AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ರಸ್ತೆ ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿದ್ದ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು.ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್​ಪೆಕ್ಟರ್​​​ ಸಜೀವ ದಹನವಾಗಿರುವ ದಾರೂಣ ಘಟನೆ ನಡೆದಿದೆ. ಹಾಗಾದ್ರೆ, ಈ ದುರ್ಘಟನೆ ಸಂಭವಿಸಿದ್ದೆಲ್ಲಿ? ಹೇಗಾಯ್ತು ಎನ್ನುವ ವಿವರ ಈ ಕೆಳಗಿನಂತಿದೆ.

ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ
Sp Salimath
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Dec 05, 2025 | 11:02 PM

Share

ಧಾರವಾಡ, (ಡಿಸೆಂಬರ್ 04):  ಕಾರೊಂದು ಡಿವೈಡರ್​ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ (Lokayukta Inspector)  ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಸಾಲಿಮಠ ಅವರು ಇಂದು (ಡಿಸೆಂಬರ್ 05) ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್​ಪೆಕ್ಟರ್ PS ಸಾಲಿಮಠ ಅವರಿಗೆ ​​ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಇದನ್ನೂ ಓದಿ: ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!

PS ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ.

ಮೊನ್ನೆ ಅಷ್ಟೇ  ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​ಪೆಕ್ಟರ್​​ ಬಲಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Fri, 5 December 25

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?