AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ

ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ.

ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
ನೈಋತ್ಯ ರೈಲ್ವೆಯಿಂದ ಮತ್ತೊಂದು ದಾಖಲೆ; ಆದಾಯದಲ್ಲಿಯೂ ಶೇ 30.78ರಷ್ಟು ಹೆಚ್ಚಳ
TV9 Web
| Edited By: Rakesh Nayak Manchi|

Updated on:Dec 04, 2022 | 8:02 PM

Share

ಹುಬ್ಬಳ್ಳಿ: ಸಾಕಷ್ಟು ಜನಪರ ಯೋಜನೆ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದ ನೈಋತ್ಯ ರೈಲ್ವೆ (South Western Railway)ಯು ಮತ್ತೊಂದು ಸಾಧನೆ ಮಾಡಿದೆ. ತನ್ನ ಜವಾಬ್ದಾರಿಯ ಜೊತೆಗೆ ಈಗ ಆದಾಯದಲ್ಲಿಯೂ ಕೂಡ ದಾಖಲೆ ನಿರ್ಮಿಸಿದೆ. ನೈಋತ್ಯ ರೈಲ್ವೆ ವಲಯವು ಈ ಆರ್ಥಿಕ ವರ್ಷದ ನವೆಂಬರ್​ವರೆಗೆ 4,447.67 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷ ಈ ಅವಧಿಗೆ 3,400.83 ಕೋಟಿ ರೂ. ಆದಾಯ ಕ್ರೋಡೀಕರಣವಾಗಿತ್ತು. ಆ ಮೂಲಕ ಈ ಬಾರಿಯ ಆದಾಯದಲ್ಲಿ ಶೇ. 30.78ರಷ್ಟು ಹೆಚ್ಚಳ ಕಂಡಿದೆ. ಅಲ್ಲದೇ ಹೊಸ ಹೊಸ ಯೋಜನೆ ಮೂಲಕ ಕೋವಿಡ್ ನಂತರದಲ್ಲಿ ದಾಖಲೆಯ ಆದಾಯವನ್ನು ತನ್ನ ಬೊಕ್ಕಸಕ್ಕೆ ಜಮಾ ಮಾಡಿಕೊಂಡಿದೆ.

ಇನ್ನೂ ಈ ವರ್ಷದ ನವೆಂಬರ್‌ವರೆಗೆ ಪ್ರಯಾಣಿಕರ ಸಂಚಾರದಿಂದ 1,813.58 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಕಳೆದ ವರ್ಷ 927.31 ಕೋಟಿ ರೂಪಾಯಿ ಆದಾಯವಾಗಿತ್ತು. ಕಳೆದ ಬಾರಿಗಿಂತ ಶೇ. 95.57ರಷ್ಟು ಹೆಚ್ಚಿನ ಆದಾಯ ಪ್ರಯಾಣಿಕರ ಸಂಚಾರದಿಂದ ಆಗಿದೆ.

ಇದನ್ನೂ ಓದಿ: ವಿಶೇಷ ಚೇತನರಿಗಾಗಿಯೇ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಟ್ಟಿ ಕೆಫೆ ಆರಂಭ

ಟಿಕೆಟ್ ಪರಿಶೀಲನೆಯಿಂದ ಕಳೆದ ಬಾರಿ 15.72 ಕೋಟಿ ರೂ. ದಂಡ ವಸೂಲಿಯಾಗಿತ್ತು. ಈ ಬಾರಿ 37.74 ಕೋಟಿ ರೂ. ಸಂಗ್ರಹಣೆಯಾಗಿದ್ದು, ಇದರಲ್ಲಿಯೂ ಶೇ 104.08ರಷ್ಟು ಹೆಚ್ಚಳವಾಗಿದೆ. ಸರಕು ಸಾಗಣೆಯಿಂದ ಬರುವ ಆದಾಯ ಶೇ 16.32ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ರಸ್ತೆ, ಬಸ್ ಸಮಸ್ಯೆ ನಡುವೆ ಶಾಲೆಗೆ ಹೋಗಲು ಮಕ್ಕಳಿಗೆ ಚಿರತೆ ಭಯ

ಸರಕು ಸಾಗಣೆಯಿಂದ ಕಳೆದ ವರ್ಷ 80.20 ಕೋಟಿ ರೂ. ಆದಾಯ ಸಂಗ್ರಹಣೆಯಾಗಿದ್ದರೆ, ಈ ಬಾರಿ 93.29 ಕೋಟಿ ರೂ. ಆದಾಯ ಸಂಗ್ರಹಗೊಂಡಿದೆ. ರೈಲ್ವೆ ಸಿಬ್ಬಂದಿಯ ಕಾರ್ಯಕ್ಷಮತೆಯಿಂದಾಗಿ ನೈಋತ್ಯ ವಲಯ ಉತ್ತಮ ಆದಾಯ ಗಳಿಸಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕುಮಾರ ತಿಳಿಸಿದ್ದಾರೆ.

ವರದಿ: ರಹಮತ್ ಕೆ, ಟಿವಿ9 ಹುಬ್ಬಳ್ಳಿ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sun, 4 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು