AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​

ಇತ್ತೀಚೆಗೆ ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್​ನ್ನು ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​
ಹುಬ್ಬಳ್ಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಹನಿಟ್ರ್ಯಾಪ್ ಗ್ಯಾಂಗ್​; ನಾಲ್ವರು ಅರೆಸ್ಟ್​
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 08, 2024 | 10:51 PM

Share

ಹುಬ್ಬಳ್ಳಿ, ಅ.08: ಹುಬ್ಬಳ್ಳಿ(Hubballi) ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್​ನ್ನು ಹೆಡೆಮುರಿ ಕಟ್ಟಿದ್ದಾರೆ. ಎರಡ್ಮೂರು ವಿಡಿಯೋ ತುಣುಕುಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಈ ಗ್ಯಾಂಗ್​, ಹುಬ್ಬಳ್ಳಿಯ ವ್ಯಾಪಾರಿ ಚಗನ್ ಲಾಲ್ ಚೌಧರಿ ಎಂಬುವರಿಗೆ ಹನಿಟ್ರ್ಯಾಪ್ ಮಾಡಿತ್ತು. ಅವರ ವಿಡಿಯೋಗಳನ್ನು ಮಾಡಿಕೊಂಡು 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ಗಾಬರಿಯಾದ ಚಗನ್ ಲಾಲ್, ಅಶೋಕ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದ ನಾಲ್ವರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸತ್ಯಾಂಶ ಬಾಯ್ಬಿಟ್ಟ ಖದೀಮರು, ‘ಈ ಗ್ಯಾಂಗ್​ನ ಕೆಲ ಸದಸ್ಯರು ಅಂಗಡಿಗಳ ಮೇಲಿನ ನಂಬರ್​ಗಳನ್ನು ತಗೆದುಕೊಂಡು ಹೋಗಿ ಯುವತಿಗೆ ನೀಡುತ್ತಿದ್ದರು.

ಇದನ್ನೂ ಓದಿ:ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್​ ಪ್ರಕರಣ ಬೆಳಕಿಗೆ: ಉದ್ಯಮಿಗಳೇ ಇವರ ಟಾರ್ಗೆಟ್​

ನಂಬರ್ ಸಿಗುತ್ತಿದ್ದಂತೆ ಆರೋಪಿ ಯುವತಿ ಜೋಯಾ ಶಬಾನಾ ಚಾಟಿಂಗ್ ಮಾಡಿ ಬಲೆಗೆ ಹಾಕಿಕೊಳ್ಳುತ್ತಿದ್ದರು. ಇದೀಗ ಜೋಯಾ ಶಬಾನಾ, ಸೈಯದ್, ತೌಸಿಫ್, ಅಬ್ದುಲ್ ರೆಹಮಾನ್ ಸೇರಿದಂತೆ ನಾಲ್ವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಡಿಲು ಬಡಿದು ಬಾಲಕ ಸಾವು

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಗ್ರಾಮದಲ್ಲಿ ಪೋಷಕರ ಜತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮುಕೇಶ್ ಭೀಮಣ್ಣ ಮೊಳಕೇರಾ(16) ಮೃತ ಬಾಲಕ. ಶಾಲೆಗೆ ರಜೆ ಹಿನ್ನೆಲೆ ಸೋಯಾಬಿನ್ ಕಟಾವಿಗೆ ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Tue, 8 October 24

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್