ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ರ ವರೆಗೆ ವಿದ್ಯುತ್ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Edited By:

Updated on: Nov 16, 2023 | 7:45 PM

ಧಾರವಾಡ, ನವೆಂಬರ್ 16: ಧಾರವಾಡದ (Dharawad) ಹಲವೆಡೆ ನವೆಂಬರ್ 18ರಂದು ಶನಿವಾರ ವಿದ್ಯುತ್ (Power outage) ವ್ಯತ್ಯಯವಾಗಲಿದೆ. 110 ಕೆವಿ ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 3 ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಈ ಕಾರಣದಿಂದ ವಿದ್ಯುತ್ ವ್ಯತ್ಯಯವಾಗಲಿದೆ.

ಅಳ್ಳಾವರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ರ ವರೆಗೆ ವಿದ್ಯುತ್ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಳ್ಳಾವರ ಪಟ್ಟಣ, ಬೆಣಚಿ, ಡೋರಿ, ಸುರೆಬೈಲ್, ಗೋಪನಟ್ಟಿ, ಹುಳ್ಳಿಗೆರಿ, ಕಡಬಗಟ್ಟಿ, ಇಂಡಸಗೇರಿ, ಅವರಬತ್ ಬೈಲ್, ಜೊಡಳ್ಳಿ, ದುಂಡಳ್ಳಿ, ಒದಗೆರಾ, ತಾವರಗೆರಿ, ಬಾಳಗುಂದ, ಚುಂಚವಾಡ, ಲಿಂಗನಮಠ, ಹೊಸಲಿಂಗನಮಠ ಮತ್ತು ಪಾಲಗೆರಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಅದೊಂದಿದ್ದರೆ ಸಾಕಂತೆ ಪಡಿತರ ಬೇಡವಂತೆ… ಧಾರವಾಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

ಬರ ಪರಿಹಾರಕ್ಕಾಗಿ ಕೃಷಿ ಕಾರ್ಮಿಕರಿಂದ ಪ್ರತಿಭಟನೆ

ಬರ ಪರಿಹಾರಕ್ಕಾಗಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನರೇಗಾ ಯೋಜನೆ ಕಾಮಗಾರಿಯ ಹಣ ಸರ್ಕಾರ ಬಿಡುಗಡೆ ಮಾಡಿಲ್ಲ. ನಮ್ಮಿಂದ ವಿವಿಧ ರೀತಿಯ ಸರ್ಕಾರಿ ಕೆಲಸ ಮಾಡಿಸಿಕೊಂಡಿದೆ. ಆದರೆ ಪೂರ್ತಿ ಹಣ ನೀಡದೆ ಅರ್ಧ ಹಣ ನೀಡಿ ಸುಮ್ಮನಾಗಿದೆ. ಉಳಿದ ಅರ್ಧ ಹಣ ಬಿಡುಗಡೆ ಮಾಡಬೇಕು ಎಂದು ಕೃಷಿ ಕಾರ್ಮಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us