ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ; ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ತೋರಿಸಿದ್ದ ಹಂತಕ

ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ; ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ತೋರಿಸಿದ್ದ ಹಂತಕ
ವಿಶ್ವ ಅಲಿಯಾಸ್ ಗಿರೀಶ್​
Follow us
| Updated By: ಗಣಪತಿ ಶರ್ಮ

Updated on: May 17, 2024 | 10:34 AM

ದಾವಣಗೆರೆ / ಹುಬ್ಬಳ್ಳಿ, ಮೇ 17: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ (Anjali ambigera Murder Case) ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಬಂಧಿಸುವಲ್ಲಿ ಪೊಲೀಸರು (Hubli Police) ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ. ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಬಳಿಕ ಪರಾರಿಯಾಗಿದ್ದ ಆರೋಪಿ ವಿಶ್ವಮಾನವ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಸಂಚರಿಸುತ್ತಿದ್ದಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆದರೆ, ರೈಲಿನಲ್ಲೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ!

ವಿಶ್ವ ಅಲಿಯಾಸ್ ಗಿರೀಶ್​ ವಿಶ್ವಮಾನವ ಎಕ್ಸ್​​ಪ್ರೆಸ್​​ ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರ ಜತೆ ಜಗಳ ಮಾಡಿದ್ದಲ್ಲದೆ, ಚಾಕು ತೊರಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದು ರೈಲಿನಲ್ಲಿದ್ದ ಪ್ರಯಾಣಿಕರು ಆತನಿಗೆ ಥಳಿಸಿದ್ದರು. ನಂತರ ಆತ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದ. ಈ ವೇಳೆ, ಸಹ ಪ್ರಯಾಣಿಕರು ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು, ಅಂಜಲಿ ಹತ್ಯೆ ಆರೋಪಿ ರೈಲಿನಲ್ಲಿದ್ದಾನೆ ಎಂದು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಯಕೊಂಡಕ್ಕೆ ಬಂದ ಹುಬ್ಬಳ್ಳಿ ಪೊಲೀಸರು ತಡ‌ರಾತ್ರಿ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಮೈಸೂರಿ​ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ

ಆರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ರೂಪಾಯಿ ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್​ ಮಾಡಿದ್ದಳು. ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ. ಆ ನಂತರ ಆರೋಪಿ ಸಿಟ್ಟಿಗೆದ್ದು ಮೈಸೂರಿ‌ನಿಂದ ಹುಬ್ಬಳ್ಳಿ ಗೆ ಬಂದು 4.30 ರ ಸುಮಾರಿಗೆ ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್​ಗೆ ಬಂದು ಹಾವೇರಿಗೆ ಬಂದಿದ್ದ. ಹಾವೇರಿಯಿಂದ ಮೈಸೂರಿಗೆ ರೈಲು ಹತ್ತಿದ್ದ. ಮಧ್ಯದಲ್ಲಿ ಬಿಹಾರ ವ್ಯಕ್ತಿಯೊಬ್ಬನ ಮೊಬೈಲ್ ನಲ್ಲಿ ಪೋಟೋ ನೋಡಿ ಮೈಸೂರಿಗೆ ವಾಪಸ್ ಹೋಗಿ ಮಹಾರಾಜ್ ಹೋಟೆಲ್​​ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಕಮಿಷನರ್ ಹೇಳಿದ್ದೇನು?

ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೋಲಿಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಯಾಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆಯ ನಂತರವಷ್ಟೇ ತಿಳಿಯಬಹುದಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ; ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ಅರೆಸ್ಟ್

ಬೆಳಗಿನ ಜಾವ 4.30ಕ್ಕೆ ಆರೋಪಿಯನ್ನು ನಮ್ಮ ವಶಕ್ಕೆ ಪಡೆದಿದ್ದೇವೆ. ಮೈಸೂರಿನಿಂದ ಗೋವಾ ಮಹಾರಾಷ್ಟ್ರ ಕಡೆ ತಲೆಮೆರಸಿಕೊಳ್ಳಬೇಕು ಎಂದು ಆತ ಅಂದುಕೊಂಡಿದ್ದ. ಬೈಕ್ ಕಳ್ಳತನ ವಿಚಾರದಲ್ಲಿ ಆತನ ಮೇಲೆ 4 ಪ್ರಕಾರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ