AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಸಿಬ್ಬಂದಿ ಎಡವಟ್ಟು: ಲಸಿಕೆ ಓವರ್ ಡೋಸ್‌ನಿಂದ ಮಗು ಸಾವು, ಪೋಷಕರ ಆರೋಪ

ಹುಬ್ಬಳ್ಳಿ ನಗರದ ಉಣಕಲ್​ನಲ್ಲಿ ಅಂಗನವಾಡಿ ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಮಗು ಸಾವು ಆರೋಪ ಕೇಳಿಬಂದಿದೆ. ಒಂದೇ ದಿನ ಮಗುವಿಗೆ 5 ಲಸಿಕೆ ಹಾಕಿದ್ದ ಪರಿಣಾಮ ಓವರ್ ಡೋಸ್‌ನಿಂದ ಮಗು ಮೃತಪಟ್ಟಿದೆ ಎಂದು ಅಂಗನವಾಡಿ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ಕಿಮ್ಸ್ ವೈದ್ಯಕೀಯ ಅಧೀಕ್ಷಕ ಅರುಣ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಲಸಿಕೆ ರಿಯಾಕ್ಟ್‌ ಆಗಿರುವ ತರಹ ಕಾಣುತ್ತಿಲ್ಲ ಎಂದಿದ್ದಾರೆ. 

ಅಂಗನವಾಡಿ ಸಿಬ್ಬಂದಿ ಎಡವಟ್ಟು: ಲಸಿಕೆ ಓವರ್ ಡೋಸ್‌ನಿಂದ ಮಗು ಸಾವು, ಪೋಷಕರ ಆರೋಪ
ಮೃತ ಮಗು ಧ್ರುವ
ಶಿವಕುಮಾರ್ ಪತ್ತಾರ್
| Edited By: |

Updated on:Dec 21, 2023 | 6:12 PM

Share

ಹುಬ್ಬಳ್ಳಿ, ಡಿಸೆಂಬರ್​ 21: ಅಂಗನವಾಡಿ (Anganwadi) ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ಉಣಕಲ್​ನ ನಿವಾಸಿ ಜಟ್ಟೆಪ್ಪರ ಮೊಮ್ಮಗ ಧ್ರುವ (2 ವರ್ಷ) ಮೃತ ಮಗು. ತಾತ ಹಾಗೂ ಅಜ್ಜಿಯ ಮನೆಯಲ್ಲಿ ಧ್ರುವ ವಾಸವಿದ್ದ. ಒಂದೇ ದಿನ 5 ಲಸಿಕೆ ಹಾಕಿದ್ದ ಪರಿಣಾಮ ಓವರ್ ಡೋಸ್‌ನಿಂದ ಮಗು ಮೃತಪಟ್ಟಿದೆ ಎಂದು ಅಂಗನವಾಡಿ ಕೇಂದ್ರದ ಸಿಬ್ಬಂದಿ ವಿರುದ್ಧ ಆರೋಪಿಸಲಾಗಿದೆ.

ನಿನ್ನೆ ಹುಬ್ಬಳ್ಳಿಯ ಸಾಯಿನಗರದ ಅಂಗನವಾಡಿ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆ ಲಸಿಕೆ ಹಾಕಿದ್ದರು. ಲಸಿಕೆ ಹಾಕಿದ ಬಳಿಕ ತೀವ್ರ ಜ್ವರ, ಹೊಟ್ಟೆ ನೋವಿನಿಂದ ಮಗು ಬಳಲಿದ್ದು, ಕೂಡಲೇ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಮಗುವಿನ ಅಜ್ಜಿ ದಾಖಲಿಸಿದ್ದರು. ಕಿಮ್ಸ್​ಗೆ ದಾಖಲಾಗುತ್ತಿದ್ದಂತೆಯೇ ಮಗು ಸಾವನ್ನಪ್ಪಿದೆ. ಆಸ್ಪತ್ರೆ ಆವರಣದಲ್ಲಿ ಮಗುವಿನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಕೊಪ್ಪಳ: ಪದೇ ಪದೇ ಉದುರಿ ಬೀಳುತ್ತಿದೆ ಅಂಗನವಾಡಿಯ ಮೇಲ್ಛಾವಣಿ ಸಿಮೆಂಟ್, ಬಯಲಲ್ಲಿ ಮಕ್ಕಳಿಗೆ ಪಾಠ ಮಾಡುವ ಸ್ಥಿತಿ

ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಅಧೀಕ್ಷಕ ಅರುಣ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಇವತ್ತು 3.25 ಕ್ಕೆ ಮಗು ಕಿಮ್ಸ್​ನಲ್ಲಿ ದಾಖಲಾಗಿತ್ತು. ಮಗು ನಮ್ಮ‌ಲ್ಲಿ ಬಂದಾಗ ಮೃತವಾಗಿತ್ತು. ಮಗುವಿನ ಉಸಿರಾಟ ಇರಲಿಲ್ಲ. ಮಗುವಿಗೆ ತಾಜ ನಗರದಲ್ಲಿ ಲಸಿಕೆ ಹಾಕಿಸಿದ್ದಾರೆ. 16 ರಿಂದ 24 ತಿಂಗಳ ಮಗುವಿಗೆ ಲಸಿಕೆ ಕೊಡಬೇಕು. ಅದೇ ರೀತಿ ಅಂಗನವಾಡಿಯಲ್ಲಿ ಲಸಿಕೆ ಹಾಕಿದ್ದಾರೆ. ಅಕಸ್ಮಾತ್ ಮಗುವಿಗೆ ಲಸಿಕೆ ರಿಯಾಕ್ಷನ್‌ ಆಗಿದ್ದರೆ ನಿನ್ನೆಯೇ ಆಗಬೇಕಿತ್ತು. ಆದರೆ ಲಸಿಕೆ ರಿಯಾಕ್ಟ್‌ ಆಗಿರುವ ತರಹ ಕಾಣುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಬೀಡಾ ಅಂಗಡಿ ಕಟ್ಟಡದಲ್ಲಿ ನಡೆಯುತ್ತಿದ್ದ ಅಂಗನವಾಡಿ ಬೇರೆಡೆಗೆ ಶಿಫ್ಟ್

ಇಂದು ಮಧ್ಯಾಹ್ನ ಊಟ ಮಾಡಿದ ಬಳಿಕ ಮಗು ಕುಸಿದುಬಿದ್ದಿತ್ತು. ಮೊದಲು ಖಾಸಗಿ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿ ಆಕ್ಸಿಜನ್‌ ಇರಲಿಲ್ಲ. ನಮ್ಮಲ್ಲಿ ಬರುವ ಮುನ್ನ ಮಗು ಸಾವನ್ನಪ್ಪಿತ್ತು. ಮಗು ಸಾವಿಗೆ ನಿಖರ ಕಾರಣ ತಿಳಿತಿಲ್ಲ. ಮರೋಣತ್ತರ ಪರೀಕ್ಷೆ ಆದ ಬಳಿಕ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:09 pm, Thu, 21 December 23

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ