ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​

ಇತ್ತೀಚೆಗೆ ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್​ನ್ನು ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​
ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 08, 2024 | 10:51 PM

ಹುಬ್ಬಳ್ಳಿ, ಅ.08: ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್​ನ್ನು ಹೆಡೆಮುರಿ ಕಟ್ಟಿದ್ದಾರೆ. ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಈ ಗ್ಯಾಂಗ್​, ಹುಬ್ಬಳ್ಳಿಯ ವ್ಯಾಪಾರಿ ಚಗನ್ ಲಾಲ್ ಚೌಧರಿ ಎಂಬುವರಿಗೆ ಹನಿಟ್ರ್ಯಾಪ್ ಮಾಡಿತ್ತು. ಅವರ ವಿಡಿಯೋಗಳನ್ನು ಮಾಡಿಕೊಂಡು 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ಗಾಬರಿಯಾದ ಚಗನ್ ಲಾಲ್, ಅಶೋಕ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದ ನಾಲ್ವರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸತ್ಯಾಂಶ ಬಾಯ್ಬಿಟ್ಟ ಖದೀಮರು, ‘ಈ ಗ್ಯಾಂಗ್​ನ ಕೆಲ ಸದಸ್ಯರು ಅಂಗಡಿಗಳ ಮೇಲಿನ ನಂಬರ್​ಗಳನ್ನು ತಗೆದುಕೊಂಡು ಹೋಗಿ ಯುವತಿಗೆ ನೀಡುತ್ತಿದ್ದರು.

ಇದನ್ನೂ ಓದಿ:ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್​ ಪ್ರಕರಣ ಬೆಳಕಿಗೆ: ಉದ್ಯಮಿಗಳೇ ಇವರ ಟಾರ್ಗೆಟ್​

ನಂಬರ್ ಸಿಗುತ್ತಿದ್ದಂತೆ ಆರೋಪಿ ಯುವತಿ ಜೋಯಾ ಶಬಾನಾ ಚಾಟಿಂಗ್ ಮಾಡಿ ಬಲೆಗೆ ಹಾಕಿಕೊಳ್ಳುತ್ತಿದ್ದರು. ಇದೀಗ ಜೋಯಾ ಶಬಾನಾ, ಸೈಯದ್, ತೌಸಿಫ್, ಅಬ್ದುಲ್ ರೆಹಮಾನ್ ಸೇರಿದಂತೆ ನಾಲ್ವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಡಿಲು ಬಡಿದು ಬಾಲಕ ಸಾವು

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಗ್ರಾಮದಲ್ಲಿ ಪೋಷಕರ ಜತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮುಕೇಶ್ ಭೀಮಣ್ಣ ಮೊಳಕೇರಾ(16) ಮೃತ ಬಾಲಕ. ಶಾಲೆಗೆ ರಜೆ ಹಿನ್ನೆಲೆ ಸೋಯಾಬಿನ್ ಕಟಾವಿಗೆ ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Tue, 8 October 24

ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?