AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು, ಆಗಲೇ ಎಲ್ಲವೂ ಸರಿ ಹೋಗುವುದು -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ

ಸಭೆಯನ್ನುದ್ದೇಶಿಸಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ, ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಆಗ ಮಾತ್ರ ಕನ್ನಡ ವಿಷಯದಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದರು.

ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು, ಆಗಲೇ ಎಲ್ಲವೂ ಸರಿ ಹೋಗುವುದು -ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ
ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ
TV9 Web
| Edited By: ಆಯೇಷಾ ಬಾನು|

Updated on:Jun 24, 2022 | 5:35 PM

Share

ಧಾರವಾಡ: ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಆಗ ಮಾತ್ರ ಕನ್ನಡ ವಿಷಯದಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಧಾರವಾಡದಲ್ಲಿ ನಡೆದ ಸಭೆಯಲ್ಲಿ ಹೇಳಿದ್ದಾರೆ. ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya Sammelana) ಆಯೋಜನೆ ಹಿನ್ನೆಲೆ ಸಾಹಿತ್ಯ ಭವನದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆ ಬಗ್ಗೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನೇತೃತ್ವದಲ್ಲಿ ಸಾಹಿತಿಗಳ ಸಭೆ ನಡೆಸಲಾಗುತ್ತಿದೆ.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ, ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಆಗ ಮಾತ್ರ ಕನ್ನಡ ವಿಷಯದಲ್ಲಿ ಎಲ್ಲವೂ ಸರಿ ಹೋಗುತ್ತದೆ. ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಬಳಿಕ ರಾಜ್ಯ ಸರ್ಕಾರಿ ನೌಕರರ ಮಕ್ಕಳೂ ಕನ್ನಡದಲ್ಲೇ ಕಲಿಯಬೇಕು. ಈ ಬಗ್ಗೆ ಕನ್ನಡ ಸಮ್ಮೇಳನದಲ್ಲಿ ನಿರ್ಣಯ ಮಾಡಲಾಗುವುದು. ಆ ನಿರ್ಣಯಗಳನ್ನ ಅನುಷ್ಠಾನ ಮಾಡಿಸಬೇಕು. ಇಲ್ಲದೇ ಹೋದಲ್ಲಿ ಕನ್ನಡ ವಿಷಯ ಬಹಳ ಕಷ್ಟವಿದೆ. ನಿಜವಾಗಿಯೂ ನಮಗೆ ಭಯ ಆಗುತ್ತಿದೆ ಎಂದರು. ಇದನ್ನೂ ಓದಿ: ಅಗ್ನಿಪಥ್ ಯುವಜನಾಂಗಕ್ಕೆ ಹಾನಿಕಾರಕ, ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸಿ: ಮೋದಿಗೆ ಕೇಜ್ರಿವಾಲ್ ಒತ್ತಾಯ

ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸದಿದ್ರೆ ಹೇಗೆ? ಇನ್ನು ಈ ಸಂಬಂಧ ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದ್ದೇವೆ. ಆಡಳಿತಾತ್ಮಕ ಆದೇಶವಾಗಬೇಕಿದೆ. ಕನ್ನಡ ಶಾಲೆಗಳು ದುಸ್ಥಿತಿಗೆ ಹೋಗಿವೆ. ಇದೇ ಮುಂದುವರೆದರೆ 10 ವರ್ಷದಲ್ಲಿ ಕನ್ನಡ ಉಳಿಯುವುದಿಲ್ಲ. ಕನ್ನಡ ಸಂಘಟನೆ, ಕಸಾಪ ಯಾವುದೂ ಇರೋದಿಲ್ಲ. ಹೀಗಾಗಿ ಈ ಸಂಬಂಧ ಎಸ್.ಎಲ್. ಭೈರಪ್ಪ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಕನ್ನಡ ಕಲಿಸೋ ಶಿಕ್ಷಕರ ಮಕ್ಕಳು ಕನ್ನಡ ಕಡ್ಡಾಯ ಕಲಿಯಬೇಕು. ನಮ್ಮ ತೆರಿಗೆಯಿಂದ ಅವರು ಸಂಬಳ ಪಡೆಯುತ್ತಿದ್ದಾರೆ. ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಕಳುಹಿಸದಿದ್ರೆ ಹೇಗೆ? ನೈತಿಕವಾದ ಜವಾಬ್ದಾರಿ ಇರಬೇಕಲ್ಲವೇ? ಶಿಕ್ಷಕರೇ ಕನ್ನಡ ಉಳಿಸೋ ಕೆಲಸ ಮಾಡಬೇಕು. ಸರ್ಕಾರಿ ನೌಕರರು, ಮಂತ್ರಿಗಳ ಮಕ್ಕಳೂ ಕನ್ನಡ ಶಾಲೆಗೆ ಕಳುಹಿಸಬೇಕು. ಶಿಕ್ಷಕರ ಬಗ್ಗೆ ಪ್ರಸ್ತಾವನೆ ಶಿಕ್ಷಣ ಸಚಿವರಿಗೆ ಸಲ್ಲಿಸಲಾಗಿದೆ. ಸರ್ಕಾರ ಪರಿಶೀಲಿಸುವುದಾಗಿ ಹೇಳಿದೆ. ಇದಕ್ಕೆ ಕಾಯಿದೆ, ಕಾನೂನು ಬೇಕಾಗಿಲ್ಲ. ಆಡಳಿತಾತ್ಮಕ ಆದೇಶವಾದರೆ ಸಾಕು ಎಂದು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ

Published On - 4:48 pm, Fri, 24 June 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ