AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್, ಸಾಫ್ಟ್​ವೇರ್​ನಿಂದ ಯಾವ ದೇಶವೂ ಅಭಿವೃದ್ಧಿಯಾಗಲ್ಲ: ಹರೀಶ್ ಹಂದೆ

ಅನುಭವಿ ರೈತರನ್ನು ಕೃಷಿ ತಜ್ಞರು ಎಂದು ಯಾರೂ ಪರಿಗಣಿಸುವುದೂ ಇಲ್ಲ. ಅಂಥ ರೈತರಿಂದ ಕೃಷಿ ವಿವಿಗಳಲ್ಲಿ ಕಲಿಸುವಂಥ ಪದ್ಧತಿ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಆ್ಯಪ್, ಸಾಫ್ಟ್​ವೇರ್​ನಿಂದ ಯಾವ ದೇಶವೂ ಅಭಿವೃದ್ಧಿಯಾಗಲ್ಲ: ಹರೀಶ್ ಹಂದೆ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸೆಲ್ಕೊ ಕಂಪನಿಯ ಸಿಇಒ ಹರೀಶ್ ಹಂದೆ ಪಾಲ್ಗೊಂಡಿದ್ದರು.
TV9 Web
| Edited By: |

Updated on: Oct 18, 2021 | 9:24 PM

Share

ಧಾರವಾಡ: ಆ್ಯಪ್ ಅಥವಾ ಸಾಫ್ಟ್​ವೇರ್​ಗಳಿಂದ ಯಾವುದೇ ದೇಶ ಅಭಿವೃದ್ಧಿಯಾಗಿಲ್ಲ. ರೈತರ ಅಭಿವೃದ್ಧಿಯಾದಾಗ ಮಾತ್ರ ಸುಸ್ಥಿರ ಪ್ರಗತಿ ಸಾಧ್ಯ ಎಂದು ಸೆಲ್ಕೊ ಇಂಡಿಯಾ ಕಂಪನಿಯ ಸಂಸ್ಥಾಪಕ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಉದ್ಯಮಿ ಡಾ.ಹರೀಶ್ ಹಂದೆ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಪುನಃ 1970ರ ಹಸಿರು ಕ್ರಾಂತಿ ಆಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸಲೀಸಾಗಿ ಪದವಿ ಸಿಗುತ್ತದೆ. ಆದರೆ ಅನುಭವಿ ರೈತರಿಗೆ ಯಾವುದೇ ಪದವಿಗಳು ಸಿಗುವುದಿಲ್ಲ. 40 ವರ್ಷ ಕಬ್ಬು ಬೆಳೆದ ರೈತನಿಗೆ ಪದವಿ ಸಿಗುವುದಿಲ್ಲ. ಅನುಭವಿ ರೈತರನ್ನು ಕೃಷಿ ತಜ್ಞರು ಎಂದು ಯಾರೂ ಪರಿಗಣಿಸುವುದೂ ಇಲ್ಲ. ಅಂಥ ರೈತರಿಂದ ಕೃಷಿ ವಿವಿಗಳಲ್ಲಿ ಕಲಿಸುವಂಥ ಪದ್ಧತಿ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

2030ಕ್ಕೆ ಸುಸ್ಥಿರ ಅಭಿವೃದ್ಧಿ ದೇಶದ ಪರಿಕಲ್ಪನೆ ಹೇಗಿರಬೇಕು ಎಂದು ವಿಶ್ವಸಂಸ್ಥೆ ಒಂದು ರೂಪುರೇಷೆ ನೀಡಿದೆ. ಭಾರತವು ಸುಸ್ಥಿರ ಅಭಿವೃದ್ಧಿ ದೇಶ ಆಗುವ ಸಾಧ್ಯತೆಯು ರೈತರ ಕೈಲಿದೆ. ಕೃಷಿ ಕ್ಷೇತ್ರದಲ್ಲಿ ಇಂದು ಹೆಚ್ಚಿನ ಆವಿಷ್ಕಾರಗಳು ನಡೆಯಬೇಕಿದೆ. ಌಪ್, ಸಾಫ್ಟ್​ವೇರ್​ ಆವಿಷ್ಕಾರಗಳಿಗಿಂತಲೂ ಉತ್ತಮ ಕೃಷಿ ಆವಿಷ್ಕಾರಗಳು ಹೆಚ್ಚಾಗಬೇಕಿದೆ. ಕೃಷಿ ಪದವೀಧರರಿಂದ 1970ರ ಹಸಿರು ಕ್ರಾಂತಿ ಮರುಕಳಿಸಬೇಕಿದೆ. ಕೃಷಿ ಪದವೀಧರರು ಹೊಸ ತಲೆಮಾರಿನ ರೈತರನ್ನು ಸೃಷ್ಟಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ದಾಖಲೆಯ ಬಿತ್ತನೆ ಬೀಜ ಮಾರಾಟ; ಕೃಷಿ ಮೇಳ ನಡೆಸದೆಯೂ ಸಾಧನೆ ಇದನ್ನೂ ಓದಿ: Rail Roko Agitation: ರೈಲು ಹಳಿಗಳ ಮೇಲೆ ಪ್ರತಿಭಟನೆಗೆ ಕುಳಿತ ರೈತರು; 160ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!