AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್​: ಆರೋಪಿಗಳಿಗೆ ಖಾಕಿ ಶಾಕ್​, ನಾಲ್ವರು ಅರೆಸ್ಟ್​​

ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಹುಬ್ಬಳ್ಳಿಯಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಂದ 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಗೆ ಶಾಕ್​​ ಕೊಟ್ಟಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈ ಮತ್ತು ಗುಜರಾತ್ ಮೂಲದ ಆರೋಪಿಗಳಿಂದ ಚಿನ್ನಾಭರಣ, ನಗದು ಮತ್ತು ಮೊಬೈಲ್ ಫೋನ್​​ಗಳನ್ನು ವಶಕ್ಕೆ ಪಡೆಯಲಾಗಿದೆ.

ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್​: ಆರೋಪಿಗಳಿಗೆ ಖಾಕಿ ಶಾಕ್​, ನಾಲ್ವರು ಅರೆಸ್ಟ್​​
ಬಂಧಿತರಿಂದ ವಶಪಡಿಸಿಕೊಳ್ಳಲಾದ ವಸ್ತುಗಳು.
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 02, 2025 | 3:11 PM

Share

ಹುಬ್ಬಳ್ಳಿ, ಡಿಸೆಂಬರ್​​ 02: ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಸಂಬಂಧ 4 ಜನ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಅಂಕುಶ ಕದಂ, ಚಂದ್ರಶೇಖರ, ವಿಲಾಸ ಮೋಹಿತೆ ಹಾಗೂ ಗುಜರಾತ್​​ನ ವಡೋದರಾದ ಜಿಜ್ಞೇಶ್​​ ಕುಮಾರ್​ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 6,65,284 ರೂ. ಬೆಲೆಬಾಳುವ 56.26 ಗ್ರಾಂ ಚಿನ್ನದ ಒಡವೆಗಳು, 60 ಸಾವಿರ ರೂ. ನಗದು ಮತ್ತು 7 ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಲಾಗಿದೆ.

ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ಅಂಗಡಿಗಳಿಗೆ ಆಭರಣ ಪೂರೈಸುವ ವ್ಯವಹಾರ ಮಾಡುವ ಕೇರಳದ ವ್ಯಾಪಾರಿ ಸುದೀನ್ ಎಂ.ಆರ್​​. ಅವರನ್ನು ಹೆದರಿಸಿ, ಬರೋಬ್ಬರಿ 3 ಕೋಟಿ ರೂ. ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಗ್ಯಾಂಗ್​ ಒಂದು ಪರಾರಿಯಾಗಿತ್ತು. ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಹೊಂದಿಕೊಂಡಿರುವ ನೀಲಿಜನ್ ರಸ್ತೆಯಲ್ಲಿ ಘಟನೆ ನಡೆದಿತ್ತು. ನ. 15 ರಂದು ಮಂಗಳೂರಿನಿಂದ ಬೆಳಗಾವಿಗೆ ಕೆಲಸಗಾರ ವಿವೇಕ್​ ಜೊತೆ ಬಂದಿದ್ದ ಸುದೀನ್​​ ಅವರ ಬಳಿ ಇದ್ದ ಚೈನ್‌, ಬ್ರಾಸ್ಲೈಟ್, ಉಂಗುರ, ಕಿವಿಯೋಲೆ, ನೆಕ್ಲೆಸ್, ಲಾಕೆಟ್, ಬಳೆ ಸೇರಿ ಒಟ್ಟು 3.2 ಕೋಟಿ ರೂ. ಮೌಲ್ಯದ ಆಭರಣಗಳನ್ನು ಖದೀಮರು ದೋಚಿದ್ದರು.

ಇದನ್ನೂ ಓದಿ: ಇಡಿ ಅಧಿಕಾರಿ ಸೋಗಿನಲ್ಲಿ ಬಂದು 3 ಕೋಟಿ ರೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ

ಇ.ಡಿ ಅಧಿಕಾರಿಗಳು ಎಂದು ಹಿಂದಿಯಲ್ಲಿ ಮಾತನಾಡಿದ್ದ ಆರೋಪಿಗಳು, ಗುರುತಿನ ಪತ್ರ ತೋರಿಸಿ ವಿಚಾರಣೆಗೆ ಕಚೇರಿಗೆ ಬನ್ನಿ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ಚಿನ್ನಾಭರಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ ಎಂದು ಸುದೀನ್​​ರನ್ನು ಬೆದರಿಸಿತ್ತು. ಅಲ್ಲದೆ, ಅವರ ಮೊಬೈಲ್ ಫೋನ್ ಪಡೆದು ಸಿಮ್​​ ತೆಗೆದಿದ್ದ ಆರೋಪಿಗಳು, ನಂತರ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣವಿದ್ದ ಬ್ಯಾಗ್ ಕಿತ್ತುಕೊಂಡಿದ್ದರು. ಬೆಳಗಾವಿಯ ಕಿತ್ತೂರು ಸಮೀಪ ಕೆಲಸಗಾರ ವಿವೇಕ್​​ರನ್ನ ಕಾರಂದ ಇಳಿಸಿದ್ದ ಗ್ಯಾಂಗ್​​, ಸುದೀನ್​ರನ್ನು ಎಂ.ಕೆ. ಹುಬ್ಬಳ್ಳಿ ರಸ್ತೆಯ ಮಾರ್ಗ ಮಧ್ಯೆ ಬಿಟ್ಟಿತ್ತು. ಬಳಿಕ ನಗದು ಹಾಗೂ ಚಿನ್ನಾಭರಣಗಳ ಜೊತೆ ಎಸ್ಕೇಪ್​​ ಆಗಿತ್ತು. ಈ ಬಗ್ಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಮೊದಲು ಪ್ರಕರಣ ದಾಕಲಾಗಿದ್ದು, ಬಳಿಕ ಸಿಸಿಬಿಗೆ ಕೇಸ್​ ವಹಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:09 pm, Tue, 2 December 25

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!