AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಉಪ ನೋಂದಣಾಧಿಕಾರಿಗಳ ಕಚೇರಿಗೆ ಹೆಸ್ಕಾಂ ಶಾಕ್: ವಿದ್ಯುತ್ ಸಂಪರ್ಕ ಕಡಿತದಿಂದ ಕೆಲಸ ಸ್ಥಗಿತ

ವಿದ್ಯುತ್ ಬಿಲ್ ಪಾವತಿಸದೇ ಇದ್ದಾಗ ಮನೆ ಅಥವಾ ಖಾಸಗಿ ಉದ್ಯಮ, ಅಂಗಡಿ-ಮುಂಗಟ್ಟುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕೆಲಸವನ್ನು ಆಯಾ ವಿದ್ಯುತ್ ನಿಗಮಗಳು ಮಾಡುವುದು ಸಾಮಾನ್ಯ. ಆದರೆ, ಉತ್ತರ ಕರ್ನಾಟಕ ಭಾಗದ ಹೆಸ್ಕಾಂಗೆ ಅನೇಕ ಸರ್ಕಾರಿ ಕಚೇರಿಗಳೇ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡಿವೆ. ಇದರಿಂದ ರೋಸಿ ಹೋದ ಹೆಸ್ಕಾಂ ಈಗ ಸರ್ಕಾರಿ ಕಚೇರಿಗಳ ಫ್ಯೂಸ್ ತೆಗೆದು, ವಿದ್ಯುತ್ ಕಡಿತಗೊಳಿಸುತ್ತಿದೆ. ಅಂಥವುಗಳ ಪೈಕಿ ಧಾರವಾಡದ ಉಪ ನೋಂದಣಾಧಿಕಾರಿಗಳ ಕಚೇರಿ ಕೂಡ ಒಂದು.

ಧಾರವಾಡ ಉಪ ನೋಂದಣಾಧಿಕಾರಿಗಳ ಕಚೇರಿಗೆ ಹೆಸ್ಕಾಂ ಶಾಕ್: ವಿದ್ಯುತ್ ಸಂಪರ್ಕ ಕಡಿತದಿಂದ ಕೆಲಸ ಸ್ಥಗಿತ
ಧಾರವಾಡ ಉಪ ನೋಂದಣಾಧಿಕಾರಿಗಳ ಕಚೇರಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 18, 2025 | 2:49 PM

Share

ಧಾರವಾಡ, ಜನವರಿ 18: ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ ನಿತ್ಯ ನೂರಾರು ಜನ ಕೆಲಸಕ್ಕೆ ಬರುತ್ತಾರೆ. ಯಾವುದೇ ನೋಂದಣಿ, ಮತ್ತಿತರೆ ದಾಖಲಾತಿ ಕೆಲಸ ಇದ್ದರೆ ಅವುಗಳೆಲ್ಲವೂ ಆನ್​ಲೈನ್ ಹಾಗೂ ಕಂಪ್ಯೂಟರ್ ಆಧಾರಿತವಾಗಿಯೇ ನಡೆಯಬೇಕು. ಆದರೆ ಈಗ ಈ ಉಪನೋಂದಣಾಧಿಕಾರಿ ಕಚೇರಿ ಕೆಲಸವೇ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಇದಕ್ಕೆ ಕಾರಣ ವಿದ್ಯುತ್ ಸಂಪರ್ಕ ಕಡಿತ. ಸುಮಾರು ಆರು ತಿಂಗಳಿನಿಂದ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿರುವುದರಿಂದ ಹೆಸ್ಕಾಂ ಸಿಬ್ಬಂದಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿನ ವಿದ್ಯುತ್ ಪ್ಯೂಸ್‌ ಕಿತ್ತುಕೊಂಡು ಹೋಗಿದ್ದಾರೆ. ಇತ್ತ ಕಚೇರಿಯಲ್ಲಿರುವ ಜನರೇಟರ್ ಸಹ ಕೆಲಸ ಮಾಡುತ್ತಿಲ್ಲ. ಹೀಗಾಗಿ ಜನ ಕಾಯುತ್ತಾ ನಿಲ್ಲುವಂತಾಗಿದ್ದು, ಯಾವುದೇ ಕೆಲಸಗಳು ನಡೆಯುತ್ತಿಲ್ಲ.

ಆಸ್ತಿ ನೋಂದಣಿ, ಖರೀದಿ, ಬೋಜಾ, ವಿವಾಹ ನೋಂದಣಿ ಸೇರಿದಂತೆ ಎಲ್ಲವೂ ಈಗ ನಿಂತಿದೆ. ಇತ್ತೀಚೆಗೆ ಸರ್ಕಾರ ಮುದ್ರಾಂಕ ಸೇರಿ ಎಲ್ಲ ನೋಂದಣಿ ಶುಲ್ಕಗಳನ್ನು ಹೆಚ್ಚಿಸಿದೆ. ಆದರೂ ಈ ಕಚೇರಿಗೆ ವಿದ್ಯುತ್ ಬಿಲ್ ಪಾವತಿ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗಿದೆ. ಹೀಗಾಗಿ ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Dharwad Deputy Registrar's Office Computers

ವಿದ್ಯುತ್ ಸಂಪರ್ಕ ಇಲ್ಲದೆ ಆಫ್ ಆಗಿರುವ ಕಂಪ್ಯೂಟರ್​ಗಳು

ಮಾಧ್ಯಮದವರು ಕಚೇರಿಗೆ ಹೋಗುತ್ತಿದ್ದಂತೆಯೇ ಜನರೇಟರ್ ಅನ್ನು ತಾತ್ಕಾಲಿಕ ರಿಪೇರಿ ಮಾಡಿಸಿ, ಕೆಲಸವನ್ನು ಆರಂಭ ಮಾಡಿಸಿದ್ದಾರೆ. ಆದರೆ ಅದರಿಂದ ಸರಿಯಾದ ರೀತಿಯಲ್ಲಿ ಕೆಲಸ ಸಾಗುತ್ತಿಲ್ಲ. ಏಕೆಂದರೆ ಕಚೇರಿಯಲ್ಲಿರುವ ಬ್ಯಾಟರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಜನರೇಟರ್ ಶುರು ಮಾಡಿದರೂ ಕೆಲಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ.

ಸರ್ಕಾರದಿಂದ ಅನುದಾನ ಬಂದಿಲ್ಲವೆಂಬ ಆರೋಪ

ಒಟ್ಟು 1.30 ಲಕ್ಷ ರೂಪಾಯಿ ಬಿಲ್ 6 ತಿಂಗಳಿನಿಂದ ಬಾಕಿ ಇದೆ. ಎರಡು ತಿಂಗಳ ಹಿಂದೆ 83 ಸಾವಿರ ರೂಪಾಯಿ ಬಿಲ್ ಕಟ್ಟಿದ್ದೇವೆ. ಆದರೆ ಆ ಬಳಿಕ ಸರ್ಕಾರದಿಂದ ಅನುದಾನ ಬಂದಿಲ್ಲ. ಹೀಗಾಗಿ ಬಿಲ್ ಪಾವತಿಸಲು ಆಗಿಲ್ಲ ಎಂದು ಹಿರಿಯ ಉಪನೋಂದಣಾಧಿಕಾರಿ ಲಕ್ಷ್ಮೀಕಾಂತ್ ಲಕ್ಕುಂಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಪ್ರೀತಿಸುವ ನಾಟಕವಾಡಿ 10ಕ್ಕೂ ಹೆಚ್ಚು ಮಹಿಳೆಯರೊಂದಿಗೆ ರಾಸಲೀಲೆ, ಆರೋಪಿ ಅರೆಸ್ಟ್​

ಸರ್ಕಾರ ಇತ್ತೀಚೆಗೆ ಎಷ್ಟೋ ಸರ್ಕಾರಿ ಕಚೇರಿಗಳಿಗೆ ನಿರ್ವಹಣಾ ವೆಚ್ಚದ ಮೊತ್ತ ಕೊಡುವುದನ್ನೇ ಕಡಿಮೆ ಮಾಡಿದೆ. ಅದರ ಪರಿಣಾಮವೇ ಈಗ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರಿ ಕಚೇರಿಗಳ ಖಾತೆಯಲ್ಲಿ ಹಣ ಇಲ್ಲದಂತಾಗಿದೆ.‌ ಇನ್ನು ಉಪನೋಂದಣಾಧಿಕಾರಿ ಕಚೇರಿ ಅಂದರೆ ಸಾಕಷ್ಟು ಆದಾಯ ಬರುವ ಕಚೇರಿ. ಆದರೆ ವಿವಿಧ ಶುಲ್ಕದ ರೂಪದಲ್ಲಿ ಬರುವ ಹಣವನ್ನು ಈ ಕಚೇರಿ ನೇರವಾಗಿ ಸರ್ಕಾರಕ್ಕೆ ತುಂಬಬೇಕು. ಬಳಿಕ ಸರ್ಕಾರ ಅನುದಾನ ಕೊಟ್ಟಾಗಲೇ ಕಚೇರಿ ನಡೆಸಬೇಕು. ಆದರೆ ಈ ಕಚೇರಿಯಿಂದ ಬರುವ ಆದಾಯ ತೆಗೆದುಕೊಳ್ಳುತ್ತಿರುವ ಸರ್ಕಾರ, ಈ ಕಚೇರಿ ವಿದ್ಯುತ್ ಬಿಲ್​ಗೆ ಅನುದಾನ ಕೊಡಲು ಮಾತ್ರ ಮೀನಮೇಷ ಎಣಿಸುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನಿಜಕ್ಕೂ ವಿಪರ್ಯಾಸವೇ ಸರಿ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್