್​ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ವಿಶೇಷ ಬಸ್​ ಬಿಡಲಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

ಸೀಟ್​ ಬುಕ್ಕಿಂಗ್​ನಲ್ಲಿ ಬಂಪರ್​ ಆಫರ್​

ಹಬ್ಬದ ಸಂಭ್ರಮದಲ್ಲಿ ಬಸ್​ಗಳು ಫುಲ್​ ರಶ್​ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಸೀಟ್​ ಬುಕ್​ ಮಾಡಿಕೊಂಡು ತೆರಳುತ್ತಾರೆ. ಸೀಟ್​ ಬಕ್​ ಮಾಡಲು ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂಬ ಚಿಂತೆ ಪ್ರಯಾಣಿಕರಿಗೆ ಇರುತ್ತದೆ. ಈ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಎನ್​ಡಬ್ಲೂಕೆಆರ್​ಟಿಸಿ ಸಿಹಿ ಸುದ್ದಿ ನೀಡಿದೆ.

ಗಣೇಶ ಹಬ್ಬಕ್ಕೆ ಎನ್​ಡಬ್ಲೂಕೆಆರ್​ಟಿಸಿ ಪ್ರಯಾಣಿಕರಿಗೆ ಗಿಫ್ಟ್​ ನೀಡಿದೆ. ಈ ಹಬ್ಬದ ಸಂದರ್ಭದಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಆಸನಗಳನ್ನು ಒಂದೇ ಸಲಕ್ಕೆ ಕಾಯ್ದಿರಿಸಿರಿದರೇ ಶೇ 5 ರಷ್ಟು ರಿಯಾತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Wed, 4 September 24

ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್