AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ: 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ

ಗಣೇಶ ಮೆರವಣಿಗೆಯಲ್ಲಿ ನಿಯಮ ಮೀರಿ ಡಿಜೆ ಬಳಸಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡದಲ್ಲಿ 6 ಡಿಜೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದನ್ನು ವಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಮಸೀದಿಗಳಲ್ಲಿ ಆಜಾನ್​​ ಕೂಗುವವರ ಮೇಲೆ ಕೇಸ್​​ ಹಾಕದ ಇವರು ಡಿಜೆ ಮಾಲೀಕರ ಮೇಲೆ ಕೇಸ್ ಹಾಕ್ತಾರೆ. ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ? ಈ ರೀತಿ ಮಾಡಿಕೊಂಡೇ ಎಲ್ಲ ಕಡೆ ಕಾಂಗ್ರೆಸ್ ಖಾಲಿಯಾಗಿದೆ ಎಂದು ಕೇಸರಿ ಪಡೆ ವಾಗ್ದಾಳಿ ನಡೆಸಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ: 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ
ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪImage Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 16, 2026 | 3:20 PM

Share

ಹುಬ್ಬಳ್ಳಿ/ಮಂಡ್ಯ, ಸೆಪ್ಟೆಂಬರ್​ 16: ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ ಸಂಬಂಧ ಹುಬ್ಬಳ್ಳಿ ಎಪಿಎಂಸಿ, ಧಾರವಾಡ‌ದ ವಿದ್ಯಾಗಿರಿ, ಶಹರ ಸೇರಿ ಒಟ್ಟು ಆರು ಕೇಸ್​​ಗಳು ದಾಖಲಾಗಿವೆ. ಶಬ್ದ ಮಾಲಿನ್ಯ ನಿಯಮ ಉಲ್ಲಂಘನೆ ಆರೋಪದಡಿ 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ ದಾಖಲಿಸಿರೋದೀಗ ವಿಪಕ್ಷ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಪಡೆ ಮುಗಿಬಿದ್ದಿದೆ.

‘ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ?’

ಮಸೀದಿಗಳಲ್ಲಿ ಆಜಾನ್​​ ಕೂಗುವವರ ಮೇಲೆ ಕೇಸ್​​ ಹಾಕದ ಇವರು ಡಿಜೆ ಮಾಲೀಕರ ಮೇಲೆ ಕೇಸ್ ಹಾಕ್ತಾರೆ. ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ? ಈ ರೀತಿ ಮಾಡಿಕೊಂಡೇ ಎಲ್ಲ ಕಡೆ ಕಾಂಗ್ರೆಸ್ ಖಾಲಿಯಾಗಿದೆ. ಮುಂದೆ ಕರ್ನಾಟಕದಲ್ಲೂ ಇದೇ ರೀತಿ ಆಗಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದ್ದಾರೆ. ನಮಗೆ ಮಸೀದಿ ಮುಂದೆ ಹೋಗಬೇಡಿ ಅಂತಾರೆ. ಅದೇ ಮುಸ್ಲಿಂ ಮೆರವಣಿಗೆ ವೇಳೆ ಹಿಂದೂ ದೇವಸ್ಥಾನದ ಮುಂದೆ ಹೋಗಬೇಡಿ ಎಂದು ಹೇಳಿದ್ದಾರಾ? ಈ ಬುದ್ಧಿಯ ಕಾರಣಕ್ಕೇ ಕಾಂಗ್ರೆಸ್​​ನ ಹಿಂದೂ ವಿರೋಧಿ ಎನ್ನುವುದು. ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವುದು ಸೋನಿಯಾ ಮತ್ತು ರಾಹುಲ್​​ ಗಾಂಧಿ ಅವರ ರಕ್ತದಲ್ಲೇ ಬಂದಿದೆ. ರಾಜ್ಯದ ಸಿಎಂ ಅವರು ಹೇಳಿದಂತೆ ಕೇಳ್ತಿದ್ದಾರೆ ಎಂದವರು ಕಿಡಿ ಕಾರಿದ್ದಾರೆ.

LIVE TV

ಇದನ್ನೂ ಓದಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ

‘ರಾಜ್ಯದಲ್ಲಿ ಇರೋದು ಹಿಂದೂ ವಿರೋಧಿ ಸರ್ಕಾರ’

ಕರ್ನಾಟಕ ರಾಜ್ಯದಲ್ಲಿ ಇರೋದು ಹಿಂದೂ ವಿರೋಧಿ ಸರ್ಕಾರ ಎಂದು ಮತ್ತೊಂದೆಡೆ ಪರಿಷತ್​​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದು, ಡಿಜೆ ಇಟ್ಟಿರುವವರ ಮೇಲೆ ಕೇಸ್ ಹಾಕಿದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮುಂದೆ ಇವರು ಗಣಪತಿ ಕೂರಿಸುವವರ ಮೇಲೂ ಕೇಸ್ ಹಾಕಬಹುದು. ಕಾಂಗ್ರೆಸ್​ನವರು ಉಮರ್ ಖಾಲಿದ್ ನ್ಯಾಷನಲಿಸ್ಟ್ ಅಂತಾರೆ. ಆದ್ರೆ ಜನ ಉಮರ್ ಖಾಲಿದ್ ಭಯೋತ್ಪಾದಕ ಎನ್ನುತ್ತಾರೆ‌ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ