AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ

ಹುಬ್ಬಳ್ಳಿ ಮತ್ತು ಬೆಂಗಳೂರಿನ ನಡುವೆ ಸಂಚರಿಸುವ ಕೆಲವು ರೈಲುಗಳ ಸಮಯ ಬದಲಾವಣೆಯಾಗಿದೆ. ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವಿನ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲ ರೈಲುಗಳ ಸಮಯ ಬದಲಾವಣೆಯಾಗಿದೆ.

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ
ಹುಬ್ಬಳ್ಳಿ ರೈಲು ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 08, 2024 | 7:49 AM

Share

ಹುಬ್ಬಳ್ಳಿ, ನವೆಂಬರ್​ 08: ಎಸ್​ಎಸ್​ಎಸ್​ ಹುಬ್ಬಳ್ಳಿ (SSS Hubballi) ಮತ್ತು ಕೆಎಸ್​ಆರ್​ ಬೆಂಗಳೂರು (KSR Bengaluru) ನಡುವೆ ಸಂಚರಿಸುವ ರೈಲು (Train) ಸಮಯದಲ್ಲಿ ಬದಲಾವಣೆಯಾಗಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯ ಎಕ್ಸ್​ ಖಾತೆ ಮುಖಾಂತರ ತಿಳಿಸಿದೆ.

ಬೆಂಗಳೂರು ವಿಭಾಗದ ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣೆ ಮತ್ತು ಮೂಲಸೌಕರ್ಯ ನವೀಕರಣದ ಕಾಮಗಾರಿ ನಡೆಯಲಿದೆ. ಹೀಗಾಗಿ, ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲ ರೈಲುಗಳ ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

  1. ನವೆಂಬರ್ 10 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
  2. ನವೆಂಬರ್ 7 ಮತ್ತು 10 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07340 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ 120 ನಿಮಿಷ ತಡವಾಗಿ ಹೊರಡಲಿದೆ. ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
  3. ನವೆಂಬರ್ 8 ಮತ್ತು 11 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17391 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ 90 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ. ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

ಇದನ್ನೂ ಓದಿ: ವಾರಾಂತ್ಯದಲ್ಲಿ ಹುಬ್ಬಳ್ಳಿ ಮತ್ತು ಯಶವಂತಪುರ ನಡುವೆ ವಿಶೇಷ ರೈಲು

ಪ್ರಯಾಗ್​ರಾಜ್​ಗೆ ವಿಶೇಷ ರೈಲು

  1. ರೈಲು ಸಂಖ್ಯೆ: 04131 ಪ್ರಯಾಗ್‌ರಾಜ್-ಎಸ್​ಎಮ್​ವಿಟಿ ಬೆಂಗಳೂರು ವೀಕ್ಲಿ ಎಕ್ಸ್‌ಪ್ರೆಸ್ ನವೆಂಬರ್​​ 10 ರಿಂದ 17ರವರೆಗೆ ಭಾನುವಾರದಂದು ಮಾತ್ರ ಸಂಚರಿಸುತ್ತದೆ.
  2. ರೈಲು ಸಂಖ್ಯೆ: 04132 ಎಸ್​ಎಮ್​ವಿಟಿ ಬೆಂಗಳೂರು-ಪ್ರಯಾಗರಾಜ್ ವೀಕ್ಲಿ ಎಕ್ಸ್‌ಪ್ರೆಸ್ ನವೆಂಬರ್​​ 13 ರಿಂದ 20ರವರೆಗೆ ಬುಧವಾರದಂದು ಮಾತ್ರ ಸಂಚರಿಸುತ್ತದೆ.

ಈ ರೈಲು ಎರಡು ಎಸಿ ಸೆಕೆಂಡ್​​ ಕ್ಲಾಸ್​ ಬೋಗಿ, ಐದು ಎಸಿ ತ್ರಿ ಟೈಯರ್​ ಬೋಗಿ, ಐದು ಎಸಿ-ತ್ರಿ ಟೈಯರ್​ ಎಕನಾಮಿಕ್​ ಕ್ಲಾಸ್​​ ಬೋಗಿ, ನಾಲ್ಕು ಸ್ಲೀಪರ್ ಕ್ಲಾಸ್​ ಮತ್ತು ಎರಡು ಲಗೇಜ್ ಬ್ರೇಕ್‌ ಮತ್ತು ಜನರಲ್​ ಬೋಗಿಗಳು ಸೇರಿದಂತೆ ಪ್ರಸ್ತುತ ಸಂಯೋಜನೆಯು 18 ಬೋಗಿಗಳನ್ನು ಒಳಗೊಂಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ