AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಕಾಶಿ ಧಾರವಾಡ- ವಾಣಿಜ್ಯ ನಗರಿ ಹುಬ್ಬಳ್ಳಿ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!

ವಿದ್ಯಾಕಾಶಿ ಖ್ಯಾತಿಯ ಧಾರವಾಡ, ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿಯಂತಹ ಅವಳಿ ನಗರಗಳನ್ನು ಹೊಂದಿರುವ ವಿಶೇಷ ಜಿಲ್ಲೆ ಧಾರವಾಡ. ಸದ್ಯ ಈ ಧಾರವಾಡ ಜಿಲ್ಲೆಯ ಆಡಳಿತ ಚುಕ್ಕಾಣಿಯನ್ನು ಬಹುತೇಕ ಮಹಿಳೆಯರೇ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಪ್ರಥಮ ಪ್ರಜೆಯಿಂದ ಹಿಡಿದು, ಇಡೀ ಜಿಲ್ಲೆಯ ಆಡಳಿತ ನಡೆಸುವ ಜಿಲ್ಲಾಧಿಕಾರಿ ಸಹಿತ ಮಹಿಳೆಯೇ ಇದ್ದಾರೆ.

ವಿದ್ಯಾಕಾಶಿ ಧಾರವಾಡ- ವಾಣಿಜ್ಯ ನಗರಿ ಹುಬ್ಬಳ್ಳಿ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಸಾಧು ಶ್ರೀನಾಥ್​|

Updated on: Feb 01, 2024 | 12:21 PM

Share

ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳಾ ಪ್ರಾಬಲ್ಯ, ಮಹಿಳಾ ಪ್ರಾಮುಖ್ಯತೆ ಹೆಚ್ಚಾಗುತ್ತಲೇ ಹೊರಟಿದೆ. ಅದರಲ್ಲಿಯೂ ಪ್ರಮುಖ ಹುದ್ದೆಗಳನ್ನು ನಿಭಾಯಿಸುವಷ್ಟರ ಮಟ್ಟಿಗೆ ಮಹಿಳೆಯರು ಈಗ ಸಬಲ ಮತ್ತು ಸಮರ್ಥ. ಇಷ್ಟೆಲ್ಲ ಪೀಠಿಕೆ ಯಾಕಪ್ಪ ಅಂದ್ರೆ, ಇಲ್ಲೊಂದು ಕಡೆ ಇಡೀ ಜಿಲ್ಲೆಯ ಆಡಳಿತದ ಚುಕ್ಕಾಣಿ ಈಗ ಮಹಿಳಾ ಅಧಿಕಾರಿಗಳ ಕೈಗೆ ಸಿಕ್ಕಿದೆ. ಹಾಗಾದ್ರೆ ಯಾವುದು ಆ ಜಿಲ್ಲೆ ಅನ್ನೋದರ ಡಿಟೈಲ್ಸ್ ಇಲ್ಲಿದೆ ನೋಡಿ.

ವಿದ್ಯಾಕಾಶಿ ಖ್ಯಾತಿಯ ಧಾರವಾಡ, ವಾಣಿಜ್ಯ ನಗರಿ ಖ್ಯಾತಿಯ ಹುಬ್ಬಳ್ಳಿಯಂತಹ ಅವಳಿ ನಗರಗಳನ್ನು ಹೊಂದಿರುವ ವಿಶೇಷ ಜಿಲ್ಲೆ ಧಾರವಾಡ. ಸದ್ಯ ಈ ಧಾರವಾಡ ಜಿಲ್ಲೆಯ ಆಡಳಿತ ಚುಕ್ಕಾಣಿಯನ್ನು ಬಹುತೇಕ ಮಹಿಳೆಯರೇ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಪ್ರಥಮ ಪ್ರಜೆಯಿಂದ ಹಿಡಿದು, ಇಡೀ ಜಿಲ್ಲೆಯ ಆಡಳಿತ ನಡೆಸುವ ಜಿಲ್ಲಾಧಿಕಾರಿ ಸಹಿತ ಮಹಿಳೆಯೇ ಇದ್ದಾರೆ.

ಹೌದು, ಈಗ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜೆ.ಆರ್‌.ಜಿ. ಅಧಿಕಾರ ವಹಿಸಿಕೊಂಡಿದ್ದು, ಇದರ ಜೊತೆಗೆ ಧಾರವಾಡ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಜಿಲ್ಲಾಮಟ್ಟದ ಅಧಿಕಾರಿ ಸ್ಥಾನಗಳು ಮಹಿಳೆಯರ ಕೈಯಲ್ಲಿವೆ. ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಡಿಸಿ ನಂತರದಲ್ಲಿ ಬರುವ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಡಿಸಿ, ಹು-ಧಾ ಮಹಾನಗರ ಪಾಲಿಕೆಯ ಮೇಯರ್‌ ವೀಣಾ ಭರದ್ವಾಡ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಆಯುಕ್ತರಾಗಿ ಜಯಶ್ರೀ ಶಿಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಶಶಿ ಪಾಟೀಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಹೀಗೆ. ಬಹುತೇಕ ಪ್ರಮುಖ ಹುದ್ದೆಗಳಲ್ಲಿ ಇರೋದೆಲ್ಲವೂ ಮಹಿಳಾ ಅಧಿಕಾರಿಗಳೇ. ಇದು ಜಿಲ್ಲೆಯ ಮಹಿಳೆಯರು ಹೆಮ್ಮೆ ಪಡುವಂತಹ ಸಂಗತಿಯಾಗಿದೆ.

ಜಿಲ್ಲೆಯಲ್ಲಿ ಜಿಲ್ಲಾ ಆಡಳಿತ ಸಹಿತ, ಆರೋಗ್ಯ, ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಮಹಿಳೆಯರ, ದುರ್ಬಲ ವರ್ಗದವರ ಏಳಿಗೆಯೊಂದಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ನೌಕರರ, ಸಾರ್ವಜನಿಕರ ಸಹಕಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಪ್ರಮುಖ ಎಲ್ಲ ಹುದ್ದೆಗಳಲ್ಲಿಯೂ ಮಹಿಳೆಯರೇ ಇದ್ದಾರೆ.

ಇನ್ನು ಈಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿರೋ ದೀಪಾ ಚೋಳನ್, ಈ ಹಿಂದೆ ಇದೇ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದವರು. ಅಲ್ಲದೇ ಜಿಲ್ಲೆಯ ಈ ಹಿಂದಿನ ಇತಿಹಾಸವನ್ನು ನೋಡಿದಾಗ, ಬಹುತೇಕ ಮಹಿಳಾ ಅಧಿಕಾರಿಗಳು ಪ್ರಮುಖ ಸ್ಥಾನಗಳಲ್ಲಿ ಇದ್ದ ಸಮಯದಲ್ಲಿಯೇ ಧಾರವಾಡ ಮಹತ್ವದ ಕೆಲಸಗಳ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಹ ಈಗ ನಮ್ಮೊಂದಿಗೆ ಮಹಿಳಾ ಶಕ್ತಿ ಇರೋದು ನಮಗೆ ಮತ್ತಷ್ಟು ಬಲ ಬಂದಂತಾಗಿದೆ ಅಂತಾ ಹರ್ಷ ವ್ಯಕ್ತಪಡಿಸಿದ್ದಾರೆ.

ಮಹಿಳೆ ಇವತ್ತು ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಮುಖ ಸ್ಥಾನ ವಹಿಸ್ತಾ ಇದ್ದು, ಅದರಲ್ಲಿಯೂ ನಾರಿ ಶಕ್ತಿ ಒಂದಾದರೇ ಒಂದೀಡಿ ಜಿಲ್ಲೆಯನ್ನೇ ಆಳಬಹುದು ಅನ್ನೋದು ಈಗ ಧಾರವಾಡ ಜಿಲ್ಲೆಯಲ್ಲಿ ಸಾಬೀತಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ