AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ

ಕಲಘಟಗಿಯ ಹರ್ಷ ಎಂಟರ್‌ಟೈನ್‌ಮೆಂಟ್ ಬಹುಕೋಟಿ ವಂಚನೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಹತ್ತು ವರ್ಷಗಳ ಹಿಂದೆ ಸಾವಿರಾರು ಹೂಡಿಕೆದಾರರನ್ನು ಮೋಸಗೊಳಿಸಿದ್ದ ಖಾಸನೀಸ್ ಸಹೋದರರ ವಿರುದ್ಧ ಜಿಲ್ಲಾಡಳಿತವು ಕ್ಲೇಮ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಜಪ್ತಿ ಮಾಡಿದ ಆಸ್ತಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹಣ ಕಳೆದುಕೊಂಡ ಸಂತ್ರಸ್ತರಲ್ಲಿ ಅಲ್ಪ ಪ್ರಮಾಣದ ಮರುಪಾವತಿಯ ಆಶಾಭಾವನೆ ಚಿಗುರಿದೆ.

ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ
ಹರ್ಷ ಎಂಟರ್‌ಟೈನ್‌ಮೆಂಟ್ ವಂಚನೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: May 13, 2026 | 6:58 PM

Share

ಧಾರವಾಡ, ಮೇ.13: ಹತ್ತು ವರ್ಷಗಳ ಹಿಂದೆ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕಲಘಟಗಿಯ ಖಾಸನೀಸ್ ಸಹೋದರರ ‘ಹರ್ಷ ಎಂಟರ್ಟೈನ್‌ಮೆಂಟ್’ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ವಂಚನೆಗೆ ಒಳಗಾದ ಹೂಡಿಕೆದಾರರಿಂದ ಜಿಲ್ಲಾಡಳಿತವು ಕ್ಲೇಮ್ ಅರ್ಜಿಗಳನ್ನು ಪಡೆಯುತ್ತಿರುವುದು ಸಂತ್ರಸ್ತರಲ್ಲಿ ಅಲ್ಪ ಆಸೆ ಚಿಗುರಿಸಿದೆ.

2016-17ರಲ್ಲಿ ಕಲಘಟಗಿಯ ಸತ್ಯಬೋಧ, ಸಂಜೀವ್ ಮತ್ತು ಶ್ರೀಕಾಂತ್ ಖಾಸನೀಸ್ ಎಂಬ ಸಹೋದರರು ‘ಹರ್ಷ ಎಂಟರ್ಟೈನ್‌ಮೆಂಟ್’ ಕಂಪನಿ ಸ್ಥಾಪಿಸಿ, ಶೇ. 7ರಷ್ಟು ಬಡ್ಡಿ ನೀಡುವ ಆಸೆ ತೋರಿಸಿ ಸಾರ್ವಜನಿಕರಿಂದ ನೂರಾರು ಕೋಟಿ ರೂಪಾಯಿ ಹೂಡಿಕೆ ಮಾಡಿಸಿದ್ದರು. ಷೇರು ಮಾರುಕಟ್ಟೆ ಮತ್ತು ಸಿನೆಮಾ ನಿರ್ಮಾಣದಲ್ಲಿ ಈ ಹಣ ಹೂಡಿ ನಷ್ಟ ಅನುಭವಿಸಿದಾಗ, ಸುಮಾರು 8,000 ಜನರು ತಮ್ಮ ಹಣ ಕಳೆದುಕೊಂಡು ಬೀದಿಗೆ ಬಿದ್ದಿದ್ದರು.

ವಂಚನೆಗೆ ಒಳಗಾದವರಿಂದ ಜಿಲ್ಲಾಡಳಿತವು ಏಪ್ರಿಲ್ 27 ರಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು, ಮೇ 26ರ ವರೆಗೆ ಅವಕಾಶ ನೀಡಲಾಗಿದೆ. ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಬೆಳಗಾವಿ ಜಿಲ್ಲೆಯ ಸಾವಿರಾರು ಜನರು ಸರತಿಯಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದಾರೆ.ಈಗಾಗಲೇ ಸಿಐಡಿ ತನಿಖೆಯ ವೇಳೆ ಜಪ್ತಿಯಾಗಿದ್ದ ಕೆಲವು ವಾಹನಗಳನ್ನು (ಬುಲೆಟ್, ಓಮಿನಿ ಮತ್ತು ಇನ್ನೋವಾ) ಹರಾಜು ಮಾಡಲಾಗಿದ್ದು, ಸುಮಾರು 9.30 ಲಕ್ಷ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ: 85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಜಪ್ತಿಯಾಗಿರುವ ಮನೆ, ಜಮೀನು ಸೇರಿದಂತೆ ಇತರ ಸ್ಥಿರ ಆಸ್ತಿಗಳ ಹರಾಜು ಪ್ರಕ್ರಿಯೆಗೆ ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದೆ. ದಶಕದ ಹಿಂದೆ ಹಣ ಕಳೆದುಕೊಂಡು ಕಂಗಾಲಾಗಿದ್ದ ವೃದ್ಧರು ಮತ್ತು ಅವರ ಕುಟುಂಬಸ್ಥರು, ಬಿಸಿಲು-ಮಳೆ ಎನ್ನದೇ ಅರ್ಜಿ ಸಲ್ಲಿಸುತ್ತಿದ್ದು, “ಕಳೆದುಕೊಂಡ ಹಣದಲ್ಲಿ ಅಲ್ಪ ಪ್ರಮಾಣವಾದರೂ ಮರಳಿ ಸಿಗಬಹುದು” ಎಂಬ ಆಶಾವಾದ ಹೊಂದಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ