AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ

ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣವು ದೇಶದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಂಡಿದೆ. ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನ ಸೆಳೆಯುವಲ್ಲಿ ಹುಬ್ಬಳ್ಳಿ ಯಶಸ್ವಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದ್ದು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ
ಹುಬ್ಬಳ್ಳಿ ಏರ್​ಪೋರ್ಟ್​
TV9 Web
| Edited By: |

Updated on: Mar 21, 2024 | 11:33 AM

Share

ಹುಬ್ಬಳ್ಳಿ, ಮಾರ್ಚ್​.21: ಚೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ (Hubballi Airport ) ದೇಶದಲ್ಲೇ ಟಾಪ್ 5 ಗರಿ ಸಿಕ್ಕಿದೆ. ಭಾರತದ 58 ವಿಮಾನ ನಿಲ್ದಾಣಗಳನ್ನು ಈ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ಪರಿಗಣಿಸಲಾಗಿತ್ತು. ಅದರಲ್ಲಿ ಟಾಪ್ 5ನೇ ಸ್ಥಾನವನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣವು ಪಡೆದುಕೊಂಡಿದೆ. ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನ ಸೆಳೆಯುವಲ್ಲಿ ಹುಬ್ಬಳ್ಳಿ ಯಶಸ್ವಿಯಾಗಿದೆ.

1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್​ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ. ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಇಚ್ಛಾಶಕ್ತಿಯಿಂದಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಕಂಡು ಹುಬ್ಬಳ್ಳಿ ವಿಮಾನ ನಿಲ್ದಾಣ ಕಂಗೊಳಿಸುತ್ತಿದೆ.

ದೇಶದ 58ರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಟಾಪ್ 5

ದೇಶದ ಒಟ್ಟು 58 ವಿಮಾನ ನಿಲ್ದಾಣಗಳಲ್ಲಿ ಟಾಪ್ 5ನೇ ಸ್ಥಾನವನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣ  ಗಿಟ್ಟಿಸಿಕೊಂಡಿದ್ದು, ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನವನ್ನೇ ಸೆಳೆದಿದೆ.

ಮೊನ್ನೆ ಮೊನ್ನೆಯಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್​ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಎರಡೇ ವರ್ಷದಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದನ್ನು ಸ್ಮರಿಸಬಹುದು.

ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ-ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ.

ಇದನ್ನೂ ಓದಿ;ಮೇಕೆದಾಟು ವಿಚಾರದಲ್ಲಿ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿರುವ ದ್ರೋಹಿಗಳು: ಡಿಎಂಕೆ ಪ್ರಣಾಳಿಕೆ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ

ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದ್ದು, ದೆಹಲಿ, ಬೆಂಗಳೂರು, ಹೈದ್ರಾಬಾದ್, ಮುಂಬೈ, ಚೆನ್ನೈ ಮುಂತಾದ ನಗರಗಳಿಗೆ ವಿಮಾನ ಸೌಲಭ್ಯ ಲಭ್ಯವಿದೆ. ಇಂಡಿಗೋ, ಸ್ಪೇಸ್ ಜೆಟ್​, ಏರ್​ಇಂಡಿಯಾ, ಅಲಯನ್ಸ್​ ಏರ್​ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿವೆ. ಕೆಲ ವರ್ಷಗಳಿಂದ ಇಲ್ಲಿ ಕಾಗೋರ್ ಸೇವೆಯನ್ನೂ ಆರಂಭಿಸಲಾಗಿದೆ.

ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ವಿಮಾನಯನ ಮೂಲಕ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ವಾಣಿಜ್ಯ ನಗರಿಗೆ ಬಂದಿಳಿದು ಹಾರಾಟ ನಡೆಸಿವೆ. ಸಾವಿರಾರು ಪ್ರಯಾಣಿಕರು ಸುಖಕರ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶಕುಮಾರ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಜೋಶಿ ಅಭಿನಂದನೆ

ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ 5ನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಈ ಮನ್ನಣೆ ಪಡೆಯಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ