AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ

ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
TV9 Web
| Edited By: |

Updated on:Dec 04, 2022 | 8:02 PM

Share

ಹುಬ್ಬಳ್ಳಿ: ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆ (South Western Railway)ಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ. ನೈಋತ್ಯ ರೈಲ್ವೆ ವಲಯವು ಈ ಆರ್ಥಿಕ ವರ್ಷದ ನವೆಂಬರ್​ವರೆಗೆ 4,447.67 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷ ಈ ಅವಧಿಗೆ 3,400.83 ಕೋಟಿ ರೂ. ಆದಾಯ ಕ್ರೋಡೀಕರಣವಾಗಿತ್ತು. ಆ ಮೂಲಕ ಈ ಬಾರಿಯ ಆದಾಯದಲ್ಲಿ ಶೇ. 30.78ರಷ್ಟು ಹೆಚ್ಚಳ ಕಂಡಿದೆ. ಅಲ್ಲದೇ ಹೊಸ ಹೊಸ ಯೋಜನೆ ಮೂಲಕ ಕೋವಿಡ್ ನಂತರದಲ್ಲಿ ದಾಖಲೆಯ ಆದಾಯವನ್ನು ತನ್ನ ಬೊಕ್ಕಸಕ್ಕೆ ಜಮಾ ಮಾಡಿಕೊಂಡಿದೆ.

ಇನ್ನೂ ಈ ವರ್ಷದ ನವೆಂಬರ್‌ವರೆಗೆ ಪ್ರಯಾಣಿಕರ ಸಂಚಾರದಿಂದ 1,813.58 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಕಳೆದ ವರ್ಷ 927.31 ಕೋಟಿ ರೂಪಾಯಿ ಆದಾಯವಾಗಿತ್ತು. ಕಳೆದ ಬಾರಿಗಿಂತ ಶೇ. 95.57ರಷ್ಟು ಹೆಚ್ಚಿನ ಆದಾಯ ಪ್ರಯಾಣಿಕರ ಸಂಚಾರದಿಂದ ಆಗಿದೆ.

ಇದನ್ನೂ ಓದಿ: ವಿಶೇಷ ಚೇತನರಿಗಾಗಿಯೇ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಟ್ಟಿ ಕೆಫೆ ಆರಂಭ

ಟಿಕೆಟ್ ಪರಿಶೀಲನೆಯಿಂದ ಕಳೆದ ಬಾರಿ 15.72 ಕೋಟಿ ರೂ. ದಂಡ ವಸೂಲಿಯಾಗಿತ್ತು. ಈ ಬಾರಿ 37.74 ಕೋಟಿ ರೂ. ಸಂಗ್ರಹಣೆಯಾಗಿದ್ದು, ಇದರಲ್ಲಿಯೂ ಶೇ 104.08ರಷ್ಟು ಹೆಚ್ಚಳವಾಗಿದೆ. ಸರಕು ಸಾಗಣೆಯಿಂದ ಬರುವ ಆದಾಯ ಶೇ 16.32ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ರಸ್ತೆ, ಬಸ್ ಸಮಸ್ಯೆ ನಡುವೆ ಶಾಲೆಗೆ ಹೋಗಲು ಮಕ್ಕಳಿಗೆ ಚಿರತೆ ಭಯ

ಸರಕು ಸಾಗಣೆಯಿಂದ ಕಳೆದ ವರ್ಷ 80.20 ಕೋಟಿ ರೂ. ಆದಾಯ ಸಂಗ್ರಹಣೆಯಾಗಿದ್ದರೆ, ಈ ಬಾರಿ 93.29 ಕೋಟಿ ರೂ. ಆದಾಯ ಸಂಗ್ರಹಗೊಂಡಿದೆ. ರೈಲ್ವೆ ಸಿಬ್ಬಂದಿಯ ಕಾರ್ಯಕ್ಷಮತೆಯಿಂದಾಗಿ ನೈಋತ್ಯ ವಲಯ ಉತ್ತಮ ಆದಾಯ ಗಳಿಸಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕುಮಾರ ತಿಳಿಸಿದ್ದಾರೆ.

ವರದಿ: ರಹಮತ್ ಕೆ, ಟಿವಿ9 ಹುಬ್ಬಳ್ಳಿ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sun, 4 December 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!