ಎಣ್ಣೆ ಹೊಡಿಯುವ ವಿಚಾರಕ್ಕಾಗಿ ನಡೆಯಿತಿ ಆಕಾಶ್​ ಮಠಪತಿ ಕೊಲೆ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. 3 ತಿಂಗಳಲ್ಲಿ ಮೂರು ಕೊಲೆಗಳಾಗಿವೆ. ಶನಿವಾರ ರಾತ್ರಿ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್​ ಸ್ಕೂಲ್​ ಹಿಂಭಾಗ ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್​ನ​ ಕೊಲೆಯಾಗಿತ್ತು. ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ.

ಎಣ್ಣೆ ಹೊಡಿಯುವ ವಿಚಾರಕ್ಕಾಗಿ ನಡೆಯಿತಿ ಆಕಾಶ್​ ಮಠಪತಿ ಕೊಲೆ!
ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ, ಆಕಾಶ್​
Follow us
| Updated By: ವಿವೇಕ ಬಿರಾದಾರ

Updated on:Jun 24, 2024 | 11:07 AM

ಹುಬ್ಬಳ್ಳಿ, ಜೂನ್​ 24: ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ (Sekharayya Mathapati) ಪುತ್ರ ಆಕಾಶ್ (Akash Mathapati) ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ-ಹುಬ್ಬಳ್ಳಿ ಠಾಣೆ ಪೋಲಿಸರು (Old Hubballi Police Station) ಎಂಟು ಜನರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕೊಲೆಯಾದ ಆಕಾಶ್​ ಸ್ನೇಹಿತ ರಾಹುಲ್​​​ ಪೊಲೀಸರ ಮುಂದೆ ಕೊಲೆಗೆ ಮದ್ಯ ಶೇರಿಂಗ್​ನಿಂದ ಶುರುವಾದ ಗಲಾಟೆ ಕಾರಣ ಅಂತ ಹೇಳಿದ್ದಾನೆ.

ಕಳೆದ ಎರಡು ದಿನಗಳ ಹಿಂದೆ ಆಕಾಶ್ ಹಾಗೂ ಸ್ನೇಹಿತರು ಲೋಹಿಯಾ ‌ನಗರದ ಪವನ್ ಶಾಲೆಯ ಹಿಂಭಾಗ ಪಾರ್ಟಿ ಮಾಡತಿದ್ದರು. ಮದ್ಯ ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆ. ಕೊಲೆಯಾದ ಆಕಾಶ್​ ಮಠಪತಿ ಮದ್ಯವನ್ನು ಜಾಸ್ತಿ ಹಾಕಿಕೊಂಡಿದ್ದಾರೆ. ನಿನಗೆ ಯಾಕೆ ಜಾಸ್ತಿ ಎಂದು ಕೇಳಿದಾಗ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಹುಲ್​ ಆಕಾಶ್​ನ ಕಪಾಳಕ್ಕೆ ಹೊಡೆದಿದ್ದಾನೆ. ಕೂಡಲೆ ಆಕಾಶ್​ ಕೆಳಗೆ ಬಿದ್ದಿದ್ದಾನೆ. ಕುಡಿಯುವ ವಿಚಾರಕ್ಕೆ ನಾನು ಹೊಡೆದಿದ್ದೇನೆ ಎಂದು ರಾಹುಲ್ ತಪ್ಪೊಪ್ಪಿಕೊಂಡಿದ್ದಾನೆ.

ಆಕಾಶ್ ಕೆಳಗೆ ಬಿದ್ದ ತಕ್ಷಣ ರಾಹುಲ್ ಅಲ್ಲಿಂದ ಓಡಿ ಹೋಗಿದ್ದಾನೆ. ಕುಡಿದ ಮತ್ತಿನಲ್ಲಿ ಆಕಾಶ್ ಮೃತಪಟ್ಟಿರುವ ಬಗ್ಗೆ ಸ್ನೇಹಿತರ ಗಮನಕ್ಕೆ ಬಂದಿರಲಿಲ್ಲ. ಅರ್ಜುನ್‌ ಮಳಗಿ, ಸಂಜು ಕೊಪ್ಪದ್, ರಾಹುಲ್ ಕಾಂಬ್ಳೆ, ವಿನಾಯಕ ತಾಳಿಕೊಟಿ, ಮನೋಜ್, ಚಮಕ್ ಅಲಿಯಾಸ್ ಮೌನೇಶ್, ಮಹೇಶ್ ಹಾಗೂ ಕಾರ್ತಿಕ ಬಂಧಿತರು. ಶೇಖರಯ್ಯ ಮಠಪತಿ ಆಕಾಶ್​​ ಪತ್ನಿ, ಅತ್ತೆ ಮತ್ತು ಮಾವನ ವಿರುದ್ಧವೂ ದೂರು ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಕ್ರೈಂ ಡೈರಿ: ಆಕಾಶ್ ಮಠಪತಿ ಕೊಲೆ ಬೆನ್ನಲ್ಲೇ ಮತ್ತೊಂದು ಶವ ಪತ್ತೆ

ಹುಬ್ಬಳ್ಳಿಯಲ್ಲಿ ಕಳೆದ 3 ತಿಂಗಳಲ್ಲಿ ಮೂರು ಕೊಲೆಗಳಾದವು. ಏಪ್ರಿಲ್​ ತಿಂಗಳಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆಯಾಗಿತ್ತು. ನಂತರ ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮೇ ತಿಂಗಳಲ್ಲಿ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಕೊಲೆಯಾಗಿದೆ. ಈ ಎರಡೂ ಪ್ರಕರಣದಿಂದ ಬೆಚ್ಚಿ ಬಿದ್ದಿರುವ ಹುಬ್ಬಳ್ಳಿ ಜನತೆ ಮತ್ತೊಂದು ಕೊಲೆಯ ಸುದ್ದಿ ಕೇಳಿದ್ದಾರೆ. ಅದು, ಆಟೋ ಚಾಲಕರ ಪರವಾಗಿ ಸತತ ಹೋರಾಟ ಮಾಡುತ್ತ ಬಂದಿರುವ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಹಿರೇಮಠ ಪುತ್ರ ಆಕಾಶ್​ ಕೊಲೆ. ಸರಣಿ ಕೊಲೆಗಳಾಗಿದ್ದು, ಕಾನೂನು ಸುವ್ಯವಸ್ತೆ ಹದಗೆಟ್ಟಿದೆ ಎಂದು ಹುಬ್ಬಳ್ಳಿ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಮೃತ ಆಕಾಶ್​ನದ್ದು ಪ್ರೇಮ ವಿವಾಹ. ಆಕಾಶ್​ ಮತ್ತು ಪತ್ನಿ ಕಾವ್ಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಾಸವಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Mon, 24 June 24

ತಾಜಾ ಸುದ್ದಿ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’