ಫೋಟೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್​: ಸಿರಾಜ್​​ ಕಾಟಕ್ಕೆ ವಿದ್ಯಾ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಮುಸ್ಲಿಂ ಯುವಕನೋರ್ವ ಹತ್ಯೆ ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಬೆನಲ್ಲೇ ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿಯ ಫೋಟೋ ಇಟ್ಟುಕೊಂಡು ಸಿರಾಜ್​ ಮದುವೆಯಾಗುವಂತೆ ಟಾರ್ಚರ್ ನೀಡಿದ್ದಾನೆ. ಇದರಿಂದ ಬೇಸತ್ತು ಯುವತಿ ಆತ್ಮಹತ್ಯಗೆ ಯತ್ನಿಸಿದ್ದಾಳೆ.

ಫೋಟೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್​: ಸಿರಾಜ್​​ ಕಾಟಕ್ಕೆ ವಿದ್ಯಾ ಆತ್ಮಹತ್ಯೆಗೆ ಯತ್ನ
ಸಿರಾಜ್‌
Edited By:

Updated on: Apr 02, 2025 | 3:06 PM

ಹುಬ್ಬಳ್ಳಿ, (ಏಪ್ರಿಲ್ 02): ಯುವಕನೋರ್ವ ಖಾಸಗಿ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಿದ ಹಿನ್ನೆಲೆಯಲ್ಲಿ ಯುವತಿಯೋರ್ವಳ ಆತ್ಮಹತ್ಯೆಗೆ ಯತ್ನಿಸಿರುವ (suicide attempt )ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ನನ್ನೇ ಪ್ರೀತಿಸಬೇಕು (Love), ನನ್ನನ್ನೇ ಮದುವೆಯಾಗಬೇಕೆಂದು(marriage) ಸಿರಾಜ್‌ ಯುವತಿ ವಿದ್ಯಾಳಿಗೆ ಕಿರುಕುಳ ನೀಡಿದ್ದಾನೆ. ಅಲ್ಲದೇ ಹಲ್ಲೆ ಸಹ ಮಾಡಿದ್ದಾನೆ ಇದರಿಂದ ಮನನೊಂದ ವಿದ್ಯಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಗ ಕೂಡಲೇ ಕುಟುಂಬಸ್ಥರು ವಿದ್ಯಾಳನ್ನು ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಯುವತಿಗೆ ಕಿರುಕುಳ ನೀಡುತ್ತಿದ್ದ ಸಿರಾಜ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್​​ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದರು. ಇನ್ನು ಇದೇ ವೇಳೆ ಯುವತಿಯ ಕುಟುಂಬಸ್ಥರಿಂದ ಪ್ರಕರಣದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಮಿಷನರ್ ಎನ್.ಶಶಿಕುಮಾರ್, ಮದುವೆಯಾಗುವಂತೆ ಪೀಡಿಸುತ್ತಿದ್ದ‌, ಅದಲ್ಲದೆ ಹಲ್ಲೆ ಮಾಡಿದ್ದ. ಹೀಗಾಗಿ ಕಿರುಕುಳ ನೀಡಿದ್ದ ಯುವಕ ಸಿರಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಯುವತಿ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

ಯುವಕ- ಯುವತಿ ಇಬ್ಬರು ಕುಂದಗೋಳ ಮೂಲದವರು. ಮಾರ್ಚ್ 31ರಂದು ಸಿರಾಜ್​​ ಯುವತಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ‌. ಅದಲ್ಲದೆ ಹಲ್ಲೆ ಸಹ ಮಾಡಿದ್ದ. ಹಾಗೇ ವಿದ್ಯಾ ಫೊಟೋ ಇಟ್ಟುಕೊಂಡು ಕಿರುಕುಳ, ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ. ಇದೀಗ ಟಾರ್ಚರ್ ಕೊಟ್ಟ ಯುವಕನನ್ನ ಬಂಧನ ಮಾಡಲಾಗಿದ್ದು, ಯುವತಿಗೆ ಯಾವ ತೊಂದರೆ ಇಲ್ಲ ತಿಳಿಸಿದರು.

ಇದನ್ನೂ ಓದಿ
ಪತ್ನಿ ಮೇಲಿನ ಸಿಟ್ಟಿಗೆ ಮೂವರನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಒಂದು ಕಿಸ್​ಗೆ 50 ಸಾವಿರ! ಲಕ್ಷ ರೂ. ಸುಲಿಗೆ: ಟೀಚರ್ ಹಾಗೂ ಗ್ಯಾಂಗ್ ಬಂಧನ
ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ
ಸೈಬರ್ ವಂಚಕರ ಬಲೆಗೆ ಬಿದ್ದ ವೃದ್ಧ ದಂಪತಿ ದುರಂತ ಸಾವು!

ಇತ್ತೀಚೆಗೆ ಇದೇ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹ ಹಿರೇಮಠ ಹತ್ಯೆ ಪ್ರಕರಣ ಭಾರೀ ಸದ್ದು ಮಾಡಿತ್ತು.  ಪ್ರೀತಿ ವಿಚಾರಕ್ಕೆ ಫಯಾಜ್ ಎನ್ನುವಾತ ಕಾಲೇಜಿನಲ್ಲೇ ನೇಹಾಳನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದಿದ್ದ. ಬಳಿಕ ಈ ಪ್ರಕರಣದಲ್ಲಿ ಲವ್​ ಜಿಹಾದ್ ಆರೋಪ ಕೇಳಿಬಂದಿದ್ದು,  ಹಿಂದೂ ಮುಸ್ಲಿಂ ನಾಯಕರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us