AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಮ್ಹಾನ್ಸ್ನಲ್ಲಿ MRI ಅಳವಡಿಸುವವರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ವೇತನ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ

ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವವರೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ವೇತನವನ್ನುತಡೆಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಡಿಮ್ಹಾನ್ಸ್ನಲ್ಲಿ MRI ಅಳವಡಿಸುವವರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ವೇತನ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Apr 06, 2022 | 11:41 AM

Share

ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯನಿರ್ವಹಿಸುವವರೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಅವರ ವಿಭಾಗೀಯ ಪೀಠವು, ಎರಡು ವರ್ಷಗಳ ಹಿಂದೆಯೇ ಯಂತ್ರವನ್ನು ಖರೀದಿಸಿ ಕಾರ್ಯ ಪ್ರಾರಂಭಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆದರೆ ಅದು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೀಠವು ಪ್ರಶ್ನಿಸಿದೆ.

2020ರ ಮಾರ್ಚ್ 5ರಂದು, ಡಿಮ್ಹಾನ್ಸ್ ಬಳಕೆಗೆ ಅಗತ್ಯವಿರುವ ಎಂಆರ್‌ಐ ಯಂತ್ರವನ್ನು ಖರೀದಿಸಲು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆರು ವಾರಗಳಲ್ಲಿ ಡಿಮ್ಹಾನ್ಸ್ಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು. ಎಂಆರ್ಐ ಸ್ಯಾನಿಂಗ್ ಯಂತ್ರ ಖರೀದಿಸಬೇಕು, ವೈದ್ಯಕೀಯ ಅಧೀಕ್ಷಕರನ್ನು ನೇಮಕ ಮಾಡಬೇಕು ಎಂದು ಗಡುವು ನೀಡಿತ್ತು. ಆದ್ರೆ ಸರ್ಕಾರ ಆದೇಶ ಪಾಲಿಸಿಲ್ಲ. ಯಂತ್ರವನ್ನು ಅಳವಡಿಸದಿರುವ ಅಧಿಕಾರಿಗಳ ಉದ್ದೇಶವನ್ನು ಇದು ಬಿಂಬಿಸುತ್ತದೆ. ಸಂಬಂಧಿಸಿದ ಅಧಿಕಾರಿಗಳ ಕಾರ್ಯವೈಖರಿಯನ್ನು ನಾವು ಪ್ರಶಂಸಿಸುವುದಿಲ್ಲ ಎಂದು ನ್ಯಾಯಾಲಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಅಮೆರಿಕಾದಿಂದ ಎಂಆರ್‌ಐ ಮಷಿನ್ ಬಂದಿದೆ. ಅದರ ಅಳವಡಿಕೆಗೆ ಶೇ.75 ಸಿವಿಲ್ ಕಾಮಗಾರಿ ಮುಕ್ತಾಯವಾಗಿದ್ದು, ಇನ್ನುಳಿದ ಶೇ.25ರಷ್ಟು ಕಾಮಗಾರಿ ಪ್ರಗತಿಯಲ್ಲಿದೆ, ಹಾಗಾಗಿ ಸಮಯ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಮಾಣಪತ್ರ ಸಲ್ಲಿಸಿತ್ತು. ಅದನ್ನು ಪರಿಶೀಲಿಸಿದ ನ್ಯಾಯಪೀಠ, ”ಪದೇ ಪದೇ ಸೂಚಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ, ಹಲವು ಗಡುವು ನೀಡಿದರೂ ಸೌಕರ್ಯ ಒದಗಿಸಿಲ್ಲ. ಇದು ಸರ್ಕಾರಿ ಸಂಸ್ಥೆಯ ಅಸಮರ್ಥತೆ ತೋರಿಸುತ್ತಿದೆ. ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ, ಜನರ ಸಮಸ್ಯೆಗಳ ಬಗ್ಗೆ ಸಂವೇದನೆಯನ್ನೇ ಕಳೆದುಕೊಂಡಿದ್ದೀರಾ ಎಂದು ಪ್ರಶ್ನಿಸಿತು.

ಇನ್ನು ಹಿಂದಿನ ವಿಚಾರಣೆಯ ಸಮಯದಲ್ಲಿ ಮಾರ್ಚ್ 30 ರೊಳಗೆ ಎಂಆರ್ಐ ಯಂತ್ರವನ್ನು ಕಾರ್ಯಗತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವು ಭರವಸೆ ನೀಡಿತ್ತು. ಎಂಆರ್‌ಐ ಯಂತ್ರದ ಅಳವಡಿಕೆಯ ವಿಷಯವು ಸಾಕಷ್ಟು ಸಮಯದಿಂದ ನಡೆಯುತ್ತಿದೆ, 2020 ರ ಮಾರ್ಚ್‌ನಲ್ಲಿ ಯಂತ್ರವನ್ನು ಖರೀದಿಸಲು ಮತ್ತು ಸ್ಥಾಪಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಕ್ಕೆ ನಿರ್ದೇಶನ ನೀಡಲಾಗಿತ್ತು. ಹಲವು ಬಾರಿ ಈ ವಿಚಾರದಲ್ಲಿ ವಿಳಂಬ ಮಾಡಿದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸೂಕ್ಷ್ಮತೆಯನ್ನು ಕಳೆದುಕೊಂಡಿದ್ದಾರೆ ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ. ಹಾಗಾಗಿ ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವವರೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ವೇತನವನ್ನುತಡೆಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 21 ರಂದು ನಡೆಯಲಿದೆ.

ಇದನ್ನೂ ಓದಿ: ಉರ್ದು ಮಾತಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ: ಮತೀಯ ತಿರುವು ಪಡೆದುಕೊಂಡ ಚಂದ್ರು ಹತ್ಯೆ ಪ್ರಕರಣ

Aadhaar On DigiLocker: ಡಿಜಿಲಾಕರ್​ ಜತೆ ಆಧಾರ್ ಜೋಡಿಸುವುದು ಹೇಗೆ ಹಂತಹಂತವಾದ ಮಾಹಿತಿ ಇಲ್ಲಿದೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ