AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ

ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
TV9 Web
| Edited By: |

Updated on:Dec 04, 2022 | 8:02 PM

Share

ಹುಬ್ಬಳ್ಳಿ: ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆ (South Western Railway)ಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ. ನೈಋತ್ಯ ರೈಲ್ವೆ ವಲಯವು ಈ ಆರ್ಥಿಕ ವರ್ಷದ ನವೆಂಬರ್​ವರೆಗೆ 4,447.67 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷ ಈ ಅವಧಿಗೆ 3,400.83 ಕೋಟಿ ರೂ. ಆದಾಯ ಕ್ರೋಡೀಕರಣವಾಗಿತ್ತು. ಆ ಮೂಲಕ ಈ ಬಾರಿಯ ಆದಾಯದಲ್ಲಿ ಶೇ. 30.78ರಷ್ಟು ಹೆಚ್ಚಳ ಕಂಡಿದೆ. ಅಲ್ಲದೇ ಹೊಸ ಹೊಸ ಯೋಜನೆ ಮೂಲಕ ಕೋವಿಡ್ ನಂತರದಲ್ಲಿ ದಾಖಲೆಯ ಆದಾಯವನ್ನು ತನ್ನ ಬೊಕ್ಕಸಕ್ಕೆ ಜಮಾ ಮಾಡಿಕೊಂಡಿದೆ.

ಇನ್ನೂ ಈ ವರ್ಷದ ನವೆಂಬರ್‌ವರೆಗೆ ಪ್ರಯಾಣಿಕರ ಸಂಚಾರದಿಂದ 1,813.58 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಕಳೆದ ವರ್ಷ 927.31 ಕೋಟಿ ರೂಪಾಯಿ ಆದಾಯವಾಗಿತ್ತು. ಕಳೆದ ಬಾರಿಗಿಂತ ಶೇ. 95.57ರಷ್ಟು ಹೆಚ್ಚಿನ ಆದಾಯ ಪ್ರಯಾಣಿಕರ ಸಂಚಾರದಿಂದ ಆಗಿದೆ.

ಇದನ್ನೂ ಓದಿ: ವಿಶೇಷ ಚೇತನರಿಗಾಗಿಯೇ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಟ್ಟಿ ಕೆಫೆ ಆರಂಭ

ಟಿಕೆಟ್ ಪರಿಶೀಲನೆಯಿಂದ ಕಳೆದ ಬಾರಿ 15.72 ಕೋಟಿ ರೂ. ದಂಡ ವಸೂಲಿಯಾಗಿತ್ತು. ಈ ಬಾರಿ 37.74 ಕೋಟಿ ರೂ. ಸಂಗ್ರಹಣೆಯಾಗಿದ್ದು, ಇದರಲ್ಲಿಯೂ ಶೇ 104.08ರಷ್ಟು ಹೆಚ್ಚಳವಾಗಿದೆ. ಸರಕು ಸಾಗಣೆಯಿಂದ ಬರುವ ಆದಾಯ ಶೇ 16.32ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ರಸ್ತೆ, ಬಸ್ ಸಮಸ್ಯೆ ನಡುವೆ ಶಾಲೆಗೆ ಹೋಗಲು ಮಕ್ಕಳಿಗೆ ಚಿರತೆ ಭಯ

ಸರಕು ಸಾಗಣೆಯಿಂದ ಕಳೆದ ವರ್ಷ 80.20 ಕೋಟಿ ರೂ. ಆದಾಯ ಸಂಗ್ರಹಣೆಯಾಗಿದ್ದರೆ, ಈ ಬಾರಿ 93.29 ಕೋಟಿ ರೂ. ಆದಾಯ ಸಂಗ್ರಹಗೊಂಡಿದೆ. ರೈಲ್ವೆ ಸಿಬ್ಬಂದಿಯ ಕಾರ್ಯಕ್ಷಮತೆಯಿಂದಾಗಿ ನೈಋತ್ಯ ವಲಯ ಉತ್ತಮ ಆದಾಯ ಗಳಿಸಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕುಮಾರ ತಿಳಿಸಿದ್ದಾರೆ.

ವರದಿ: ರಹಮತ್ ಕೆ, ಟಿವಿ9 ಹುಬ್ಬಳ್ಳಿ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sun, 4 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ