AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳ ಸಾವು: ಮದ್ವೆ ಮನೆಯಲ್ಲಿ ಆಗಿದ್ದೇನು?​

ದಂಪತಿಗೆ ಅನೇಕ ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಹೆತ್ತವರು ಮಕ್ಕಳಿಗಾಗಿ ಹತ್ತಾರು ದೇವರಿಗೆ ಹರಕೆ ಹೊತ್ತಿದ್ದರಂತೆ. ಅನೇಕ ವರ್ಷಗಳ ನಂತರ ಹೆಣ್ಣು ಮಗು ಹುಟ್ಟಿತ್ತು. ಆದರೆ, ಮದುವೆ ಮನೆಯಲ್ಲಿ ಬಿದ್ದ ಸಾಂಬಾರು ಬಾಲಕಿ ಜೀವಕ್ಕೆ ಕುತ್ತು ತಂದಿದೆ. ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳ ಸಾವು: ಮದ್ವೆ ಮನೆಯಲ್ಲಿ ಆಗಿದ್ದೇನು?​
ಮೃತ ರುಕ್ಸಾನಾಬಾನು ಶೇಖಸನದಿ
ಸಂಜಯ್ಯಾ ಚಿಕ್ಕಮಠ
| Updated By: ವಿವೇಕ ಬಿರಾದಾರ|

Updated on:Jun 20, 2025 | 7:14 PM

Share

ಹುಬ್ಬಳ್ಳಿ, ಜೂನ್​ 20: ಹುಬ್ಬಳ್ಳಿ (Hubballi) ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು. ಐದು ದಿನಗಳ ಹಿಂದೆ ಹೆತ್ತವರು ಮಗಳನ್ನು ಕರೆದುಕೊಂಡು ಶಿಗ್ಗಾಂವ ತಾಲೂಕಿನ ಕುಣ್ಣುರು ಗ್ರಾಮದಲ್ಲಿ ಸಂಬಂಧಿಯ ಮದುವೆಗೆ ಹೋಗಿದ್ದರು. ಮದುವೆ ಮನೆಯಲ್ಲಿ ಪಾತ್ರೆಯಲ್ಲಿದ್ದ ಸುಡುವ ಸಾಂಬಾರು ಬಾಲಕಿ ಮೈಮೇಲೆ ಬಿದ್ದಿದೆ. ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೈಮೆಲೆ ಅನೇಕ ಕಡೆ‌ ಸುಟ್ಟ ಗಾಯಗಳಾಗಿದ್ದರಿಂದ ಬಾಲಕಿ ನರಳಾಡಿದ್ದಾಳೆ. ಆದರೆ, ಸ್ವಲ್ಪ ಗುಣಮುಖರಾಗಿದ್ದರಿಂದ ಮೊನ್ನೆ ಬಾಲಕಿಯನ್ನು ಡಿಸ್ಜಾರ್ಜ್ ಮಾಡಲಾಗಿತ್ತು. ಆದರೆ, ಶುಕ್ರವಾರ (ಜೂ.20) ಮುಂಜಾನೆ ಮತ್ತೆ ಮೈಮೇಲೆ ಗುಳ್ಳೆಗಳಾಗಿದ್ದರಿಂದ ಬಾಲಕಿಯನ್ನು ಹೆತ್ತವರು ಮತ್ತೆ ಕಿಮ್ಸ್​ಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಕಿಮ್ಸ್​ಗೆ ಕರೆದುಕೊಂಡು ಹೋಗುವಷ್ಟರಲ್ಲಿ ಬಾಲಕಿ ಬಾರದ ಲೋಕಕ್ಕೆ ಹೋಗಿದ್ದಾಳೆ.

ಮಗಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಹೆತ್ತವರಿಗೆ ರುಕ್ಸಾನಾಬಾನು ಒಬ್ಪಳೇ ಮಗಳು. ರುಕ್ಸಾನಾಬಾನು ಹೆತ್ತವರಿಗೆ ಮದುವೆಯಾಗಿ ಅನೇಕ ವರ್ಷವಾದರೂ ಮಕ್ಕಳಾಗಿರಲಿಲ್ಲವಂತೆ. ಹೀಗಾಗಿ, ಹೆತ್ತವರು ಹತ್ತಾರು ದೇವರಿಗೆ ಮಕ್ಕಳಿಗಾಗಿ ಹರಕೆ ಹೊತ್ತಿದ್ದರಂತೆ. ದೇವರ ಆಶಿರ್ವಾದಿಂದ ಎರಡುವರೆ ವರ್ಷದ ಹಿಂದೆ ರುಕ್ಸಾನಾಬಾನು ಜನಿಸಿದ್ದಳು.

ಇದನ್ನೂ ಓದಿ
Image
ಹಠ ಮಾಡುತ್ತೆಂದು ಮಗುವಿನ ಮುಖ,ಅಂಗಾಲಿಗೆ ಬರೆ: ಹೆತ್ತವಳಿಂದ ಇದೆಂಥಾ ಕೃತ್ಯ
Image
ಕೊನೆಗೂ ಹುಬ್ಬಳ್ಳಿ ವಿವಾದಿತ ಈದ್ಗಾ ಮೈದಾನದ ಕಂಪೌಂಡ್ ತೆರವು
Image
ಪತಿ ಮನೆಯಿಂದ ಮಗಳನ್ನು ಎತ್ತಿಕೊಂಡು ಹೋದ ಹೆತ್ತವರು, ಮುಂದೇನಾಯ್ತು?
Image
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?

ಇದನ್ನೂ ಓದಿ: ಬೆಂಗಳೂರು ಟು ಗೋವಾ: ಮಧುಚಂದ್ರಕ್ಕೆ ಕರೆದೊಯ್ದು ಪ್ರೇಯಿಸಿ ಹತ್ಯೆಗೈದ ಪ್ರಿಯಕರ

ಇರುವ ಒಬ್ಪಳೇ ಮಗಳನ್ನು ಹೂವಿನಂತೆ ನೋಡಿಕೊಂಡಿದ್ದರಂತೆ. ಆದರೆ, ಮದುವೆ ಮನೆಯಲ್ಲಿ ಊಟಕ್ಕೆ ನೀಡಲು ಬಿಸಿ ಮಾಡಿಟ್ಟ ಪಾತ್ರೆ ಬಳಿ ಆಟವಾಡುತ್ತಾ ಹೋಗಿದ್ದ ರುಕ್ಸಾನಾಬಾನು ಪಾತ್ರೆ ಮುಟ್ಟಿದ್ದಾಳೆ. ಒಲೆ ಮೇಲಿದ್ದ ಪಾತ್ರೆ ಜಾರಿ ರುಕ್ಸಾನಾಬಾನು ಮೈಮೆಲೆ ಬಿದ್ದಿದೆ. ಸುಡುವ ಸಾರು ಬಿದ್ದಿದ್ದರಿಂದ ಬಾಲಕಿ ಬಾರದ ಲೋಕಕ್ಕೆ ಹೋಗಿದ್ದಾಳೆ.

ಇದ್ದೊಬ್ಬ ಮಗಳನ್ನು ಕಳೆದುಕೊಂಡ ಹೆತ್ತವರು ಕಂಗಾಲಾಗಿದ್ದಾರೆ. ಹೆತ್ತವರು ಸ್ವಲ್ಪ ಯಾಮಾರಿದರೂ ಎಂತಹ ದುರ್ಘಟನೆ ಆಗುತ್ತದೆ ಅನ್ನೋದಕ್ಕೆ ಇದು ಉದಾಹರಣೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Fri, 20 June 25

‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು