AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಹೊಡೆಯುವ ವಿಚಾರಕ್ಕಾಗಿ ನಡೆಯಿತು ಆಕಾಶ್​ ಮಠಪತಿ ಕೊಲೆ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. 3 ತಿಂಗಳಲ್ಲಿ ಮೂರು ಕೊಲೆಗಳಾಗಿವೆ. ಶನಿವಾರ ರಾತ್ರಿ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್​ ಸ್ಕೂಲ್​ ಹಿಂಭಾಗ ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್​ನ​ ಕೊಲೆಯಾಗಿತ್ತು. ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ.

ಎಣ್ಣೆ ಹೊಡೆಯುವ ವಿಚಾರಕ್ಕಾಗಿ ನಡೆಯಿತು ಆಕಾಶ್​ ಮಠಪತಿ ಕೊಲೆ!
ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ, ಆಕಾಶ್​
ಶಿವಕುಮಾರ್ ಪತ್ತಾರ್
| Edited By: |

Updated on:Jul 08, 2024 | 10:35 AM

Share

ಹುಬ್ಬಳ್ಳಿ, ಜೂನ್​ 24: ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ (Sekharayya Mathapati) ಪುತ್ರ ಆಕಾಶ್ (Akash Mathapati) ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ-ಹುಬ್ಬಳ್ಳಿ ಠಾಣೆ ಪೋಲಿಸರು (Old Hubballi Police Station) ಎಂಟು ಜನರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕೊಲೆಯಾದ ಆಕಾಶ್​ ಸ್ನೇಹಿತ ರಾಹುಲ್​​​ ಪೊಲೀಸರ ಮುಂದೆ ಕೊಲೆಗೆ ಮದ್ಯ ಶೇರಿಂಗ್​ನಿಂದ ಶುರುವಾದ ಗಲಾಟೆ ಕಾರಣ ಅಂತ ಹೇಳಿದ್ದಾನೆ.

ಕಳೆದ ಎರಡು ದಿನಗಳ ಹಿಂದೆ ಆಕಾಶ್ ಹಾಗೂ ಸ್ನೇಹಿತರು ಲೋಹಿಯಾ ‌ನಗರದ ಪವನ್ ಶಾಲೆಯ ಹಿಂಭಾಗ ಪಾರ್ಟಿ ಮಾಡತಿದ್ದರು. ಮದ್ಯ ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆ. ಕೊಲೆಯಾದ ಆಕಾಶ್​ ಮಠಪತಿ ಮದ್ಯವನ್ನು ಜಾಸ್ತಿ ಹಾಕಿಕೊಂಡಿದ್ದಾರೆ. ನಿನಗೆ ಯಾಕೆ ಜಾಸ್ತಿ ಎಂದು ಕೇಳಿದಾಗ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಹುಲ್​ ಆಕಾಶ್​ನ ಕಪಾಳಕ್ಕೆ ಹೊಡೆದಿದ್ದಾನೆ. ಕೂಡಲೆ ಆಕಾಶ್​ ಕೆಳಗೆ ಬಿದ್ದಿದ್ದಾನೆ. ಕುಡಿಯುವ ವಿಚಾರಕ್ಕೆ ನಾನು ಹೊಡೆದಿದ್ದೇನೆ ಎಂದು ರಾಹುಲ್ ತಪ್ಪೊಪ್ಪಿಕೊಂಡಿದ್ದಾನೆ.

ಆಕಾಶ್ ಕೆಳಗೆ ಬಿದ್ದ ತಕ್ಷಣ ರಾಹುಲ್ ಅಲ್ಲಿಂದ ಓಡಿ ಹೋಗಿದ್ದಾನೆ. ಕುಡಿದ ಮತ್ತಿನಲ್ಲಿ ಆಕಾಶ್ ಮೃತಪಟ್ಟಿರುವ ಬಗ್ಗೆ ಸ್ನೇಹಿತರ ಗಮನಕ್ಕೆ ಬಂದಿರಲಿಲ್ಲ. ಅರ್ಜುನ್‌ ಮಳಗಿ, ಸಂಜು ಕೊಪ್ಪದ್, ರಾಹುಲ್ ಕಾಂಬ್ಳೆ, ವಿನಾಯಕ ತಾಳಿಕೊಟಿ, ಮನೋಜ್, ಚಮಕ್ ಅಲಿಯಾಸ್ ಮೌನೇಶ್, ಮಹೇಶ್ ಹಾಗೂ ಕಾರ್ತಿಕ ಬಂಧಿತರು. ಶೇಖರಯ್ಯ ಮಠಪತಿ ಆಕಾಶ್​​ ಪತ್ನಿ, ಅತ್ತೆ ಮತ್ತು ಮಾವನ ವಿರುದ್ಧವೂ ದೂರು ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಕ್ರೈಂ ಡೈರಿ: ಆಕಾಶ್ ಮಠಪತಿ ಕೊಲೆ ಬೆನ್ನಲ್ಲೇ ಮತ್ತೊಂದು ಶವ ಪತ್ತೆ

ಹುಬ್ಬಳ್ಳಿಯಲ್ಲಿ ಕಳೆದ 3 ತಿಂಗಳಲ್ಲಿ ಮೂರು ಕೊಲೆಗಳಾದವು. ಏಪ್ರಿಲ್​ ತಿಂಗಳಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆಯಾಗಿತ್ತು. ನಂತರ ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮೇ ತಿಂಗಳಲ್ಲಿ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಕೊಲೆಯಾಗಿದೆ. ಈ ಎರಡೂ ಪ್ರಕರಣದಿಂದ ಬೆಚ್ಚಿ ಬಿದ್ದಿರುವ ಹುಬ್ಬಳ್ಳಿ ಜನತೆ ಮತ್ತೊಂದು ಕೊಲೆಯ ಸುದ್ದಿ ಕೇಳಿದ್ದಾರೆ. ಅದು, ಆಟೋ ಚಾಲಕರ ಪರವಾಗಿ ಸತತ ಹೋರಾಟ ಮಾಡುತ್ತ ಬಂದಿರುವ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಹಿರೇಮಠ ಪುತ್ರ ಆಕಾಶ್​ ಕೊಲೆ. ಸರಣಿ ಕೊಲೆಗಳಾಗಿದ್ದು, ಕಾನೂನು ಸುವ್ಯವಸ್ತೆ ಹದಗೆಟ್ಟಿದೆ ಎಂದು ಹುಬ್ಬಳ್ಳಿ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಮೃತ ಆಕಾಶ್​ನದ್ದು ಪ್ರೇಮ ವಿವಾಹ. ಆಕಾಶ್​ ಮತ್ತು ಪತ್ನಿ ಕಾವ್ಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಾಸವಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Mon, 24 June 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?