AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು

ಯುವ ವಕೀಲರ ತಂಡವು ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಫೆಬ್ರವರಿ 16 ರಂದು ಸಲ್ಲಿಸಲಾದ ಈ ಅರ್ಜಿಯ ಕುರಿತು ಕಾರಣ ಕೇಳಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮಾರ್ಚ್ 17 ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು
ಹುಬ್ಬಳ್ಳಿ ಗಲಭೆ ಕೇಸ್‌ ಹಿಂಪಡೆಯುವ ತೀರ್ಮಾನ: ಸರ್ಕಾರದ ವಿರುದ್ಧ ತೊಡೆತಟ್ಟಿದ ಯುವ ವಕೀಲರು
ಶಿವಕುಮಾರ್ ಪತ್ತಾರ್
| Edited By: |

Updated on:Mar 06, 2025 | 3:28 PM

Share

ಹುಬ್ಬಳ್ಳಿ, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಇತ್ತೀಚೆಗೆ ಹಳೇ ಹುಬ್ಬಳ್ಳಿ ಕೇಸ್ (Hubli riots case)​ ಹಿಂಪಡೆದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ ತೀರ್ಮಾನ ಪ್ರಶ್ನಿಸಿ ಯುವ ವಕೀಲರ ತಂಡ ಹೈಕೋರ್ಟ್​​ನಲ್ಲಿ (High Court) ರೀಟ್ ಅರ್ಜಿ ಸಲ್ಲಿಸಿದೆ. ಆ ಮೂಲಕ ಸರ್ಕಾರದ ವಿರುದ್ಧ ತೊಡೆತಟ್ಟಿದ್ದಾರೆ. ಈ ಕುರಿತು ಕಾರಣ ಕೇಳಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಗೀರಿಶ್ ಭಾರದ್ವಾಜ್ ಮತ್ತು ಶ್ರೀಧರ್ ಎನ್ನುವವರಿಂದ ಫೆ 16 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ವೆಂಕಟೇಶ ದಳವಾಯಿ ಸರ್ಕಾರದ ವಿರುದ್ಧ ಹೈಕೋರ್ಟ್​​ನಲ್ಲಿ ವಾದ ಮಂಡಿಸಲಿದ್ದಾರೆ. ಹೈಕೋರ್ಟ್​ನಲ್ಲಿ ಮಾರ್ಚ್ 17 ರಂದು ರೀಟ್ ಅರ್ಜಿ ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ ಸಂಜೀವ್ ಬಡಾಸ್ಕರ ಮತ್ತು ಅಶೋಕ್ ಅಣ್ವೇಕರ್ ತಂಡದಿಂದ ಬೆಂಗಳೂರು ವಕೀಲರಿಗೆ ಸಾಥ್ ನೀಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾಂಗ್ರೆಸ್​ ಸರ್ಕಾರ; ಕಿಡಿಕಾರಿದ ಬಿಜೆಪಿ ನಾಯಕರು

ಇದನ್ನೂ ಓದಿ
Image
ಹುಬ್ಬಳ್ಳಿ ಗಲಭೆ ಕೇಸ್ ವಾಪಸ್:ರಾಷ್ಟ್ರಪತಿ, ಪ್ರಧಾನಿಗೆ ನಾರಾಯಣಸ್ವಾಮಿ ಪತ್ರ
Image
ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಪ್ರಲ್ಹಾದ್​ ಜೋಶಿ ವಾಗ್ದಾಳಿ
Image
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾಂಗ್ರೆಸ್​ ಸರ್ಕಾರ; ಕಿಡಿಕಾರಿದ ಬಿಜೆಪಿ
Image
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ

ಒಂದು ವಾಟ್ಸಪ್ ಸ್ಟೇಟಸ್​ನಿಂದ ಹೊತ್ತುಕೊಂಡಿದ್ದ ಬೆಂಕಿ ಅಂದು ರಾತ್ರಿ ದೊಡ್ಡ ಪ್ರಮಾಣದಲ್ಲಿ ಗಲಭೆಗೆ ಕಾರಣವಾಗಿತ್ತು. ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದು, ಪೊಲೀಸ್ ಠಾಣೆ ಮೇಲೆ ಗಲಭೆಕೋರರು ಕಲ್ಲು ಎಸೆದಿದ್ದರು. ಈ ಗಲಭೆ ಇಡೀ ದೇಶದ್ಯಾಂತ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಸು ಪಡೆಯುವ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಈ ಗಲಭೆಯಲ್ಲಿ ಭಾಗಿಯಾದ ಬರೋಬ್ಬರಿ 150 ಕ್ಕೂ ಹೆಚ್ಚು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಇತ್ತೀಚೆಗೆ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಹಳೇ ಹುಬ್ಬಳ್ಳಿ ಗಲಭೇ ಸೇರಿ ಕೆಲ ಕೇಸ್​ಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿತ್ತು. ಸರ್ಕಾರದ ಈ ನಿರ್ಧಾರದ ವಿರುದ್ದ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಕಾಂಗ್ರೆಸ್​ ಮೇಲೆ ಉರಿದುಬಿದಿದ್ದರು. ಹೋರಾಟಕ್ಕೂ ಕರೆ ನೀಡಿದ್ದರು.

ರಾಜ್ಯಪಾಲರಿಗೆ ಬಿಜೆಪಿ ದೂರು

ಇನ್ನು ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ಖಂಡಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು ಕೂಡ ಸಲ್ಲಿಸಿತ್ತು. ವಿಪಕ್ಷ ನಾಯಕ ಅಶೋಕ್, ಶಾಸಕ ಡಾ.ಅಶ್ವತ್ಥ್ ನಾರಾಯಣ, ಎಂಎಲ್​ಸಿ ರವಿಕುಮಾರ್ ಸೇರಿ ಹಲವು ನಾಯಕರಿದ್ದ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು. ಆ ಮೂಲಕ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Thu, 6 March 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ