AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ

ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದ ಆಘಾತಕಾರಿ ಆ್ಯಸಿಡ್ ದಾಳಿಯಲ್ಲಿ 6 ತಿಂಗಳ ಮಗು ಸೇರಿ ಐವರು ಗಾಯಗೊಂಡಿದ್ದಾರೆ. ನಾದಿನಿಯರ ಫೋಟೋ ತೆಗೆದ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ ಈ ಕೃತ್ಯ ನಡೆದಿದೆ. ಘಟನೆಯಲ್ಲಿ ಆರೋಪಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪತ್ನಿ ಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರImage Credit source: thedailystar.net
ಸಂಜಯ್ಯಾ ಚಿಕ್ಕಮಠ
| Edited By: |

Updated on: May 09, 2026 | 2:42 PM

Share

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ.

  • ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ
  • ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದ ಘಟನೆ
  • ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಶುರುವಾಗಿದ್ದ ಜಗಳ

ಇದನ್ನೂ ಓದಿ: ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ; ಏನಿದು ಕುಂದಗೋಳ ಮಠದ ವಿವಾದ?

ನಾದಿನಿಯರ ವಿಚಾರವಾಗಿ ಸುರೇಶ್ ಮತ್ತು ಆತನ ಪತ್ನಿ ರಾಜೇಶ್ವರಿ ನಡುವೆ ಜಗಳ ನಡೆದಿತ್ತು. ನಾದಿನಿಯರ ಫೋಟೋ ತೆಗೆಯದಂತೆ ಗಂಡನಿಗೆ ರಾಜೇಶ್ವರಿ ತಾಕೀತು ಮಾಡಿದ್ದರೂ ಮತ್ತೆ  ಫೋಟೋ ತೆಗೆದು ಸುರೇಶ್ ಕಿರಿಕ್ ಮಾಡುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವಿನ ಜಗಳ ಆ್ಯಸಿಡ್​​ ದಾಳಿಯ ಹಂತಕ್ಕೆ ಹೋಗಿದೆ. ಘಟನೆಯಲ್ಲಿ ಶ್ರುತಿ ಹಾಗೂ ರೇಷ್ಮಾ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ವತಃ ಆರೋಪಿ ಸುರೇಶ್​ ಬೈಲ್​ ಪತ್ತಾರ(33) ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಇನ್ನು ಆರೋಪಿ ಸುರೇಶ್​ ಬೈಲ್​ ಪತ್ತಾರ ತಾಮ್ರ, ಹಿತ್ತಾಳೆ ಕೆಲಸಗಳನ್ನು ಮಾಡಿಕೊಂಡಿದ್ದ. ನಾದಿನಿಯರ ವಿಚಾರ ಸಂಬಂಧದ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್​​ನಿಂದಲೇ ಈತ ಕುಟುಂಬದ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸುರೇಶ್​​ ಮೈಮೇಲೆಯೂ ಆ್ಯಸಿಡ್​​ ಚೆಲ್ಲಿದ ಪರಿಣಾಮ ಆತನೂ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ಒಟ್ಟಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವೀಗ ಇಬ್ಬರ ಜೀವವನ್ನು ಅಪಾಯಕ್ಕೆ ನೂಕಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ