ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ: 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ

ಗಣೇಶ ಮೆರವಣಿಗೆಯಲ್ಲಿ ನಿಯಮ ಮೀರಿ ಡಿಜೆ ಬಳಸಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡದಲ್ಲಿ 6 ಡಿಜೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದನ್ನು ವಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಮಸೀದಿಗಳಲ್ಲಿ ಆಜಾನ್​​ ಕೂಗುವವರ ಮೇಲೆ ಕೇಸ್​​ ಹಾಕದ ಇವರು ಡಿಜೆ ಮಾಲೀಕರ ಮೇಲೆ ಕೇಸ್ ಹಾಕ್ತಾರೆ. ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ? ಈ ರೀತಿ ಮಾಡಿಕೊಂಡೇ ಎಲ್ಲ ಕಡೆ ಕಾಂಗ್ರೆಸ್ ಖಾಲಿಯಾಗಿದೆ ಎಂದು ಕೇಸರಿ ಪಡೆ ವಾಗ್ದಾಳಿ ನಡೆಸಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ: 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ
ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ
Image Credit source: Tv9 Kannada
Edited By:

Updated on: Sep 16, 2026 | 3:20 PM

ಹುಬ್ಬಳ್ಳಿ/ಮಂಡ್ಯ, ಸೆಪ್ಟೆಂಬರ್​ 16: ಗಣೇಶ ಮೂರ್ತಿ ಮೆರವಣಿಗೆ ವೇಳೆ ನಿಯಮ ಮೀರಿ ಡಿಜೆ ಬಳಕೆ ಆರೋಪ ಸಂಬಂಧ ಹುಬ್ಬಳ್ಳಿ ಎಪಿಎಂಸಿ, ಧಾರವಾಡ‌ದ ವಿದ್ಯಾಗಿರಿ, ಶಹರ ಸೇರಿ ಒಟ್ಟು ಆರು ಕೇಸ್​​ಗಳು ದಾಖಲಾಗಿವೆ. ಶಬ್ದ ಮಾಲಿನ್ಯ ನಿಯಮ ಉಲ್ಲಂಘನೆ ಆರೋಪದಡಿ 6 ಮಂದಿ ಡಿಜೆ ಮಾಲೀಕರು, ಆಪರೇಟರ್​ಗಳ ವಿರುದ್ಧ ಪ್ರಕರಣ ದಾಖಲಿಸಿರೋದೀಗ ವಿಪಕ್ಷ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಪಡೆ ಮುಗಿಬಿದ್ದಿದೆ.

‘ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ?’

ಮಸೀದಿಗಳಲ್ಲಿ ಆಜಾನ್​​ ಕೂಗುವವರ ಮೇಲೆ ಕೇಸ್​​ ಹಾಕದ ಇವರು ಡಿಜೆ ಮಾಲೀಕರ ಮೇಲೆ ಕೇಸ್ ಹಾಕ್ತಾರೆ. ಯಾವತ್ತಾದರು ಮಸೀದಿಗಳಿಗೆ ನೋಟಿಸ್​​ ಕೊಟ್ಟಿದ್ದಾರಾ? ಈ ರೀತಿ ಮಾಡಿಕೊಂಡೇ ಎಲ್ಲ ಕಡೆ ಕಾಂಗ್ರೆಸ್ ಖಾಲಿಯಾಗಿದೆ. ಮುಂದೆ ಕರ್ನಾಟಕದಲ್ಲೂ ಇದೇ ರೀತಿ ಆಗಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದ್ದಾರೆ. ನಮಗೆ ಮಸೀದಿ ಮುಂದೆ ಹೋಗಬೇಡಿ ಅಂತಾರೆ. ಅದೇ ಮುಸ್ಲಿಂ ಮೆರವಣಿಗೆ ವೇಳೆ ಹಿಂದೂ ದೇವಸ್ಥಾನದ ಮುಂದೆ ಹೋಗಬೇಡಿ ಎಂದು ಹೇಳಿದ್ದಾರಾ? ಈ ಬುದ್ಧಿಯ ಕಾರಣಕ್ಕೇ ಕಾಂಗ್ರೆಸ್​​ನ ಹಿಂದೂ ವಿರೋಧಿ ಎನ್ನುವುದು. ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವುದು ಸೋನಿಯಾ ಮತ್ತು ರಾಹುಲ್​​ ಗಾಂಧಿ ಅವರ ರಕ್ತದಲ್ಲೇ ಬಂದಿದೆ. ರಾಜ್ಯದ ಸಿಎಂ ಅವರು ಹೇಳಿದಂತೆ ಕೇಳ್ತಿದ್ದಾರೆ ಎಂದವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ

‘ರಾಜ್ಯದಲ್ಲಿ ಇರೋದು ಹಿಂದೂ ವಿರೋಧಿ ಸರ್ಕಾರ’

ಕರ್ನಾಟಕ ರಾಜ್ಯದಲ್ಲಿ ಇರೋದು ಹಿಂದೂ ವಿರೋಧಿ ಸರ್ಕಾರ ಎಂದು ಮತ್ತೊಂದೆಡೆ ಪರಿಷತ್​​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದು, ಡಿಜೆ ಇಟ್ಟಿರುವವರ ಮೇಲೆ ಕೇಸ್ ಹಾಕಿದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮುಂದೆ ಇವರು ಗಣಪತಿ ಕೂರಿಸುವವರ ಮೇಲೂ ಕೇಸ್ ಹಾಕಬಹುದು. ಕಾಂಗ್ರೆಸ್​ನವರು ಉಮರ್ ಖಾಲಿದ್ ನ್ಯಾಷನಲಿಸ್ಟ್ ಅಂತಾರೆ. ಆದ್ರೆ ಜನ ಉಮರ್ ಖಾಲಿದ್ ಭಯೋತ್ಪಾದಕ ಎನ್ನುತ್ತಾರೆ‌ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us