AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣ: ಪತಿಯ ಸಾವಿನ ನ್ಯಾಯ ಕೇಳಿ ಅಲೆದಾಡುತ್ತಿದ್ದ ದೀಪಕ್ ಪತ್ನಿ ಆತ್ಮಹತ್ಯೆ

ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ಸಾವಿಗೆ ನ್ಯಾಯ ಕೇಳುತ್ತಾ ಅಲೆದಾಡುತ್ತಿದ್ದ ದೀಪಕ್ ಪತ್ನಿ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣ: ಪತಿಯ ಸಾವಿನ ನ್ಯಾಯ ಕೇಳಿ ಅಲೆದಾಡುತ್ತಿದ್ದ ದೀಪಕ್ ಪತ್ನಿ ಆತ್ಮಹತ್ಯೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 28, 2022 | 10:53 PM

Share

ಧಾರವಾಡ: ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ (Deepak Pathadari) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ (Husband) ಸಾವಿಗೆ ನ್ಯಾಯ ಕೇಳುತ್ತಾ ಅಲೆದಾಡುತ್ತಿದ್ದ ದೀಪಕ್ ಪತ್ನಿ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ದೀಪಕ್ ಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಪತಿಯ ಸಾವಿಗೆ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪುಷ್ಪಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಷ್ಪ ನವನಗರದ ಸಂಬಂಧಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿದ್ದಾರೆ. ಪುಷ್ಪಾ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ.+

ಗ್ರಾ.ಪಂ ಸದಸ್ಯನ ಕೊಲೆ ಪ್ರಕರಣ: ಸೈಲೆಂಟಾಗಿ ಇದ್ದಷ್ಟು ನಿನಗೆ ಒಳ್ಳೆಯದು ಅಂತ ಪೊಲೀಸರು ವಾರ್ನಿಂಗ್​ ಕೊಟ್ಟ ಆಡಿಯೋ ಬಿಡುಗಡೆ

ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ, ಕೊಲೆ ನಡೆದ ಮೂರು ತಿಂಗಳ ಬಳಿಕ ಆಡಿಯೋವೊಂದು ಹೊರಬಿದ್ದಿದೆ. ಈ ಆಡಿಯೋ ಪೊಲೀಸರತ್ತಲೇ ಅನೇಕ ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ.ಹುಬ್ಬಳ್ಳಿ ತಾಲೂಕಿನ ಗಂಗಿನಾಳ ನಿವಾಸಿ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯ ದೀಪಕ್​ ಪಟದಾರಿ, ರಾಜಕೀಯ ನಾಯಕರ ಜೊತೆ ಸಂಪರ್ಕ ಹೊಂದಿದ್ರು. ಆದ್ರೆ, ಕೆಲ ಹಂತಕರು ಕಳೆದ ಜುಲೈನಲ್ಲಿ ದೀಪಕ್​​​​​​ನನ್ನ ಭೀಕರವಾಗಿ ಹತ್ಯೆ ಮಾಡಿದ್ರು. ರಾತ್ರಿ ಹೊತ್ತಲ್ಲಿ ಆಯುಧದಿಂದ ಕೊಚ್ಚಿಕೊಂದಿದ್ರು. ಇದೀಗ, ದೀಪಕ್ ಸಾವಿನ ಹತ್ಯೆ ಹತ್ತಾರು ಸಂಶಯಗಳು ಮೂಡಿವೆ. ಅದ್ರಲ್ಲೂ, ಪೊಲೀಸರತ್ತಲೇ ನೇರಾನೇರಾ ಆರೋಪ ಕೇಳಿ ಬಂದಿದೆ.

ದೀಪಕ್​ ಪಟದಾರಿ ನ್ಯೂಟ್ರಲ್​ ಆಗಿ ಇದ್ಬಿಡು. ಸೈಲೆಂಟಾಗಿ ಇದ್ದಷ್ಟು ನಿನಗೂ ಒಳ್ಳೆಯದು ಅಂತ ವಾರ್ನಿಂಗ್​ ಕೊಟ್ಟ ಆಡಿಯೋ ಬಿಡುಗಡೆಯಾಗಿದೆ. ಹತ್ಯೆಯಾಗಿರುವ ದೀಪಕ್​​ಗೆ ಕರೆ ಮಾಡಿ ಫೋನ್​ಕಾಲ್​​ನಲ್ಲೇ ವಾರ್ನಿಂಗ್​ ಕೊಟ್ಟಿದ್ದಾರೆ ಎಂಬಲಾದ ಆಡಿಯೋ ಹೊರ ಬಿದ್ದಿದೆ. ಆದ್ರೆ, ದೀಪಕ್​​​​ಗೆ ಹೀಗೆ ಧಮ್ಕಿ ಹಾಕಿದ್ದು ಪೊಲೀಸರು ಅಂತ ಆರೋಪ ಕೇಳಿ ಬಂದಿದೆ. ದೀಪಕ್​ ಹತ್ಯೆಗೂ 15 ದಿನ ಮುಂಚೆ ಹಳೇ ಹುಬ್ಬಳ್ಳಿ ಠಾಣೆಯ ಎಎಸ್​​ಐ ಪರಶುರಾಮ್​ ಕಾಳೆ ದೀಪಕ್​​ಗೆ ಕರೆ ಮಾಡಿ, ಸೈಲೆಂಟಾಗಿರುವ ಅಂತ ಎಚ್ಚರಿಕೆ ಕೊಟ್ಟಿದ್ರಂತೆ. ವಾಟ್ಸಾಪ್​​ನಲ್ಲೂ ವಾರ್ನಿಂಗ್ ಮಾಡಿದ್ದಾರೆ ಅಂತ ದೀಪಕ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪರಶುರಾಮ್ ಕಾಳೆ ಹಾಗೂ ನಾಗರಾಜ್ ಕೆಂಚಮ್ಮನ್ನವರ ಎಂಬ ಸಿಬ್ಬಂದಿ ಮೇಲೆ, ದೀಪಕ್ ಕುಟುಂಬಸ್ಥರು ಹತ್ತಾರು ಆರೋಪ ಮಾಡಿದ್ದಾರೆ. ರಾಜಕೀಯವಾಗಿ ದೀಪಕ್​ ಬೆಳೆಯುತ್ತಿದ್ದ ಅಂತಲೇ ಅವರ ಹತ್ಯೆ ನಡೆದಿದೆ. ಆದ್ರೆ, ಪೊಲೀಸ್​ ಅಧಿಕಾರಿಗಳು ಆರೋಪಿಗಳ ಬೆನ್ನಲುಬಾಗಿ ನಿಂತಿದ್ದು, ಸಾಕ್ಷಿ ನಾಶ ಮಾಡಿದ್ದಾರೆ ಅಂತ, ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು, ಪತಿಯ ಹತ್ಯೆಯಿಂದ ಕಂಗಾಲಾಗಿರುವ ಗರ್ಭಿಣಿ ಪತ್ನಿ, ನ್ಯಾಯಕ್ಕಾಗಿ ಕಣ್ಣೀರು ಹಾಕ್ತೀದಾರೆ.

ಒಟ್ಟಾರೆ ಗ್ರಾಪಂ ಸದಸ್ಯನ ಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಆಡಿಯೋ ಹಾಗೂ ವಾಟ್ಸಪ್ ಮೆಸೆಜ್ ನೋಡಿದ್ರೆ ಪೊಲೀಸರ ಕೈವಾಡದ ಶಂಕೆ ವ್ಯಕ್ತವಾಗಿದೆ. ಹಿರಿಯ ಅಧಿಕಾರಿಗಳು ಇದ್ರತ್ತ ಯಾವ ರೀತಿ ಗಮನ ವಹಿಸ್ತಾರೆ ನೋಡ್ಬೆಕು.

ವರದಿ: ಶಿವಕುಮಾರ್ ಪತ್ತಾರ್​, ಟಿವಿ9 ಹುಬ್ಬಳ್ಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:24 pm, Wed, 28 September 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್