AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಇಲಾಖೆಯ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!
ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 30, 2026 | 1:36 PM

Share

ಹುಬ್ಬಳ್ಳಿ, ಮಾರ್ಚ್​ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ.

60 ಲಕ್ಷ ರೂ. ಹಣಕ್ಕೆ ಬೇಡಿಕೆ

ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ. ತೆರಿಗೆ ಪರಿಶೀಲನೆ (ಆಡಿಟ್), ಜಿಎಸ್‌ಟಿ ಸಂಬಂಧಿತ ಪ್ರಕರಣಗಳ ಪರಿಶೀಲನೆ ಹಾಗೂ ವ್ಯಾಪಾರಿಗಳ ತೆರಿಗೆ ಬಾಕಿ ವಿಚಾರಗಳನ್ನು ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿದೆ. ಆದರೆ ಇವರು, ವಿಶ್ವನಾಥ್ ನಾಯಕ್ ಎಂಬ ಪೆಟ್ರೋಲ್ ಬಂಕ್ ಮಾಲೀಕರಿಗೆ 60 ಲಕ್ಷ ರೂ.ಜಿಎಸ್‌ಟಿ ಹಣ ಕಟ್ಟಬೇಕು ಎಂದು ನೋಟಿಸ್ ನೀಡಿದ್ದಲ್ಲದೆ ಪ್ರಕರಣವನ್ನು ಸುಗಮಗೊಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರಿನಿಂದ ಬಂದ ಆರು ಅಧಿಕಾರಿಗಳ ತಂಡ

ಈ ಕುರಿತು ವಿಶ್ವನಾಥ್ ನಾಯಕ್ ಹುಬ್ಬಳ್ಳಿಯಿಂದ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೂಕ್ತ ಯೋಜನೆಯೊಂದಿಗೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಬಂದ ಆರು ಅಧಿಕಾರಿಗಳ ತಂಡ ಭರತ್​ರನ್ನು ಬಲೆಗೆ ಬೀಳಿಸಿದೆ. ಮುಂಜಾನೆ ಸುಮಾರು 11:30ರ ವೇಳೆಗೆ ಹುಬ್ಬಳ್ಳಿ ನವನಗರದಲ್ಲಿರುವ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಭರತ್ ಹೆಗಡೆಯನ್ನು ಬಲೆಗೆ ಬೀಳಿಸಲಾಗಿದ್ದು, ಘಟನೆ ನಂತರ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ