AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಕುಮ್ಮಕ್ಕಿನಿಂದ ಹು-ಧಾ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿಲ್ಲ: ಮಹೇಶ್​ ಟೆಂಗಿನಕಾಯಿ

ಕಳೆದ ವರ್ಷದಂತೆ ಈ ವರ್ಷವು ಚನ್ನಮ್ಮ ಮೈದಾನದಲ್ಲಿ ಗಣಪತಿ ಆಚರಣೆಗೆ ಅನುಮತಿ ನೀಡಬೇಕು. ನಿನ್ನೆ (ಸೆ.14) ಬೆಳಗಿನಿಂದ ಶಾಸಕರು, ಮುಖಂಡರು, ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದರು ಇದುವರೆಗೂ ಅನುಮತಿ ನೀಡಿಲ್ಲ ಎಂದು ಶಾಸಕ ಮಹೇಶ್​ ಟೆಂಗಿನಕಾಯಿ ಹೇಳಿದರು.

ಸರ್ಕಾರದ ಕುಮ್ಮಕ್ಕಿನಿಂದ ಹು-ಧಾ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿಲ್ಲ: ಮಹೇಶ್​ ಟೆಂಗಿನಕಾಯಿ
ಶಾಸಕ ಮಹೇಶ್​ ಟೆಂಗಿನಕಾಯಿ
Follow us
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ

Updated on:Sep 15, 2023 | 10:05 AM

ಹುಬ್ಬಳ್ಳಿ ಸೆ.15: ವಾಣಿಜ್ಯ ನಗರಿ ಹುಬ್ಬಳ್ಳಿಯ (Hubballi) ಹೃದಯಭಾಗ ಚನ್ನಮ್ಮ ವೃತ್ತದ (Chennamma Circle) ಪಕ್ಕದಲ್ಲಿರುವ ಈದ್ಗಾ (ಚೆನ್ನಮ್ಮ ಮೈದಾನ)ದಲ್ಲಿ ಗಣೇಶ ಪ್ರತಿಷ್ಠಾಪನೆಗೆ (Ganesha Pratishtapane) ಅನುಮತಿ ನೀಡುವಂತೆ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಗುರುವಾರ ಸಾಯಂಕಾಲದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಹು-ಧಾ ಸೆಂಟ್ರಲ್ ಬಿಜೆಪಿ (BJP) ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginkai) ಮಾತನಾಡಿ ಈದ್ಗಾ ಮೈದಾನದಲ್ಲಿ (Idgah Ground) ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು. ಆ.31ರಂದು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸರ್ವಸಮ್ಮತದಿಂದ ಠರಾವು ಪಾಸ್ ಆಗಿತ್ತು. ಈಗ ಸರ್ಕಾರದ ಕುಮ್ಮಕ್ಕಿನಿಂದ ಆಯುಕ್ತರು ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಕೂಡ ಕಾನೂನು ಹೋರಾಟಕ್ಕೆ ತಯಾರಿದ್ದೇವೆ. ಕಳೆದ ವರ್ಷದಂತೆ ಈ ವರ್ಷವು ಚನ್ನಮ್ಮ ಮೈದಾನದಲ್ಲಿ ಗಣಪತಿ ಆಚರಣೆಗೆ ಅನುಮತಿ ನೀಡಬೇಕು. ನಿನ್ನೆ (ಸೆ.14) ಬೆಳಗಿನಿಂದ ಶಾಸಕರು, ಮುಖಂಡರು, ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದರು ಇದುವರೆಗೂ ಅನುಮತಿ ನೀಡಿಲ್ಲ ಎಂದರು.

ಇದನ್ನೂ ಓದಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ಜೋರು; ರಾಜ್ಯ ಸರ್ಕಾರಕ್ಕೆ ಬೆಲ್ಲದ ಎಚ್ಚರಿಕೆ

ಚನ್ನಮ್ಮ ಮೈದಾನದಲ್ಲಿ ಧ್ವಜಾರೋಹಣ ಮಾಡಬೇಕಾದರೂ ಹೀಗೆಯೇ ಮೊಂಡುತನ ಮಾಡಿದರು. ಕೇವಲ ಗಣಪತಿ ಹಬ್ಬ ಅಲ್ಲಾ, ಎಲ್ಲಾ ಆಚರಣೆಗೆ ಅನುಮತಿ ಕೊಡಬೇಕು ಎಂದು ಕಳೆದ ಬಾರಿ ಹೈಕೋರ್ಟ್​ನಿಂದ ಆದೇಶ ನೀಡಿದೆ. ಸರ್ಕಾರ ಆಯುಕ್ತರಿಗೆ ಒತ್ತಡ ಹೇರುತ್ತಿದೆ. ಇದನ್ನು ಬಿಟ್ಟು ಸರ್ಕಾರ ಗಣಪತಿ ಆಚರಣೆಗೆ ಅನುಕೂಲ ಮಾಡಿ ಕೊಡಬೇಕು ಎಂದು ಒತ್ತಾಯಿಸಿದರು.

ಅಂಜುಮನ್ ಸಂಸ್ಥೆಯವರು ಅನುಮತಿ ಕೊಡಬಾರದು ಅಂತ ಕಳೆದ ಬಾರಿ ಕೂಡ ಕೋರ್ಟ್​ಗೆ ಹೋಗಿದ್ದರು. ಎಲ್ಲಾ ಕಾರ್ಯಕ್ರಮ ಪಾಲಿಕೆ ನಿರ್ಧಾರ ಮಾಡಬೇಕು ಅಂತ ಕೋರ್ಟ್ ನಿರ್ದೇಶನ ಇದೆ. ಇದು ಗೊತ್ತಿದ್ದರು ಪದೇ ಪದೇ ಅಂಜುಮನ್ ಅವರು ಕೋರ್ಟ್​​ಗೆ ಹೋಗುವುದು ಸರಿ ಅಲ್ಲ. ಏನೇ ಆಗಲಿ ನಾವು ಗಣಪತಿ ಕೂರಿಸಿಯೇ ಕೂರಿಸುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:00 am, Fri, 15 September 23

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ