AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ವಿದ್ಯುತ್‌ ಕೊಟ್ಟರೆ ದುರುಪಯೋಗವಾಗುತ್ತದೆ ಎಂಬ ಮಾತಿತ್ತು, ಆದರೆ 8 ಜಿಲ್ಲೆಗಳ ಗ್ರಾಹಕರು ನಿರೀಕ್ಷೆಗೂ ಮೀರಿ ಕಡಿಮೆ ವಿದ್ಯುತ್ ಬಳಸಿದ್ದಾರೆ! ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ

ಸರಕಾರ ಉಚಿತ ವಿದ್ಯುತ್ ಕೊಡುತ್ತಿದೆ ಎಂಬ ಕಾರಣಕ್ಕೆ ಗ್ರಾಹಕರು ಅನಗತ್ಯವಾಗಿ ಬಳಕೆ ಮಾಡದೇ ಅವಶ್ಯಕತೆಗೆ ತಕ್ಕಂತೆ ಉಪಯೋಗಿಸುವ ಮೂಲಕ ಜವಾಬ್ದಾರಿ ಮೆರೆದಿದ್ದಾರೆ. ತಿಂಗಳಿಂದ ತಿಂಗಳಿಗೆ ವಿದ್ಯುತ್ ಬಳಕೆ ಕಡಿಮೆಯಾಗುತ್ತಿರುವುದು ಕೂಡ ಗಮನಾರ್ಹ ಸಂಗತಿ. ಹೆಸ್ಕಾಂ ವ್ಯಾಪ್ತಿಯಲ್ಲಿ ಕಂಡುಬಂದ ಈ ಅಂಕಿ-ಅಂಶ ರಾಜ್ಯ ಸರಕಾರದ ವಿರುದ್ದ ನಿರಂತರವಾಗಿ ಆರೋಪ ಮಾಡುತ್ತಾ ಬಂದಿದ್ದ ಬಿಜೆಪಿ ಪಾಲಿಗೆ ಬಿಸಿತುಪ್ಪವಾಗಿದೆ.

ಉಚಿತ ವಿದ್ಯುತ್‌ ಕೊಟ್ಟರೆ ದುರುಪಯೋಗವಾಗುತ್ತದೆ ಎಂಬ ಮಾತಿತ್ತು, ಆದರೆ 8 ಜಿಲ್ಲೆಗಳ ಗ್ರಾಹಕರು ನಿರೀಕ್ಷೆಗೂ ಮೀರಿ ಕಡಿಮೆ ವಿದ್ಯುತ್ ಬಳಸಿದ್ದಾರೆ! ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ
ಹೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರು ನಿರೀಕ್ಷೆಗೂ ಮೀರಿ ಕಡಿಮೆ ವಿದ್ಯುತ್ ಬಳಸಿದ್ದಾರೆ!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 22, 2023 | 12:37 PM

Share

ಕಾಂಗ್ರೆಸ್ ಸರಕಾರದ ಉಚಿತ ವಿದ್ಯುತ್ ಗ್ಯಾರಂಟಿ ಯೋಜನೆಯಾದ ‘ಗೃಹ ಜ್ಯೋತಿ’ ಜಾರಿಯಾದರೆ ರಾಜ್ಯದಲ್ಲಿ ವಿದ್ಯುತ್ ಬಳಕೆ (Electricity) ಹೆಚ್ಚಾಗಲಿದೆ ಎನ್ನಲಾಗಿತ್ತು. ಆದರೆ ಹೆಸ್ಕಾಮ್​​ ವ್ಯಾಪ್ತಿಯಲ್ಲಿ ಇದು ಸುಳ್ಳಾಗಿ ಪರಿಣಮಿಸಿದೆ. ಈ ಯೋಜನೆ (Gruha Jyothi) ಆರಂಭವಾಗೋದಕ್ಕಿಂತ ಮುಂಚೆ ಮತ್ತು ಆರಂಭವಾದ ಬಳಿಕ ಕಂಡು ಬಂದ ಬೇಡಿಕೆ ನೋಡಿದರೆ ಅಚ್ಚರಿಯ ಅಂಕಿ-ಅಂಶಗಳು ಬಯಲಿಗೆ ಬಂದಿವೆ. ಏನದು? ಇಲ್ಲಿದೆ ನೋಡಿ.

ಉಚಿತ ವಿದ್ಯುತ್‌ ನೀಡಿದರೆ ದುರುಪಯೋಗ ಹೆಚ್ಚಾಗುತ್ತದೆ ಅನ್ನೋ ಆರೋಪ ಇಟ್ಟುಕೊಂಟು ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಭರವಸೆ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು, 200 ಯೂನಿಟ್ ಉಚಿತ ವಿದ್ಯುತ್ ನೀಡೋ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಜಾರಿಯಾದರೆ ವಿದ್ಯುತ್‌ನ್ನು ಬೇಕಾಬಿಟ್ಟಿ ಬಳಸುತ್ತಾರೆ, ಇದು ಸರಕಾರಕ್ಕೆ ಹೊರೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಆದರೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (Hubli Electricity Supply Company -HESCOM) ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರು ವಿದ್ಯುತ್ ಬಳಕೆಯಲ್ಲಿ ಮಿತವ್ಯಯ ಸಾಧಿಸುವ ಮೂಲಕ ಇದನ್ನು ಸುಳ್ಳು ಮಾಡಿದ್ದಾರೆ. ಹೌದು, ಗೃಹ ಜ್ಯೋತಿ ಯೋಜನೆ ಜಾರಿಗೆ ಮುನ್ನ ಮತ್ತು ತದನಂತರದಲ್ಲಿನ ವಿದ್ಯುತ್ ಬಳಕೆಯ ಅಂಕಿ ಸಂಖ್ಯೆಗಳನ್ನು ಗಮನಿಸಿದರೆ ನಿರೀಕ್ಷೆಗೂ ಮೀರಿ ಕಡಿಮೆ ವಿದ್ಯುತ್ ಬಳಸುವ ಮೂಲಕ ಗ್ರಾಹಕರು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ ಎಂದು ಮಹಮ್ಮದ್ ರೋಷನ್, ಎಂ.ಡಿ, ಹೆಸ್ಕಾಂ ತಿಳಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಗೃಹ ಜ್ಯೋತಿ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ 202 ದಶಲಕ್ಷ ಯೂನಿಟ್ ಬಳಕೆಯಾಗಿದ್ದರೆ, ಅಕ್ಟೋಬರ್ ತಿಂಗಳಲ್ಲಿ 161.88 ದಶಲಕ್ಷ ಯೂನಿಟ್ ವಿದ್ಯುತ್‌ನ್ನು ಗ್ರಾಹಕರು ಉಪಯೋಗಿಸಿದ್ದಾರೆ. ಆಗಸ್ಟ್‌ನಲ್ಲಿ 152.36 ದಶಲಕ್ಷ ಯೂನಿಟ್, ಸೆಪ್ಟೆಂಬರ್‌ನಲ್ಲಿ 168.51 ದಶಲಕ್ಷ ಯೂನಿಟ್ ವಿದ್ಯುತ್ ಬಳಕೆಯಾಗಿರುವ ಬಗ್ಗೆ ಹೆಸ್ಕಾಂ ಮಾಹಿತಿ ಒದಗಿಸಿದೆ.

ಸರಕಾರ ಉಚಿತ ವಿದ್ಯುತ್ ಕೊಡುತ್ತಿದೆ ಎಂಬ ಕಾರಣಕ್ಕೆ ಗ್ರಾಹಕರು ಅನಗತ್ಯವಾಗಿ ಬಳಕೆ ಮಾಡದೇ ಅವಶ್ಯಕತೆಗೆ ತಕ್ಕಂತೆ ಉಪಯೋಗಿಸುವ ಮೂಲಕ ಜವಾಬ್ದಾರಿ ಮೆರೆದಿದ್ದಾರೆ. ತಿಂಗಳಿಂದ ತಿಂಗಳಿಗೆ ವಿದ್ಯುತ್ ಬಳಕೆ ಕಡಿಮೆಯಾಗುತ್ತಿರುವುದು ಕೂಡ ಗಮನಾರ್ಹ ಸಂಗತಿ. ಇದಲ್ಲದೇ ವಿದ್ಯುತ್ ಬಿಲ್‌ನಲ್ಲಿಯೂ ಸಹ ಗಣನೀಯವಾಗಿ ಇಳಿಕೆಯಾಗಿದೆ. ಜೂನ್ ತಿಂಗಳಲ್ಲಿ ರೂ. 248.23, ಜುಲೈ ತಿಂಗಳಲ್ಲಿ ರೂ. 175.16, ಆಗಸ್ಟ್‌ನಲ್ಲಿ ರೂ. 159 ಕೋಟಿ, ಸಪ್ಟೆಂಬರ್‌ನಲ್ಲಿ ರೂ. 162.32 ಕೋಟಿ ಹಾಗೂ ಅಕ್ಟೋಬರ್‌ನಲ್ಲಿ ರೂ. 153 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ.‌

Also read: ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದ ಬೆಂಗಳೂರು-ಹುಬ್ಬಳಿ ಸೂಪರ್ ಫಾಸ್ಟ್ ರೈಲು ಉಸಿರು ನಿಲ್ಲಿಸಿದೆ, ಇದು ಉಚಿತ ಬಸ್​​ ಯೋಜನೆ ಎಫೆಕ್ಟ್​!

ಇದೆಲ್ಲಕ್ಕಿಂತ ಮುಖ್ಯವಾಗಿ ಬೆಳಕಿನ ಹಬ್ಬ ದೀಪಾವಳಿ ಸಮಯದಲ್ಲಿ ಹೆಚ್ಚೆಚ್ಚು ಪ್ರಮಾಣದಲ್ಲಿ ವಿದ್ಯುತ್ ಬಳಕೆಯಾಗುತ್ತದೆ ಎಂಬುದು ಸಾರ್ವತ್ರಿಕ ನಂಬಿಕೆ. ಆದರೆ ಹೇಳಿಕೊಳ್ಳುವಷ್ಟು ಅತ್ಯಧಿಕ ಪ್ರಮಾಣದ ಯೂನಿಟ್ ಬಳಕೆಯಾಗಿಲ್ಲ ಎಂಬುದು ಕಂಡು ಬಂದಿದೆ. ನವೆಂಬರ್ 12, 13 ಮತ್ತು 14 ಈ ಮೂರು ದಿನಗಳವರೆಗಿನ ದೀಪಾವಳಿ ಹಬ್ಬದಲ್ಲಿ ಸರಾಸರಿ 45.44 ದಶಲಕ್ಷ ಯೂನಿಟ್ ಬಳಕೆಯಾಗಿದ್ದರೆ, ಇದರ ಹಿಂದಿನ ಮೂರು ದಿನ ಅಂದರೆ ನವೆಂಬರ್ 9, 10, 11ರಂದು ಸರಾಸರಿ 44.33 ದಶಲಕ್ಷ ಯೂನಿಟ್ ವಿದ್ಯುತ್ ಬಳಕೆಯಾಗಿದೆ. ಒಟ್ಟಿನಲ್ಲಿ ಹೆಸ್ಕಾಂ ವ್ಯಾಪ್ತಿಯಲ್ಲಿ ಕಂಡುಬಂದ ಈ ಅಂಕಿ-ಅಂಶಗಳು ರಾಜ್ಯ ಸರಕಾರದ ವಿರುದ್ದ ನಿರಂತರವಾಗಿ ಆರೋಪ ಮಾಡುತ್ತಾ ಬಂದಿದ್ದ ಬಿಜೆಪಿ ಪಾಲಿಗೆ ಬಿಸಿತುಪ್ಪವಾಗಿದ್ದು ಮಾತ್ರ ಸತ್ಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!