AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಟ್ರಾಫಿಕ್ ಕ್ಲಿಯರ್ ಮಾಡುವ ವೇಳೆ ಅಪರಿಚಿತ ವಾಹನ ಡಿಕ್ಕಿ; ಪೊಲೀಸ್ ಕಾನ್ಸ್​ಟೇಬಲ್ ಸಾವು

ಪೊಲೀಸ್ ಕಾನ್ಸ್​ಟೇಬಲ್ ದುರಾದೃಷ್ಟವಷಾತ್ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ‌ ಮಾಡಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಟ್ರಾಫಿಕ್ ಕ್ಲಿಯರ್ ಮಾಡುವ ವೇಳೆ ಅಪರಿಚಿತ ವಾಹನ ಡಿಕ್ಕಿ; ಪೊಲೀಸ್ ಕಾನ್ಸ್​ಟೇಬಲ್ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 06, 2022 | 11:43 AM

Share

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಕಾನ್ಸ್​ಟೇಬಲ್ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ. ಇಲ್ಲಿ ನಡೆದ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಕಲಘಟಗಿ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಮೃತಪಟ್ಟಿದ್ದಾರೆ. ಪಂಡಿತ ಕಾಸರ್ (28) ಸಾವನ್ನಪ್ಪಿದ ಕಾನ್ಸ್‌ಟೇಬಲ್. ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಮರಗಳು‌ ಬಿದ್ದಿದ್ದವು. ಇದರಿಂದ ಹುಬ್ಬಳ್ಳಿ- ಕಾರವಾರ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಎಂದು ಪೊಲೀಸರು ಸ್ಥಳಕ್ಕೆ ಬಂದಿದ್ದರು. ಈ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಆಗಿದೆ. ಪೊಲೀಸ್ ಕಾನ್ಸ್​ಟೇಬಲ್ ದುರಾದೃಷ್ಟವಷಾತ್ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ‌ ಮಾಡಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ ಪಂಚಕಲ್ಯಾಣ ಮಹೋತ್ಸವದ ಮೇಲ್ಚಾವಣಿ ಶೆಡ್​ಗಳು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನಲೆ ಭಾರಿ ಗಾಳಿ ಮಳೆಗೆ ಪಂಚಕಲ್ಯಾಣ ಮಹೋತ್ಸವದ ಮೇಲ್ಚಾವಣಿ ಶೆಡ್​ಗಳು ಹಾರಿಹೋಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ಆಯೋಜಿಸಿದ್ದ ಪಂಚಕಲ್ಯಾಣ ಮಹೋತ್ಸವದಲ್ಲಿ ಘಟನೆ ನಡೆದಿದೆ. ಜೈನ್ ಸಮುದಾಯದ ವತಿಯಿಂದ ಆಯೋಜಿಸಿರುವ ಪಂಚ ಕಲ್ಯಾಣ ಮಹೋತ್ಸವ ಸಮಾರಂಭಕ್ಕೆ ಮಳೆಯಿಂದಾಗಿ ಅಡ್ಡಿ ಉಂಟಾಗಿದೆ.

ಗದಗ: ಸಿಡಿಲು ಬಡಿದು ರೈತ ಸಾವು

ಗದಗ ಜಿಲ್ಲೆಯ ರೋಣ ತಾಲೂಕಿನ ಯಾಸ ಹಡಗಲಿ ಎಂಬಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮಾಳವಾಡ ಗ್ರಾಮದ ರೈತ ಹೊಳೆಬಸಯ್ಯ (52) ಎಂಬುವವರು ಸಾವನ್ನಪ್ಪಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಧಾರವಾಡ: ಗಾಳಿ ಮಳೆಗೆ ನೆಲಕಚ್ಚಿದ ಪಾಲಿ ಹೌಸ್

ಗಾಳಿ ಮಳೆಗೆ ಪಾಲಿ ಹೌಸ್ ನೆಲಕಚ್ಚಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಪಾಲಿ ಹೌಸ್ ಕುಸಿದು ಬಿದ್ದಿದೆ. ನಿಂಗಪ್ಪ ಜಾಲಿಹಾಳ ಎಂಬುವವರಿಗೆ ಸೇರಿದ ಪಾಲಿಹೌಸ್ ಅನ್ನು ರೈತ 20 ಗುಂಟೆ ಜಾಗದಲ್ಲಿ ನಿರ್ಮಾಣ ಮಾಡಿದ್ದರು. ಇದೀಗ ಮಳೆಗೆ ಅದು ಕುಸಿದು ಬಿದ್ದಿದ್ದು ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಧಿಕಾರಿಗಳು ರೈತನಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಬೆಂಗಳೂರು, ಕೊಡಗು ಸೇರಿ ಹಲವೆಡೆ ಮಳೆ; ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಇದನ್ನೂ ಓದಿ: Shocking Video: 2 ಟ್ರಕ್​​ಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

Published On - 8:54 am, Wed, 6 April 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ