AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ ಪರಮೇಶ್ವರ್

Hubballi Anjali murder case : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆಯಾಗಿದೆ. ಹಂತಕ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದಾನೆ. ಇದೀಗ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅಧಿಕೃತವಾಗಿ ಹೇಳಿದ್ದಾರೆ.

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ ಪರಮೇಶ್ವರ್
ಅಂಜಲಿ, ಪರಮೇಶ್ವರ್
ಶಿವಕುಮಾರ್ ಪತ್ತಾರ್
| Edited By: |

Updated on:May 20, 2024 | 6:07 PM

Share

ಹುಬ್ಬಳ್ಳಿ, (ಮೇ 20): ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು(Hubballi Anjali murder case ) ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್​ ತಿಳಿಸಿದ್ದಾರೆ. ಇಂದು(ಮೇ 20) ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ಎರಡು ಕೊಲೆಗಳು ನಡೆದಿರುವುದು ದುರದೃಷ್ಟಕರ. ಅಂಜಲಿ ಕೊಲೆ ಆರೋಪಿ ಗಿರೀಶ್ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಯುತ್ತಿದೆ. ಆರೋಪಿಗೆ ಶಿಕ್ಷೆ ಆಗಬೇಕು. ಹೀಗಾಗಿ ಪೊಲೀಸ್ ಇಲಾಖೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಇನ್ನು ಈ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ನೇಹಾದಂತೆ ಅಂಜಲಿ ಕೊಲೆ ಕೂಡ ಗಂಭೀರ ಪ್ರಕರಣ. ಕೊಲೆಯಾದ ಅಂಜಲಿ ಅಂಬಿಗೇರ ಕುಟುಂಬ ಕಡುಬಡತನದಲ್ಲಿದೆ. ಬೆಂಗಳೂರಲ್ಲಿ ಇದ್ದುಕೊಂಡೇ 2 ಕೊಲೆ ಕೇಸ್ ಮಾಹಿತಿ ಪಡೆಯುತ್ತಿದ್ದೆ. ಮಾನವೀಯತೆ ದೃಷ್ಟಿಯಿಂದ 2 ಕುಟುಂಬಗಳನ್ನು ಭೇಟಿ ಮಾಡಿದ್ದೇನೆ. ಪೊಲೀಸರಿಗೆ ಕೆಲ ಸೂಚನೆ ಕೊಡಬೇಕು, ಹೀಗಾಗಿ ಹುಬ್ಬಳ್ಳಿಗೆ ಬಂದಿದ್ದೇನೆ ಎಂದು ತಿಳಿಸಿದರು.

ನೇಹಾ ಕೊಲೆ ಕೇಸ್ ಸಿಬಿಐಗೆ ಕೊಡಲ್ಲ

ಇನ್ನು ಇದೇ ವೇಳೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಗಳು ಕೇಳಿಬಂದಿದ್ದು, ಇ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಕೊಡಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದಾರೆ, ಹೀಗಾಗಿ ಸಿಬಿಐಗೆ ಕೊಡಲ್ಲ. ಕೆಲವು ಬಾರಿ ಹೊರಗಿನವರಿಂದ ತನಿಖೆ ಆಗಬೇಕು. ಹೀಗಾಗಿ ನೇಹಾ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:06 pm, Mon, 20 May 24

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ