ಹುಬ್ಬಳ್ಳಿಯ ಬಹು ನಿರೀಕ್ಷಿತ ಯೋಜನೆಗೆ ಬಿತ್ತು ಕೊಕ್ಕೆ; ಫ್ಲೈಓವರ್ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಯಾವುದೋ ಗ್ರಹಣ ಹಿಡಿದಿದೆ. ಹುಬಳ್ಳಿಯನ್ನ ಮೇಲ್ದರ್ಜೆಗೆರಿಸಬೇಕೆಂದು ನಡೆದಿರುವ ಒಂದೇ ಒಂದು ಯೋಜನೆ ಸುಸೂತ್ರವಾಗಿ ಪೂರ್ಣಗೊಂಡಿಲ್ಲ. ಸ್ಮಾರ್ಟ್ ಸಿಟಿ, ಬಿಆರ್‌ಟಿಎಸ್ ಸೇರಿದಂತೆ ಅನೇಕ ಯೋಜನೆಗಳು ಹಳ್ಳ ಹಿಡಿದಿರುವ ಜೊತೆಗೆ, ಅವೈಜ್ಞಾನಿಕವಾಗಿವೆ. ಈ ಪಟ್ಟಿಗೆ ಮತ್ತೊಂದು ಯೋಜನೆ ಸೇರ್ಪಡೆಯಾಗಿದ್ದು, 320 ಕೋಟಿ ರೂಪಾಯಿ ವೆಚ್ಚದ ಮಹತ್ವಾಕಾಂಕ್ಷಿ ಯೋಜನೆ ಅವೈಜ್ಞಾನಿಕ ಆಗಿದೆ ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಹುಬ್ಬಳ್ಳಿ ಮಂದಿಗೆ ಧೂಳು ತಗ್ಗು ಗುಂಡಿಗಳೇ ಗತಿಯಾಗಿವೆ.

ಹುಬ್ಬಳ್ಳಿಯ ಬಹು ನಿರೀಕ್ಷಿತ ಯೋಜನೆಗೆ ಬಿತ್ತು ಕೊಕ್ಕೆ; ಫ್ಲೈಓವರ್ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ
ಹುಬ್ಬಳ್ಳಿ ಪ್ಲೈಓವರ್ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ​ ತಡೆಯಾಜ್ಞೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 11, 2024 | 6:44 PM

ಹುಬ್ಬಳ್ಳಿ, ಆ.11: ಹುಬ್ಬಳ್ಳಿಯ ಬಹು ನಿರೀಕ್ಷಿತ ಯೋಜನೆಯಲ್ಲಿ ಒಂದಾಗಿರುವ ಪ್ಲೈಓವರ್ ಕಾಮಗಾರಿ ಆಮೆ ವೇಗ ಪಡೆದಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಾಕಷ್ಟು ವಿಳಂಬ ಮಾಡಿದ ಪ್ಲೈಓವರ್ ಕಾಮಗಾರಿಗೆ ಸಿದ್ಧಪ್ಪ ಕಂಬಳಿ ರಸ್ತೆಯಲ್ಲಿರುವ ಅನೇಕ ಜಾಗಗಳನ್ನ ಭೂಸ್ವಾಧೀನ ಮಾಡಿಕೊಳ್ಳದಂತೆ ಹೈಕೋರ್ಟ್‌(High Court) ಧಾರವಾಡ ಪೀಠ ಆದೇಶ ಹೊರಡಿಸಿದ್ದು, ತಡೆಯಾಜ್ಞೆ ನೀಡಿದೆ. ಪ್ಲೈಓವರ್ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಕುರಿತು 2023ರ ಮಾರ್ಚ್‌ 9ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿ, ಆಸ್ತಿಗಳನ್ನು ಗುರುತು ಮಾಡಲಾಗಿತ್ತು. ಈ ಕುರಿತು ಆಕ್ಷೇಪಣೆ ಸಲ್ಲಿಕೆಯಾದ ನಂತರ, ಅಂತಿಮ ಅಧಿಸೂಚನೆ ಹೊರಡಿಸಬೇಕಿತ್ತು. ಈಗ ಯಾವುದೇ ಆಸ್ತಿಯನ್ನು ಭೂಸ್ವಾಧೀನ ಪಡಿಸಿಕೊಳ್ಳದಂತೆ ಆದೇಶಿಸಿದೆ. ಪ್ರಾಥಮಿಕ ಅಧಿಸೂಚನೆ ಮತ್ತು ಯೋಜನೆಯಲ್ಲಿನ ಹಲವು ನ್ಯೂನತೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದನ್ನ ಪರಿಶೀಲಿಸಿ ಈಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬರೊಬ್ಬರಿ 320 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಸಂಪೂರ್ಣವಾಗಿ ವೈಜ್ಞಾನಿಕವಾಗಿ‌ ಕೂಡಿದೆ. ಇದೇ ಕಾರಣಕ್ಕಾಗಿ ನ್ಯಾಯಾಲಯವು 2023ರ ಅಧಿಸೂಚನೆಗೆ ಜೂನ್ 12ರಂದು ತಡೆಯಾಜ್ಞೆ ನೀಡಿತ್ತು. ಆ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಜೂನ್ 14ಕ್ಕೆ ಮತ್ತೊಂದು ಅಧಿಸೂಚನೆ ಹೊರಡಿಸಿದ್ದರು. ಅದನ್ನು ಪ್ರಶ್ನಿಸಿ ಮತ್ತೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅದಕ್ಕೆ ಜುಲೈ 22ರಂದು ತಡೆಯಾಜ್ಞೆ ನೀಡಿದೆ. ಹೊಸ ಭೂಸ್ವಾಧೀನ ಕಾಯ್ದೆ ಅನ್ವಯ ಯೋಜನೆ ಜಾರಿಯಾಗುವುದಕ್ಕೂ ಮುನ್ನ ಸಾಮಾಜಿಕ ಪರಿಣಾಮಗಳ ಕುರಿತು ಸಮೀಕ್ಷೆ ನಡೆಸಿಲ್ಲ. ಅಲ್ಲದೆ, ಕಾಯ್ದೆಯ ಹಲವು ಅಂಶಗಳನ್ನು ಪಾಲಿಸಿಲ್ಲ. 3ಡಿ ಅಧಿಸೂಚನೆ ಹೊರಡಿಸಿ, ಭೂಸ್ವಾಧೀನ ಪಡಿಸಿಕೊಂಡ ಜಾಗಕ್ಕೆ ಪರಿಹಾರ ನೀಡಿದ ನಂತರ ಕಾಮಗಾರಿ ಆರಂಭಿಸಬೇಕಿತ್ತು. ಆದರೆ, ಅದಕ್ಕೂ ಮುನ್ನವೇ ಕಾಮಗಾರಿ ಆರಂಭಿಸಲಾಗಿತ್ತು. ಈ ರೀತಿಯ ಹಲವು ಯಡವಟ್ಟನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾಡಿದ್ದರು. ಹೀಗಾಗಿ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಅಧಿಕಾರಿಗಳಿಗೆ ಮುಖಭಂಗ ಆದದಂತಾಗಿದೆ.

ಇದನ್ನೂ ಓದಿ:ಮಾನವೀಯ ಕಾರ್ಯಕ್ಕೆ ಸಾಕ್ಷಿ ಆಯ್ತು ಹುಬ್ಬಳ್ಳಿ ವಿಮಾನ ನಿಲ್ದಾಣ

ಫ್ಲೈಓವರ್ ಕಾಮಗಾರಿಗೆ ಯಾವುದೇ ಮುಂದಾಲೋಚನೆ ಇಲ್ಲ. ಹೀಗಾಗಿ ಜಾಗವನ್ನು ಭೂಸ್ವಾಧೀನ ಮಾಡಿಕೊಳ್ಳದಂತೆ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಅದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಹೋರಾಟಗಾರಿಗೆ ಜಯ ಸಿಕ್ಕಂತಾಗಿದೆ. ಇನ್ನೊಂದು ಕಡೆ ಫ್ಲೈಓವರ್‌ಗೆ ಭೂಸ್ವಾಧೀನ ಮಾಡಿಕೊಂಡರೆ ಮಾರುಕಟ್ಟೆ ಪ್ರದೇಶ ಪ್ರವೇಶಿಸಲು ಜಾಗ ಇಲ್ಲದಂತಾಗುತ್ತದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯಾವ ಹೆಜ್ಜೆ ಇಡುತ್ತಾರೆಂಬುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ